ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.6:
ಕೇಂದ್ರದ ವಿಪತ್ತು ನಿರ್ವಹಣಾ ತಂಡದ 10ನೇ ಬೆಟಾಲಾಯನ್ ಇದೇ ಜೂನ್ 7ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ಚಂದ್ರವಳ್ಳಿ ಐತಿಹಾಸಿಕ ಕೆರೆಯಲ್ಲಿ ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳುವ ವಿಪತ್ತು ನಿರ್ವಹಣೆ ಕುರಿತಂತೆ ಅಣಕು ಪ್ರದರ್ಶನ ನಡೆಸಲಿದೆ.
ಈ ಕುರಿತಂತೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.
ಕೇಂದ್ರ ವಿಪತ್ತು ನಿರ್ವಹಣಾ ತಂಡ ದಕ್ಷಿಣ ವಲಯ ಕಚೇರಿ ಆಂಧ್ರಪ್ರದೇಶ ವಿಜಯವಾಡದಲ್ಲಿದೆ. ಇದರಲ್ಲಿ 120 ಎನ್.ಡಿ.ಆರ್.ಎಫ್ ಯೋಧರನ್ನು ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಲ್ಲಿ ತುರ್ತು ಸಂದರ್ಭ ಎದುರಿಸಲು ನಿಯೋಜಿಸಲಾಗಿದೆ. ಈಗಾಗಲೇ ಕೊಡಗು, ಮಂಗಳೂರು, ರಾಯಚೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ತಂಡಗಳು ಕಾರ್ಯ ನಿರ್ವಹಿಸಲು ಸನ್ನದ್ಧವಾಗಿವೆ. ಪ್ರವಾಹದಂತಹ ಸಂದರ್ಭದಲ್ಲಿ ಜೀವರಕ್ಷಣೆಗೆ ಜನರು ಕೈಗೊಳ್ಳಬಹುದಾದ ಅಗತ್ಯ ಕ್ರಮಗಳು ಹಾಗೂ ವಿಪತ್ತು ನಿರ್ವಹಣೆ ತಂಡದ ಕುರಿತು ಜಾಗೃತಿ ಮೂಡಿಸಲು ಅಣಕು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ಎನ್.ಡಿ.ಆರ್.ಎಫ್ ತಂಡದ ಕಮಾಂಡರ್ ಇನ್ಸ್ಪೆಕ್ಟರ್ ಹರಿಶ್ಚಂದ್ರ ಪಾಂಡೆ ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಎದುರಾಗುವುದು ಅಪರೂಪ. ಆದರೂ ವಿಪತ್ತು ಎದುರಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜ್ಞಾನ ಹೊಂದುವುದು ಪ್ರತಿಯೊಬ್ಬರಿಗೂ ಅನುಕೂಲಕರ. ವಿಪತ್ತು ನಿರ್ವಹಣೆ ಅಣುಕು ಪ್ರದೇಶ ನಡೆಯುವ ಚಂದ್ರವಳ್ಳಿ ಕೆರೆ ಬಳಿ ಶಾಮೀಯಾನ ವ್ಯವಸ್ಥೆ, ಕುರ್ಚಿ, ಟೇಬಲ್ ಹಾಗೂ ಧ್ವನಿವರ್ಧಕಗಳ ಅಳವಡಿಕೆಗೆ ನಗರಸಭೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಅಗ್ನಿಶಾಮಕ ಹಾಗೂ ಆರೋಗ್ಯ ಇಲಾಖೆ ಅಗತ್ಯ ತುರ್ತು ಸ್ಪಂದನೆಗೆ ಅಗ್ನಿ ನಂದಕ ವಾಹನ, ಆಂಬ್ಯುಲೆನ್ಸ್ ಸನ್ನದ್ಧವಾಗಿ ಇರಿಸಬೇಕು. ಅಣಕು ಕಾರ್ಯಚರಣೆ ಕುರಿತು ಮಾಧ್ಯಮದಲ್ಲಿ ವ್ಯಾಪಕ ಪ್ರಚಾರ ನೀಡುವಂತೆ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಹಾಗೂ ಅಣಕು ಕಾರ್ಯಾಚರಣೆ ನೋಡಲ್ ಅಧಿಕಾರಿ ಆರ್.ಚಂದ್ರಯ್ಯ, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಪುಟ್ಟಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments