*ಡಾ, ಬಿ ಆರ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಿ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಜಿ ಬಿ ಉಮೇಶ್ ಯುವಕರಿಗೆ ಕಿವಿಮಾತು

by | 06/12/23 | ಸುದ್ದಿ


ನಾಯಕನಹಟ್ಟಿ:: ಡಾ ಬಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನ ಪ್ರತಿಯೊಬ್ಬರೂ ರೂಡಿಸಿಕೊಂಡಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಿ ಬಿ ಉಮೇಶ್ ಹೇಳಿದ್ದಾರೆ.


ಅವರು ಮಂಗಳವಾರ ರಾತ್ರಿ ಸ್ವಗ್ರಾಮ ಕುದಾಪುರ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಿ ಬಿ ಉಮೇಶ್ ರವರ 43ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಡಾ ಬಿ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಮೀಸಲಾತಿಯ ಅಡಿಯಲ್ಲಿ ನಾನು ಅಧಿಕಾರಿಯಾಗಿದ್ದೇನೆ ಪ್ರತಿಯೊಬ್ಬರೂ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕು. ಬಾಬಾ ಸಾಹೇಬ್ ಡಾ. ಬಿ ಅಂಬೇಡ್ಕರ್ ಒಂದು ಮಾತನ್ನು ಹೇಳುತ್ತಾರೆ ನಾನು ನನ್ನ ಜನರ ಉದ್ಧಾರಕ್ಕೆ ಸಂವಿಧಾನವನ್ನು ಬರೆದೆ ಆ ಸಂವಿಧಾನದ ಅಡಿಯಲ್ಲಿ ಹಲವಾರು ಜನ ರಾಜಕಾರಣಿಗಳು ನೌಕರದಾರರು ಆಸ್ತಿವಂತರಾದರು ಉದ್ಯಮಿಗಳ ಆದರೂ ಆದರೆ ನಮ್ಮ ಸಂವಿಧಾನದ ಮೂಲ ಆಶ್ರಯಗಳನ್ನ ಮರೆತಿದ್ದಾರೆ ಸಂವಿಧಾನದ ಲಾಭವನ್ನು ಪಡೆದುಕೊಂಡು ಬಡಜನರನ್ನ ಮರೆತು ಎಂಬ ಕೊರಗು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಇತ್ತು.
ನಾನು ಒಬ್ಬ ಪೊಲೀಸ್ ಅಧಿಕಾರಿಯಾಗಿ ಎಲ್ಲಾ ಕಡೆ ಡಾ. ಬಿ ಆರ್ ಅಂಬೇಡ್ಕರ್ ಅವರ ತತ್ವ ಸಿದ್ಧಾಂತದ ಅಡಿಯಲ್ಲಿ ಕಾರ್ಯ ನಿರ್ವಹಿಸಿದ್ದೇನೆ.
ಅಂಬೇಡ್ಕರ್ ರವರ ಆಶ್ರಯದಂತೆನೆ ಸಾಮಾಜಿಕ ನ್ಯಾಯವನ್ನು ಕೊಟ್ಟಿರುವಂತೆ ಕೆಲಸ ಮಾಡಿದ್ದೇನೆ ನಮ್ಮ ಸಮಾಜದಲ್ಲಿ ಪೊಲೀಸ್ ಇಲಾಖೆ ಅತಿ ಮುಖ್ಯವಾದ ಇಲಾಖೆ ಪೊಲೀಸ್ ಠಾಣೆಗೆ ಪ್ರತಿದಿನವೂ ಬಡವರು ದೀನದಲಿತರು ನೊಂದವರು ಬರುತ್ತಾರೆ. ಅವರಿಗೆ ಸಾಮಾಜಿಕ ನ್ಯಾಯವನ್ನು ಕೊಡಿಸುವಲ್ಲಿ ಪ್ರತಿಯೊಬ್ಬ ಪೊಲೀಸರು ಕರ್ತವ್ಯ ಅತಿ ಮುಖ್ಯವಾದದ್ದು ನಮ್ಮ ಗ್ರಾಮದಲ್ಲಿ ಯುವಕರು ಸಿಂಗಂ ಕಪ್ ಕ್ರೀಡಾಕೂಟವನ್ನು ಆಯೋಜಿಸಿದ್ದಾರೆ ಯುವಕರು ಕ್ರೀಡೆಯ ಜೊತೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ಹೆತ್ತವರಿಗೆ ಕೀರ್ತಿಯನ್ನು ತರಬೇಕು ಹಾಗಾದಾಗ ಮಾತ್ರ ನಮ್ಮ ಜೀವನ ಸಾರ್ಥಕವಾಗುತ್ತದೆ ಎಂದು ಯುವಕರಿಗೆ ಮನವರಿಕೆ ಮಾಡಿದರು.

ಇದೇ ಸಂದರ್ಭದಲ್ಲಿ ಎನ್ ಮಹದೇವಪುರ ಗ್ರಾ.ಪಂ. ಸದಸ್ಯ ಎಂ ಪಾಲಯ್ಯ, ಮಾಜಿ ಬಗರು ಹುಕುಂ ಕಮಿಟಿ ಸದಸ್ಯೆ ಬಿ ಶಾರದಮ್ಮ, ಚಳ್ಳಕೆರೆ ಆರೋಗ್ಯ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕುದಾಪುರ ಎಸ್ ಬಿ ತಿಪ್ಪೇಸ್ವಾಮಿ, ಗುಂತಕೋಲಮ್ಮನಹಳ್ಳಿ ಎಸ್ ಶಿವತಿಪ್ಪೇಸ್ವಾಮಿ, ಶಿಕ್ಷಕ ದಿವಾಕರ್ , ಭಾರತೀಯ ಕಿಸಾನ್ ಸಂಘದ ಸದಸ್ಯ ಪಂಚಾಕ್ಷರಿಯ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ಜಿ ಬಿ ಲೋಕೇಶ್, ಗೂಂಚಿಗಾರ್ ಬೋರಯ್ಯ , ನಾಯಕನಹಟ್ಟಿ ಕೆಇಬಿ ಶಾಖಾಧಿಕಾರಿ ಎನ್ ಬಿ ಬೋರಣ್ಣ,ರಾಮಸಾಗರ ಪಿ ಪಿ ಮಹಾಂತೇಶ್ ನಾಯಕ, ಜಯಣ್ಣ, ನಲಗೇತನಹಟ್ಟಿ ಗಾಯಕ ಮುತ್ತುರಾಜ್ , ಶಿವಣ್ಣ, ಸತೀಶ್, ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page