ಜೆಡಿಎಸ್ – ಬಿಜೆಪಿ ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಕೊಳ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯ

by | 08/09/23 | ರಾಜಕೀಯ

ಹುಬ್ಬಳ್ಳಿ: ಜೆಡಿಎಸ್ – ಬಿಜೆಪಿ ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಕೊಳ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರು. ನಂತರ ಅದಕ್ಕೆ ಬ್ರೇಕ್ ಆಯ್ತು. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ.
ಅನುಕೂಲವಿದ್ದಾಗ ಮೈತ್ರಿ ಮಾಡಿಕೊಳ್ಳುವುದು. ಅನಾನುಕೂಲವಾಗದಾಗ ಮೈತ್ರಿಯಿಂದ ಹಿಂದೆ ಸರಿಯೋದು. ಈ ರೀತಿ ಮಾಡಿದಾಗ ಜನರ ನಂಬಿಕೆಯನ್ನು ಕಳ್ಕೋತಾರೆ, ಜೊತೆಗೆ ಆಯಾ ಪಕ್ಷಗಳ ಕ್ರೆಡಿಬಿಲಿಟಿ ಸಹ ಹೋಗುತ್ತೆ ಎಂದು ಅವರು ಹೇಳಿದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *