ಜೀತ ಪದ್ಧತಿ ನಿರ್ಮೂಲನೆ ಅಗತ್ಯ: ತಹಶೀಲ್ದಾರ್ ರೆಹಾನ್ ಪಾಷ

by | 09/02/24 | ಸುದ್ದಿ

ಚಳ್ಳಕೆರೆ :ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್‌ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ತಹಸೀಲ್ದಾರ್ ರೆಹಾನ್ ಪಾಷ ಹೇಳಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ಧತಿ ಪದ್ಧತಿ ದಿನಾಚರಣೆ ಜಾತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ

ಕನಿಷ್ಠ ಕೂಲಿ ಇಲ್ಲದೆ ಜೀತದಾಳುಗಳು ಮತ್ತು ಅವರ ಕುಟುಂಬಗಳು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತವೆ. ಆದರೆ ಅವರಿಗೆ ಶಿಕ್ಷಣದ ಕೊರತೆಯಿಂದ ಜೀತದಿಂದ ಹೊರಬಂದು ಸರಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇಂಥ ಪ್ರಕರಣಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದಲ್ಲಿ ಸರಕಾರದ ಸೌಲಭ್ಯ ಕಲ್ಪಿಸುವ ಮೂಲಕ ಜೀತ ಮುಕ್ತಗೊಳಿಸಬಹುದು. ಅನೇಕ ಸಾಮಾಜಿಕ ಅನಿಷ್ಠಗಳಂತೆ ಜೀತ ಪದ್ಧತಿಯೂ ಅನಿಷ್ಠ ಪದ್ಧತಿ. ಇದನ್ನು ಹೋಗಲಾಡಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ.

ಈ ಅನಿಷ್ಠ ಪದ್ಧತಿ ನಿರ್ಮೂಲನೆಯ ಉದ್ದೇಶಕ್ಕಾಗಿ 1993 ರಲ್ಲಿ ಸರಕಾರೇತರ ಸಂಸ್ಥೆ ಆರಂಭವಾಗಿದ್ದು1976 ಕಾಯಿದೆಯಡಿ ಪುನರ್‌ವಸತಿ ಕಲ್ಪಿಸಲಾಗಿದೆ.ಜೀತ ಪ್ರಕರಣಗಳು ಸಾಕಷ್ಟಿದ್ದರೂ ಪ್ರಕರಣಗಳು ಮಾತ್ರ ಬೆಳಕಿಗೆ ಬರುತ್ತಿಲ್ಲ. ಈ ಕಾರಣದಿಂದಲೇ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಇಲಾಖೆ, ಪಂಚಾಯತ್ ರಾಜ ಇಲಾಖೆ, ಸಮಾಜ ಕಲ್ಯಾಣ ಮತ್ತು ಮಹಿಳಾ ಮತ್ತು ಕಲ್ಯಾಣ ಇಲಾಖೆಗಳ ನೌಕರರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿ ಕುಸುಮ ಸಿ ಡಿ ಪಿ ಓ ಹರಿಪ್ರಸಾದ್ ಪಶು ಇಲಾಖೆ ಅಧಿಕಾರಿ ರೇವಣ್ಣ ದಲಿತ ಸಮಾಜದ ಮುಖಂಡ ಕುಮಾರಸ್ವಾಮಿ ಶಿವಮೂರ್ತಿ ಪ್ರಕಾಶ್ ಶ್ರೀನಿವಾಸ್ ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page