ಜಿಲ್ಲೆಯ ಮತದಾರರು ಲೋಕಸಭಾ ಚುನಾವಣೆಯಲ್ಲಿ ಆಶೀರ್ವದಿಸಿದಲ್ಲಿ ಜಿಲ್ಲೆಯ ಚಿತ್ರಣ ಬದಲು ಮಾಡುತ್ತೇನೆ: ಡಿ ಕೃಷ್ಣಮೂರ್ತಿ .

by | 08/03/24 | ಸುದ್ದಿ

ಚಳ್ಳಕೆರೆ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಲೋಕಸಭೆಯ ಚುನಾವಣೆಯು ಕಾವು ಪಡೆಯುತ್ತಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಇದಕ್ಕೆ ತಾಜಾ ಉದಾಹರಣೆ, ಜಿಲ್ಲೆಯ ಹಲವು ಕಡೆಗಳಲ್ಲಿ ಗ್ರಾಮೀಣ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ಡಿ ಕೃಷ್ಣಮೂರ್ತಿ ಎಂಬುವವರು ರಾಜಕೀಯ ಅಗ್ನಿಪರೀಕ್ಷೆಗೆ ಅಣಿಯಾಗುತ್ತಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ಗ್ರಾಮೀಣ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕನಾಗಿ ಸೇವೆ ಸಲ್ಲಿಸಿದ್ದು ರೈತರ ಸಮಸ್ಯೆಗಳನ್ನು ಹತ್ತಿರದಿಂದ ಬಲವನಾಗಿದ್ದೇನೆ ಈಗಾಗಲೇ ರಾಷ್ಟ್ರೀಯ ಪಕ್ಷಗಳ ಜೊತೆ ಸಂಪರ್ಕ ಪಡೆಯಲು ಯತ್ನಿಸುತ್ತಿದ್ದು ಯಾವುದೇ ಪಕ್ಷಗಳು ಟಿಕೆಟ್ ನೀಡಿದರು ಸ್ಪರ್ದಿಸಲು ಸಿದ್ಧನಿದ್ದೇನೆ ಒಂದು ವೇಳೆ ಪಕ್ಷದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಮುಂದುವರೆದು ಮಾತನಾಡುತ್ತಾ ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಜಿಲ್ಲೆಯ ಯೋಜನೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆಯಾಗಿ ಚಿತ್ರದುರ್ಗವು ಗುರುತಿಸಿಕೊಂಡಿದೆ ಮತದಾರರು ನನಗೆ ಆಶೀರ್ವಾದ ಮಾಡಿದ್ದೆ ಆದಲ್ಲಿ ಜಿಲ್ಲೆಯ ಚಿತ್ರಣವನ್ನು ಬದಲಿಸಲು ಅವಿರತ ಶ್ರಮ ವಹಿಸಲಾಗುವುದು ಧಾರವಾಡದ ಕೃಷಿ ವಿವಿಯಲ್ಲಿ ಕೃಷಿ ಪದವಿ ಮತ್ತು ಎಲ್‌ಎಲ್‌ಬಿ ಪದವಿ ಪಡೆದಿದ್ದು ಜಿಲ್ಲೆಯಲ್ಲಿ ಸ್ಥಳೀಯ ಅಭ್ಯರ್ಥಿಗಳು ಗೆಲ್ಲದ ಕಾರಣ ಜಿಲ್ಲೆ ಅಭಿವೃದ್ದಿ ಕುಂಠಿತವಾಗಿದೆ ನಾನು ಚಳ್ಳಕೆರೆ ತಾಲೂಕಿನ ನಂದೇನಹಳ್ಳಿ ಗ್ರಾಮದವನಾಗಿದ್ದು ಸ್ಥಳೀಯನಾಗಿರುವುದರಿಂದ ಜಿಲ್ಲೆಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತೇನೆ ರಾಜಕೀಯ ಕಲುಷಿತಗೊಂಡಿರುವುದರಿಂದ ಮತದಾರರು ಆಮಿಷಗಳಿಗೆ ಒಳಗಾಗದೆ ಚುನಾವಣೆಯಲ್ಲಿ ಮತದಾನವೆಂಬ ಅಸ್ತ್ರವನ್ನು ಸರಿಯಾದ ರೀತಿಯಲ್ಲಿ ಪ್ರಯೋಗಿಸಿದ್ದಲ್ಲಿ ಚಿತ್ರದುರ್ಗ ಜಿಲ್ಲೆ ಚಿತ್ರಣ ಬದಲಾಗುವುದರಲ್ಲಿ ಸಂಶಯವಿಲ್ಲ ಈ ನಿಟ್ಟಿನಲ್ಲಿ ಯುವ ಮತದಾರರು ಸೇರಿದಂತೆ ಮಹಿಳಾ ಮತ್ತು ಪುರುಷ ಮತದಾರರು ಆಲೋಚಿಸಬೇಕಾಗಿದೆ ಎಂದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page