ಜೆ.ಜಿ.ಹಳ್ಳಿ ಗ್ರಾ.ಪಂ.ಮಾಜಿಅಧ್ಯಕ್ಷ ನಟರಾಜ್ ರವರು ಪೂರ್ಣಿಮಾರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ ಹಿರಿಯೂರು :

by | 05/12/22 | ರಾಜಕೀಯ

ಹಿರಿಯೂರು ತಾಲ್ಲೂಕಿನಲ್ಲಿ ವಿಧಾನಸಭೆ ಚುನಾವಣೆಗೆ ಮುಂಚೆಯೇ ಪಕ್ಷಾಂತರಪರ್ವ ಆರಂಭವಾಗಿದ್ದು, ತಾಲ್ಲೂಕಿನ ಜೆ.ಜಿ.ಹಳ್ಳಿ ಗ್ರಾಮದ ಪಂಚಾಯಿತಿ ಮಾಜಿಅಧ್ಯಕ್ಷ ವಾಲ್ಮೀಕಿ ಸಮುದಾಯದ ಮುಖಂಡರಾದ ನಟರಾಜ್ ರವರು ತಮ್ಮ ಅನೇಕ ಬೆಂಬಲಿಗರೊಂದಿಗೆ ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.
ಇದೇ ಸಂದರ್ಭದಲ್ಲಿ ಜೆ.ಜಿ.ಹಳ್ಳಿ ಗ್ರಾಮದ ಪಂಚಾಯಿತಿ ಮಾಜಿಅಧ್ಯಕ್ಷ ವಾಲ್ಮೀಕಿ ಸಮುದಾಯದ ಮುಖಂಡರಾದ ನಟರಾಜ್ ರವರ ಜೊತೆ ಅವರ ಬೆಂಬಲಿಗರಾದ ಕರಿಯಪ್ಪ, ನಾಗೇಶ್, ಮಧು, ರಾಕೇಶ್, ಮೀಸೆ ಕರಿಯಣ್ಣ ಮುಂತಾದವರು ಸಹ ಬಿಜೆಪಿಗೆ ಸೇರ್ಪಡೆಯಾದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದಾಂಬ ಮಹೇಶ್, ಮುಖಂಡರಾದ ಶ್ರೀರಾಮಣ್ಣ, ಸುನೀಲ್, ಮಂಜುನಾಥ್, ರಾಮಣ್ಣ, ಸುರೇಶ್, ಮುರುಳಿ, ನರಸಿಂಹಮೂರ್ತಿ ಇತರರು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *