ಚಳ್ಳಕೆರೆ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಲೋಕಸಭೆಯ ಚುನಾವಣೆಯು ಕಾವು ಪಡೆಯುತ್ತಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಇದಕ್ಕೆ ತಾಜಾ ಉದಾಹರಣೆ, ಜಿಲ್ಲೆಯ ಹಲವು ಕಡೆಗಳಲ್ಲಿ ಗ್ರಾಮೀಣ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ಡಿ ಕೃಷ್ಣಮೂರ್ತಿ ಎಂಬುವವರು ರಾಜಕೀಯ ಅಗ್ನಿಪರೀಕ್ಷೆಗೆ ಅಣಿಯಾಗುತ್ತಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ಗ್ರಾಮೀಣ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕನಾಗಿ ಸೇವೆ ಸಲ್ಲಿಸಿದ್ದು ರೈತರ ಸಮಸ್ಯೆಗಳನ್ನು ಹತ್ತಿರದಿಂದ ಬಲವನಾಗಿದ್ದೇನೆ ಈಗಾಗಲೇ ರಾಷ್ಟ್ರೀಯ ಪಕ್ಷಗಳ ಜೊತೆ ಸಂಪರ್ಕ ಪಡೆಯಲು ಯತ್ನಿಸುತ್ತಿದ್ದು ಯಾವುದೇ ಪಕ್ಷಗಳು ಟಿಕೆಟ್ ನೀಡಿದರು ಸ್ಪರ್ದಿಸಲು ಸಿದ್ಧನಿದ್ದೇನೆ ಒಂದು ವೇಳೆ ಪಕ್ಷದ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಮುಂದುವರೆದು ಮಾತನಾಡುತ್ತಾ ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಜಿಲ್ಲೆಯ ಯೋಜನೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಜಿಲ್ಲೆಯಾಗಿ ಚಿತ್ರದುರ್ಗವು ಗುರುತಿಸಿಕೊಂಡಿದೆ ಮತದಾರರು ನನಗೆ ಆಶೀರ್ವಾದ ಮಾಡಿದ್ದೆ ಆದಲ್ಲಿ ಜಿಲ್ಲೆಯ ಚಿತ್ರಣವನ್ನು ಬದಲಿಸಲು ಅವಿರತ ಶ್ರಮ ವಹಿಸಲಾಗುವುದು ಧಾರವಾಡದ ಕೃಷಿ ವಿವಿಯಲ್ಲಿ ಕೃಷಿ ಪದವಿ ಮತ್ತು ಎಲ್ಎಲ್ಬಿ ಪದವಿ ಪಡೆದಿದ್ದು ಜಿಲ್ಲೆಯಲ್ಲಿ ಸ್ಥಳೀಯ ಅಭ್ಯರ್ಥಿಗಳು ಗೆಲ್ಲದ ಕಾರಣ ಜಿಲ್ಲೆ ಅಭಿವೃದ್ದಿ ಕುಂಠಿತವಾಗಿದೆ ನಾನು ಚಳ್ಳಕೆರೆ ತಾಲೂಕಿನ ನಂದೇನಹಳ್ಳಿ ಗ್ರಾಮದವನಾಗಿದ್ದು ಸ್ಥಳೀಯನಾಗಿರುವುದರಿಂದ ಜಿಲ್ಲೆಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತೇನೆ ರಾಜಕೀಯ ಕಲುಷಿತಗೊಂಡಿರುವುದರಿಂದ ಮತದಾರರು ಆಮಿಷಗಳಿಗೆ ಒಳಗಾಗದೆ ಚುನಾವಣೆಯಲ್ಲಿ ಮತದಾನವೆಂಬ ಅಸ್ತ್ರವನ್ನು ಸರಿಯಾದ ರೀತಿಯಲ್ಲಿ ಪ್ರಯೋಗಿಸಿದ್ದಲ್ಲಿ ಚಿತ್ರದುರ್ಗ ಜಿಲ್ಲೆ ಚಿತ್ರಣ ಬದಲಾಗುವುದರಲ್ಲಿ ಸಂಶಯವಿಲ್ಲ ಈ ನಿಟ್ಟಿನಲ್ಲಿ ಯುವ ಮತದಾರರು ಸೇರಿದಂತೆ ಮಹಿಳಾ ಮತ್ತು ಪುರುಷ ಮತದಾರರು ಆಲೋಚಿಸಬೇಕಾಗಿದೆ ಎಂದರು.
0 Comments