ಜಿಲ್ಲೆಯ ವಿವಿಧೆಡೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ದಿಢೀರ್ ಭೇಟಿ, ಪರಿಶೀಲನೆ ನ್ಯೂನತೆ ಸರಿಪಡಿಸಿಕೊಳ್ಳಲು ಸೂಚನೆ.

by | 22/12/23 | ಆರೋಗ್ಯ


ಚಿತ್ರದುರ್ಗ ಡಿ. 22
ಪ್ರಸವಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ (ಪಿಸಿ & ಪಿಎನ್‍ಡಿಟಿ) ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯು ಪಿಸಿ&ಪಿಎನ್‍ಡಿಟಿ ತಂಡದೊಂದಿಗೆ ಜಿಲ್ಲೆಯ ವಿವಿಧೆಡೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು, ಅಲ್ಲದೆ ಅಲ್ಲಿ ಕಂಡುಬಂದ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚನೆ ನೀಡಿತು.
ಪಿಸಿ&ಪಿಎನ್‍ಡಿಟಿ ಕಾಯ್ದೆ ಅನುಷ್ಠಾನ ಸಂಬಂಧ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಪ್ರಸಾದ್ ಹಾಗೂ ಸಮಿತಿಯ ಸದಸ್ಯರಾದ ಡಾ. ಸತ್ಯನಾರಾಯಣ ಅವರು ಚಿತ್ರದುರ್ಗ ನಗರದ ಗುರು ಕೊಟ್ಟೂರೇಶ್ವರ ಸ್ಕ್ಯಾನಿಂಗ್ ಸೆಂಟರ್ ಮತ್ತು ಖುಷಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ, ಇದುವರೆಗೂ ಸ್ಕ್ಯಾನಿಂಗ್ ಮಾಡಿರುವ ಪ್ರಕರಣಗಳ ಬಗ್ಗೆ ದಾಖಲಾತಿ ಮತ್ತು ವಹಿ, ಎಂ.ಟಿ.ಪಿ. ದಾಖಲಾತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಕಾಯ್ದೆಯನುಸಾರ “ಭ್ರೂಣ ಲಿಂಗವನ್ನು ಬಹಿರಂಗ ಪಡಿಸುವುದು ಕಾನೂನಿನ ಮೇರೆಗೆ ನಿಷೇಧಿಸಲಾಗಿದೆ” ಎಂಬುದಾಗಿ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಸೂಚನೆಯುಳ್ಳ ಫಲಕವನ್ನು ಸಾರ್ವಜನಿಕರ ಮಾಹಿತಿಗಾಗಿ ಕಾಣುವ ರೀತಿಯಲ್ಲಿ ಪ್ರದರ್ಶಿಸಬೇಕು. ಸ್ಕ್ಯಾನಿಂಗ್ ಮಾಡಲಾಗುವ ಕೊಠಡಿ ಒಳಗೆ ಚಿಕಿತ್ಸಾ ದರ ಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು, ನೊಂದಣಿ ರಿಜಿಸ್ಟರ್ ಮತ್ತು ಶಿಫಾರಸು ಚೀಟಿಗಳನ್ನು ಸಮರ್ಪಕವಾಗಿ ದಾಖಲಿಸಿ ನಿರ್ವಹಿಸಬೇಕು. ಪಿಸಿ & ಪಿಎನ್‍ಡಿಟಿ ಕಾಯ್ದೆ 1994 ಮತ್ತು ತಿದ್ದುಪಡಿಗಳ ಕಾಯ್ದೆ ಪುಸ್ತಕವನ್ನು ಸೆಂಟರ್‍ನಲ್ಲಿ ಇಡಬೇಕು. ಎಂದು ಸೂಚನೆ ನೀಡಿದರು.
ಹೊಸದುರ್ಗದ ವಿನಾಯಕ ಸ್ಕ್ಯಾನಿಂಗ್ ಸೆಂಟರ್, ವಿನಾಯಕ ಹಾಸ್ಪಿಟಲ್, ಮಾರುತಿ ನರ್ಸಿಂಗ್ ಹೋಂ, ಶಾರದ ನಸಿಂಗ್ ಹೋಂ ಗಳಿಗೆ ದಿಢೀರ್ ಭೇಟಿ ನೀಡಿದ ಸಮಿತಿಯ ತಂಡವು, ಇಲ್ಲಿಯೂ ಕಂಡ ಕೆಲವು ನ್ಯೂನತೆಗಳನ್ನು ಸರಿಪಡಿಸಲು ಸೂಚನೆ ನೀಡಿತು. ಪಿ.ಸಿ.ಪಿ.ಎನ್.ಡಿ.ಟಿ. ಕಾಯ್ದೆ 1994 ಮತ್ತುತಿದ್ದುಪಡಿಗಳ ಕಾಯ್ದೆ ಪುಸ್ತಕವನ್ನು ಇಡುವುದು, ಮಾಹಿತಿ ಫಲಕ ಅಳವಡಿಸುವುದು, ಸ್ಕ್ಯಾನಿಂಗ್‍ಗೆ ಸಂಬಂಧಿಸಿದ ಸಂಪೂರ್ನ ಮಾಹಿತಿ ಇಟ್ಟುಕೊಳ್ಳುವುದು, ಪ್ರಸೂತಿ ಮತ್ತು ಹೆರಿಗೆ ತಜ್ಞರ ಭೇಟಿ ಸಮಯವನ್ನು ಸಾರ್ವಜನಿಕರಿಗೆ ಕಾಣಿಸುವಂತೆ ಪ್ರದರ್ಶಿಸುವುದು, ಎಂ.ಟಿ.ಪಿ. ಗೆ ಸಂಬಂಧಿಸಿದ ಎಲ್ಲ ದಾಖಲಾತಿಯನ್ನು ಇರಿಸುವಂತೆ ನಿರ್ದೇಶನ ನೀಡಿತು.
ಬರುವ ದಿನಗಳಲ್ಲಿ ಸಮಿತಿಯು ನಿಯಮಾನುಸಾರ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಸ್ಕ್ಯಾನಿಂಗ್ ಸೆಂಟರ್‍ಗಳು ಪಿಸಿ & ಪಿಎನ್‍ಡಿಟಿ ಕಾಯ್ದೆಯಲ್ಲಿನ ಎಲ್ಲ ಅಂಶಗಳನ್ನು ಚಾಚುತಪ್ಪದೆ ಪಾಲಿಸುವಂತೆ ಅಧಿಕಾರಿಗಳು ಸೂಚನೆ ನೀಡಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page