ಚಳ್ಳಕೆರೆ ಜನಧ್ವನಿ ವಾರ್ತೆ ಮಾ 25
ಕರ್ನಾಟಕ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದ್ದು, ಈಗಲೇ ಜೆಡಿಎಸ್ ಪಕ್ಷವೂ ಸಹ 93 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಜಿಲ್ಲೆಯಲ್ಲಿ ಚಳ್ಳಕೆರೆ ಟಿ.ರಘುಮೂರ್ತಿ, ಹೊಸದುರ್ಗ ಬಿ.ಜಿ.ಗೋವಿಂದಪ್ಪ, ಹಾಗೂ ಹಿರಿಯೂರು ಡಿ.ಸುಧಾಕರ್ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಿದ್ದು.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ.
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ
ಜೆಡಿಎಸ್ ಪಕ್ಷದಿಂದ ಚಳ್ಳಕೆರೆ ಎಂ.ರವೀಶ್ ಕುಮಾರ್, ಹೊಸದುರ್ಗ ಎಂ.ತಿಪ್ಪೇಸ್ವಾಮಿ ಅಧಿಕೃತವಾಗಿ ಘೋಷಣೆ ಮಾಡಿದೆ.
ಬಿಜೆಪಿ ಪಕ್ಷದಿಂದ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಎಂದು ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಸಂಭವನೀಯ ಪಟ್ಟಿಯಲ್ಲಿ ಹಿರಿಯೂರು ಪೂರ್ಣೀಮ ಶ್ರೀನಿವಾಸ್, ಚಳ್ಳಕೆರೆ ಅನಿಲ್ ಕುಮಾರ್, ಹೊಸದುರ್ಗ ಗೂಳಿಹಟ್ಟಿ ಶೇಖರ್,ಹೊಳಲ್ಕೆರೆ ಎಂ.ಚಂದ್ರಪ್ಪ,ಮೊಳಕಾಲ್ಮೂರು ಎಸ್.ತಿಪ್ಪೇಸ್ವಾಮಿ ಹೆಸರುಗಳಿದ್ದು ಜೆಡಿಎಸ್ ,ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಘೋಷಣೆಯಾಗಿದ್ದು ಇನ್ನು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಪಕ್ಷದವತಿಯಿಂದ ಅಧಿಕೃತವಾಗಿ ಘೋಷಣೆಯಾಗ ಬೇಕಿದೆ.
ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಪ್ರಭಲ ಆಕ್ಷೀಗಳೆಂದು ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿರುವ ಅನಿಲ್ ಕುಮಾರ್, ಎಂ.ಜಯರಾಂ. ವರ್ಗಾವಣೆ ಗೊಂಡ ತಹಶೀಲ್ದಾರ್ ಎನ್.ರಘುಮೂರ್ತಿ ಜಯಪಾಲಯ್ಯ ಈಗ ಇವರುಮೊಳಕಾಲ್ಮೂರು ಕ್ಷೇತ್ರದತ್ತ ಮುಖ ಮಾಡಿದ್ದಾರೆ. ಚಿತ್ರನಟ ಹಾಗೂ ಮಾಜಿ ಸಂಸದ ಶಶಿಕುಮಾರು ಬಿಜೆಪಿ ಅಕಾಂಕ್ಷಿ ಎಂದು ಮೊಳಕಾಲ್ಮೂರು ಹಾಗೂ ಚಳ್ಳಕೆರೆ ಎರಡು ಕ್ಷೇತ್ರಗಳಲ್ಲಿ ಪ್ರಾರಂಭದಲ್ಲಿ ಪ್ರಭಲ ಅಕಾಂಕ್ಷಿ ಎಂದು ಎರಡು ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದರೂ ಏಕೋ ಇತ್ತಿಚೆಗೆ ಅವರು ಇದ್ದಕ್ಕಿಂತೆ ಎರಡು ಕ್ಷೇತ್ರಗಳಲ್ಲಿ ಕಾಣಿಸಿಕೊಳ್ಳದೆ ಪ್ರವಾಸದಿಂದ ಹಿಂದೆಸರಿದಿದ್ದಾರೆ.ಬಾಳೆ ಕಾಯಿ ರಾಮದಾಸ್ ಸಹ ಬಿಜೆಪಿ ಆಕಾಂಕ್ಷಿಯಾಗಿ ಪ್ರಚಾರದಲ್ಲಿದ್ದರು.
ಕಳೆದ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಥಿಸಿ ಸೋಲುಂಡ ಕೆ.ಟಿ.ಕುಮಾರಸ್ವಾಮಿ ಪಕ್ಷೇತರ ಅಭ್ಯರ್ಥಿ ಎಂದು ಕ್ಷೇತ್ರದಲ್ಲಿ ಪ್ರಚಾರಮಾಡಲು ಮುಂದಾಗಿದ್ದಾರೆ.
ಕೆ.ಟಿ..ಕುಮಾರಸ್ವಾಮಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕೆ.ಟಿ.ಕುಮಾರಸ್ವಾಮಿಯ ಅಭಿಮಾನಿಗಳಿದ್ದು ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೂರು ಪಕ್ಷಗಳ ಮತಗಳನ್ನು ಪಡೆಯುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಾರಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಥೆ ಉಂಟಾಗಲಿದೆ ಕ್ಷೇತ್ರದಲ್ಲಿ ಮತಗಳು ವಿಂಗಡೆಣೆಯಾಗಿ ಯಾರಿಗೆ ವಿಜಯ ಮಾಲೆ ಹೊಲಿಯುತ್ತದೆ ಎಂಬುದು ಮಾತ್ರ ಚುನಾವಣೆ ಫಲಿತಾಂಶದ ನಂತರ ತಿಳಿಯಲಿದೆ.
ಒಟ್ಟಾರೆ ಕಾಂಗ್ರೆಸ್ ಕೋಟೆಯನ್ನು ಭೇದಿಸಲು ಬಿಜೆಪಿ ಸೂಕ್ತ ಅಭ್ಯರ್ಥಿಗಾಗಿ ಪ್ರಯತ್ನನಡೆಸುತ್ತಿದ್ದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
0 Comments