ಡಿಜಿಟಲ್ ಮೀಡಿಯಾ ವಿಚಾರ ಸಂಕಿರಣ

by | 03/01/23 | ಸಾಮಾಜಿಕ

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ,” ಡಿಜಿಟಲ್ ಮಾಧ್ಯಮದ ಸಾಧ್ಯತೆ ಮತ್ತು ಸವಾಲು” ಎಂಬ ವಿಷಯ ಕುರಿತು ವಿಚಾರ ಸಂಕಿರಣ ನಡೆಯಿತು.

ಟವಿ 9 ಡಿಜಿಟಲ್ ವಿಭಾಗದ ಮುಖ್ಯಸ್ಥರಾದ ಭಾಸ್ಕರ್ ಹೆಗಡೆ, ವಿಜಯ ಕರ್ನಾಟಕ ಪತ್ರಿಕೆಯ ಆನ್ಲೈನ್ ಸುದ್ದಿ ವಿಭಾಗದ ಮುಖ್ಯಸ್ಥರಾದ ಪ್ರಸಾದ್ ನಾಯಕ ಹಾಗೂ ಹಿರಿಯ ಪತ್ರಕರ್ತರಾದ ಹನುಮೇಶ್ ಕೆ ಯಾವಗಲ್ ಉಪನ್ಯಾಸ ನೀಡಿದರು.

ಡಿಜಿಟಲ್ ಮಾಧ್ಯಮದ ಬೆಳವಣಿಗೆಯಿಂದ ಮಾಧ್ಯಮ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ಆಗಿದೆ. ಜವಾಬ್ದಾರಿಯಿಂದ ಈ ಮಾಧ್ಯಮ ಬಳಕೆ ಮಾಡಿದರೆ ಮಾತ್ರ ಸಮಾಜಕ್ಕೆ ಹಾಗೂ ಮಾಧ್ಯಮ ಕ್ಷೇತ್ರಕ್ಕೆ ಒಳ್ಳೆಯದಾಗಲಿ ಎಂದು ಭಾಸ್ಕರ್ ಹೆಗಡೆ ಹೇಳಿದರು.

ಹನುಮೇಶ್ ಕೆ ಯಾವಗಲ್ ಮಾತನಾಡಿ, “ಡಿಜಿಟಲ್ ಮಾಧ್ಯಮ, ಟಿವಿ ಹಾಗೂ ಮುದ್ರಣ ಮಾಧ್ಯಮ ಪರಸ್ಪರ ಪೂರಕವಾಗಿ ಬೆಳೆಯಬೇಕು. ಇದರಿಂದ ವಿಶ್ವಾಸಾರ್ಹ ಸುದ್ದಿ ಜನರಿಗೆ ಸಿಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಪ್ರಸಾದ್ ನಾಯಕ್ ತಮ್ಮ ಉಪನ್ಯಾಸದಲ್ಲಿ, ” ಡಿಜಿಟಲ್ ಮಾಧ್ಯಮದ ಸಾಧ್ಯತೆ ಅಗೆದಷ್ಟು ಆಳ. ಈ ಕ್ಷೇತ್ರದಲ್ಲಿ ನಿರಂತರ ಕಲಿಕೆ ಅನಿವಾರ್ಯ ” ಎಂದರು.

ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಮಂಜುಳ, ಪ್ರಾಚಾರ್ಯೆ ಡಾ.ವಿಜಯಲಕ್ಷ್ಮಿ ಸೇರಿದಂತೆ ಕಾಲೇಜಿನ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *