![](https://janadhwani.in/wp-content/uploads/2024/02/IMG-20240209-WA0321.jpg)
ಚಳ್ಳಕೆರೆ :ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ತಹಸೀಲ್ದಾರ್ ರೆಹಾನ್ ಪಾಷ ಹೇಳಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ಧತಿ ಪದ್ಧತಿ ದಿನಾಚರಣೆ ಜಾತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ
ಕನಿಷ್ಠ ಕೂಲಿ ಇಲ್ಲದೆ ಜೀತದಾಳುಗಳು ಮತ್ತು ಅವರ ಕುಟುಂಬಗಳು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತವೆ. ಆದರೆ ಅವರಿಗೆ ಶಿಕ್ಷಣದ ಕೊರತೆಯಿಂದ ಜೀತದಿಂದ ಹೊರಬಂದು ಸರಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇಂಥ ಪ್ರಕರಣಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದಲ್ಲಿ ಸರಕಾರದ ಸೌಲಭ್ಯ ಕಲ್ಪಿಸುವ ಮೂಲಕ ಜೀತ ಮುಕ್ತಗೊಳಿಸಬಹುದು. ಅನೇಕ ಸಾಮಾಜಿಕ ಅನಿಷ್ಠಗಳಂತೆ ಜೀತ ಪದ್ಧತಿಯೂ ಅನಿಷ್ಠ ಪದ್ಧತಿ. ಇದನ್ನು ಹೋಗಲಾಡಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ.
ಈ ಅನಿಷ್ಠ ಪದ್ಧತಿ ನಿರ್ಮೂಲನೆಯ ಉದ್ದೇಶಕ್ಕಾಗಿ 1993 ರಲ್ಲಿ ಸರಕಾರೇತರ ಸಂಸ್ಥೆ ಆರಂಭವಾಗಿದ್ದು1976 ಕಾಯಿದೆಯಡಿ ಪುನರ್ವಸತಿ ಕಲ್ಪಿಸಲಾಗಿದೆ.ಜೀತ ಪ್ರಕರಣಗಳು ಸಾಕಷ್ಟಿದ್ದರೂ ಪ್ರಕರಣಗಳು ಮಾತ್ರ ಬೆಳಕಿಗೆ ಬರುತ್ತಿಲ್ಲ. ಈ ಕಾರಣದಿಂದಲೇ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಇಲಾಖೆ, ಪಂಚಾಯತ್ ರಾಜ ಇಲಾಖೆ, ಸಮಾಜ ಕಲ್ಯಾಣ ಮತ್ತು ಮಹಿಳಾ ಮತ್ತು ಕಲ್ಯಾಣ ಇಲಾಖೆಗಳ ನೌಕರರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿ ಕುಸುಮ ಸಿ ಡಿ ಪಿ ಓ ಹರಿಪ್ರಸಾದ್ ಪಶು ಇಲಾಖೆ ಅಧಿಕಾರಿ ರೇವಣ್ಣ ದಲಿತ ಸಮಾಜದ ಮುಖಂಡ ಕುಮಾರಸ್ವಾಮಿ ಶಿವಮೂರ್ತಿ ಪ್ರಕಾಶ್ ಶ್ರೀನಿವಾಸ್ ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments