ಜಿಲ್ಲೆಯ ವಿವಿಧೆಡೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ದಿಢೀರ್ ಭೇಟಿ, ಪರಿಶೀಲನೆ ನ್ಯೂನತೆ ಸರಿಪಡಿಸಿಕೊಳ್ಳಲು ಸೂಚನೆ.

by | 22/12/23 | ಆರೋಗ್ಯ


ಚಿತ್ರದುರ್ಗ ಡಿ. 22
ಪ್ರಸವಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ (ಪಿಸಿ & ಪಿಎನ್‍ಡಿಟಿ) ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯು ಪಿಸಿ&ಪಿಎನ್‍ಡಿಟಿ ತಂಡದೊಂದಿಗೆ ಜಿಲ್ಲೆಯ ವಿವಿಧೆಡೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು, ಅಲ್ಲದೆ ಅಲ್ಲಿ ಕಂಡುಬಂದ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚನೆ ನೀಡಿತು.
ಪಿಸಿ&ಪಿಎನ್‍ಡಿಟಿ ಕಾಯ್ದೆ ಅನುಷ್ಠಾನ ಸಂಬಂಧ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಪ್ರಸಾದ್ ಹಾಗೂ ಸಮಿತಿಯ ಸದಸ್ಯರಾದ ಡಾ. ಸತ್ಯನಾರಾಯಣ ಅವರು ಚಿತ್ರದುರ್ಗ ನಗರದ ಗುರು ಕೊಟ್ಟೂರೇಶ್ವರ ಸ್ಕ್ಯಾನಿಂಗ್ ಸೆಂಟರ್ ಮತ್ತು ಖುಷಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ, ಇದುವರೆಗೂ ಸ್ಕ್ಯಾನಿಂಗ್ ಮಾಡಿರುವ ಪ್ರಕರಣಗಳ ಬಗ್ಗೆ ದಾಖಲಾತಿ ಮತ್ತು ವಹಿ, ಎಂ.ಟಿ.ಪಿ. ದಾಖಲಾತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಕಾಯ್ದೆಯನುಸಾರ “ಭ್ರೂಣ ಲಿಂಗವನ್ನು ಬಹಿರಂಗ ಪಡಿಸುವುದು ಕಾನೂನಿನ ಮೇರೆಗೆ ನಿಷೇಧಿಸಲಾಗಿದೆ” ಎಂಬುದಾಗಿ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಸೂಚನೆಯುಳ್ಳ ಫಲಕವನ್ನು ಸಾರ್ವಜನಿಕರ ಮಾಹಿತಿಗಾಗಿ ಕಾಣುವ ರೀತಿಯಲ್ಲಿ ಪ್ರದರ್ಶಿಸಬೇಕು. ಸ್ಕ್ಯಾನಿಂಗ್ ಮಾಡಲಾಗುವ ಕೊಠಡಿ ಒಳಗೆ ಚಿಕಿತ್ಸಾ ದರ ಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು, ನೊಂದಣಿ ರಿಜಿಸ್ಟರ್ ಮತ್ತು ಶಿಫಾರಸು ಚೀಟಿಗಳನ್ನು ಸಮರ್ಪಕವಾಗಿ ದಾಖಲಿಸಿ ನಿರ್ವಹಿಸಬೇಕು. ಪಿಸಿ & ಪಿಎನ್‍ಡಿಟಿ ಕಾಯ್ದೆ 1994 ಮತ್ತು ತಿದ್ದುಪಡಿಗಳ ಕಾಯ್ದೆ ಪುಸ್ತಕವನ್ನು ಸೆಂಟರ್‍ನಲ್ಲಿ ಇಡಬೇಕು. ಎಂದು ಸೂಚನೆ ನೀಡಿದರು.
ಹೊಸದುರ್ಗದ ವಿನಾಯಕ ಸ್ಕ್ಯಾನಿಂಗ್ ಸೆಂಟರ್, ವಿನಾಯಕ ಹಾಸ್ಪಿಟಲ್, ಮಾರುತಿ ನರ್ಸಿಂಗ್ ಹೋಂ, ಶಾರದ ನಸಿಂಗ್ ಹೋಂ ಗಳಿಗೆ ದಿಢೀರ್ ಭೇಟಿ ನೀಡಿದ ಸಮಿತಿಯ ತಂಡವು, ಇಲ್ಲಿಯೂ ಕಂಡ ಕೆಲವು ನ್ಯೂನತೆಗಳನ್ನು ಸರಿಪಡಿಸಲು ಸೂಚನೆ ನೀಡಿತು. ಪಿ.ಸಿ.ಪಿ.ಎನ್.ಡಿ.ಟಿ. ಕಾಯ್ದೆ 1994 ಮತ್ತುತಿದ್ದುಪಡಿಗಳ ಕಾಯ್ದೆ ಪುಸ್ತಕವನ್ನು ಇಡುವುದು, ಮಾಹಿತಿ ಫಲಕ ಅಳವಡಿಸುವುದು, ಸ್ಕ್ಯಾನಿಂಗ್‍ಗೆ ಸಂಬಂಧಿಸಿದ ಸಂಪೂರ್ನ ಮಾಹಿತಿ ಇಟ್ಟುಕೊಳ್ಳುವುದು, ಪ್ರಸೂತಿ ಮತ್ತು ಹೆರಿಗೆ ತಜ್ಞರ ಭೇಟಿ ಸಮಯವನ್ನು ಸಾರ್ವಜನಿಕರಿಗೆ ಕಾಣಿಸುವಂತೆ ಪ್ರದರ್ಶಿಸುವುದು, ಎಂ.ಟಿ.ಪಿ. ಗೆ ಸಂಬಂಧಿಸಿದ ಎಲ್ಲ ದಾಖಲಾತಿಯನ್ನು ಇರಿಸುವಂತೆ ನಿರ್ದೇಶನ ನೀಡಿತು.
ಬರುವ ದಿನಗಳಲ್ಲಿ ಸಮಿತಿಯು ನಿಯಮಾನುಸಾರ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಸ್ಕ್ಯಾನಿಂಗ್ ಸೆಂಟರ್‍ಗಳು ಪಿಸಿ & ಪಿಎನ್‍ಡಿಟಿ ಕಾಯ್ದೆಯಲ್ಲಿನ ಎಲ್ಲ ಅಂಶಗಳನ್ನು ಚಾಚುತಪ್ಪದೆ ಪಾಲಿಸುವಂತೆ ಅಧಿಕಾರಿಗಳು ಸೂಚನೆ ನೀಡಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page