ಜಿಲ್ಲೆಯಲ್ಲಿ ಪಂಚಮಿತ್ರ ಪೋರ್ಟಲ್ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಂದ ಲೋಕಾರ್ಪಣೆ ಗ್ರಾಮ ಪಂಚಾಯತಿಗಳ ಹಲವು ಸೇವೆ ಹಾಗೂ ಮಾಹಿತಿ ಪಂಚಮಿತ್ರ ಪೋರ್ಟಲ್‍ನಲ್ಲಿ ಲಭ್ಯ

by | 05/03/24 | ಸುದ್ದಿ

ಚಿತ್ರದುರ್ಗ ಮಾ. 05
ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ಸೇವೆಗಳು ಒಂದೇ ವೇದಿಕೆಯಲ್ಲಿ ಲಭಿಸುವಂತ ಪಂಚಮಿತ್ರ ನೂತನ ವೆಬ್ ಪೋರ್ಟಲ್ ಅನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮಂಗಳವಾರ ಲೋಕಾರ್ಪಣೆಗೊಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಪಂಚಮಿತ್ರ ನೂತನ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು, ಸಾರ್ವಜನಿಕರು ತಮಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಪಂಚಮಿತ್ರ ನೂತನ ಪೋರ್ಟಲ್ ಅತ್ಯಂತ ಜನಸ್ನೇಹಿಯಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಮಾತನಾಡಿ, ಗ್ರಾಮೀಣ ಭಾಗದವರು ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಹಲವು ಮಾಹಿತಿ ಮತ್ತು ವಿವರ ಪಡೆಯುವ ಸಲುವಾಗಿ ಹಲವಾರು ವೆಬ್ ಸೈಟ್ ಮತ್ತು ಪೋರ್ಟಲ್ ಗಳಲ್ಲಿ ಭೇಟಿ ನೀಡಬೇಕಾಗಿತ್ತು. ಅಲ್ಲದೇ, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಲು ಯಾವುದೇ ನಿರ್ದಿಷ್ಟವಾದ ವೆಬ್ ಸೈಟ್ ಅಥವಾ ಪೋರ್ಟಲ್ ಗಳು ಇರುವುದಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, “ಪಂಚಮಿತ್ರ” ಎಂಬ ಒಂದೇ ವೇದಿಕೆಯನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಯಿಂದ ಅಭಿವೃದ್ದಿ ಪಡಿಸಿ, ಅನುμÁ್ಠನಗೊಳಿಸಲಾಗಿದೆ. “ಪಂಚಮಿತ್ರ” ಪೆÇೀರ್ಟಲ್ ಮೂಲಕ ಈ ಕೆಳಗಿನ ಗ್ರಾಮ ಪಂಚಾಯತಿಗಳ ಮಾಹಿತಿ ಮತ್ತು ವಿವರಗಳನ್ನು ಪಡೆಯಬಹುದಾಗಿದೆ. ಸಾರ್ವಜನಿಕರು ಪಂಚಮಿತ್ರ ಪೋರ್ಟಲ್‍ನ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪಂಚಮಿತ್ರ ಪೋರ್ಟಲ್‍ನಲ್ಲಿ ಏನೇನು ಲಭ್ಯ :
ಚುನಾಯಿತ ಪ್ರತಿನಿಧಿಗಳ ವಿವರಗಳು, ಸಿಬ್ಬಂದಿಗಳ ವಿವರಗಳು, ಪೂರ್ಣಗೊಂಡ ಗ್ರಾಮ ಪಂಚಾಯತ್ ಸಭೆಗಳ ನಡಾವಳಿಗಳು, ಗ್ರಾಮ ಪಂಚಾಯತಿಗಳ ಮುಂಬರುವ ಸಭೆಗಳ ಮಾಹಿತಿ, ಆದಾಯ ಸಂಗ್ರಹ ವಿವರಗಳು, ಸೇವೆಗಳ ವಿವರಗಳು, ಸ್ವ ಸಹಾಯ ಗುಂಪಿನ ವಿವರಗಳು, ಗ್ರಾಮ ಪಂಚಾಯತ್ಗಳ ಕಾರ್ಯಕ್ರಮಗಳು ಮತ್ತು ಉಪಕ್ರಮಗಳು ಸೇರಿದಂತೆ ವಿವಿಧ ಮಾಹಿತಿಗಳು ಲಭ್ಯವಿದೆ. ಅಲ್ಲದೆ ಪೋರ್ಟಲ್ ಮೂಲಕ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಈ ಕೆಳಗಿನ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ಸೇವೆಗಳನ್ನು ಪಡೆಯಬಹುದಾಗಿದೆ. ಅರ್ಜಿಗಳ ಸ್ಥಿತಿಗತಿಯನ್ನು ಸಹ ಪರಿಶೀಲಿಸಬಹುದಾಗಿದೆ.

ಲಭ್ಯವಿರುವ ಸೇವೆಗಳು :
ಕಟ್ಟಡ ನಿರ್ಮಾಣ ಲೈಸೆನ್ಸ್, ಹೊಸ ನೀರು ಸರಬರಾಜು ಸಂಪರ್ಕ, ನೀರು ಸರಬರಾಜಿನ ಸಂಪರ್ಕ ಕಡಿತ, ಕುಡಿಯುವ ನೀರಿನ ನಿರ್ವಹಣೆ, ಬೀದಿ ದೀಪದ ನಿರ್ವಹಣೆ, ಗ್ರಾಮ ನೈರ್ಮಲ್ಯದ ನಿರ್ವಹಣೆ, ವ್ಯಾಪಾರ ಪರವಾನಗಿ, ಸ್ವಾಧೀನ ಪ್ರಮಾಣಪತ್ರ, ರಸ್ತೆ ಅಗೆವುದಾಕ್ಕಾಗಿ ಅನುಮತಿ, ಕೈಗಾರಿಕಾ/ಕೃಷಿ ಆಧಾರಿತ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿ, ನಿರಾಕ್ಷೇಪಣಾ ಪತ್ರ, ನರೇಗಾದಡಿ ಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಣೆ, ಕಾರ್ಮಿಕರಿಗೆ ಉದ್ಯೋಗ ಒದಗಿಸುವುದು, ಹೊಸ ಅಥವಾ ಅಸ್ತಿತ್ವದಲ್ಲಿರುವ ದೂರಸಂಪರ್ಕ ಮೂಲಸೌಕರ್ಯ ಗೋಪುರಕ್ಕೆ ಅನುಮತಿ/ನಿಯಮಿತಗೊಳಿಸುವಿಕೆ, ಕೇಬಲ್ ಮೂಲಸೌಕರ್ಯ/ಭೂಗತ ಕೇಬಲ್ ಮೂಲಸೌಕರ್ಯಕ್ಕಾಗಿ ಅನುಮತಿ/ನಿಯಮಿತಗೊಳಿಸುವಿಕೆ, ನಮೂನೆ 9/11ಎ, ನಮೂನೆ 11ಬಿ ಸೇರಿದಂತೆ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದಂತೆ ಕುಡಿಯುವ ನೀರು, ರಸ್ತೆ ಮತ್ತು ಸೇತುವೆಗಳ ದುರಸ್ತಿ, ನರೇಗಾ ಯೋಜನೆಗೆ ಮತ್ತು ಪಂಚಾಯತ್ ರಾಜ್ ವಿಷಯಗಳಿಗೆ ಸಂಬಂಧಿತ ಹಲವು 78 ಬಗೆಯ ಕುಂದುಕೊರತೆಗಳನ್ನು ದಾಖಲಿಸಿ, ನಿವಾರಣೆ ಪಡೆಯಬಹುದಾಗಿದೆ ಹಾಗೂ ಕುಂದುಕೊರತೆಯ ಸ್ಥಿತಿಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಬಹುದಾಗಿದೆ.
ಉಪವಿಭಾಗಾಧಿಕಾರಿ ಕಾರ್ತಿಕ್, ಜಂಟಿಕೃಷಿ ನಿರ್ದೇಶಕ ಮಂಜುನಾಥ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್ ಸೇರಿದಂತೆ ತಾಲ್ಲೂಕುಗಳ ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page