ಚಳ್ಳಕೆರೆ ಡಿ.13.
ಚಳ್ಳಕೆರೆ ತಾಲ್ಲೂಕಿನಲ್ಲಿ 2023-24 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕ
ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ
ನೋಂದಣಿ
ಆರಂಭವಾಗಿದ್ದು, ಬೆಳೆ ವಿಮೆ ನೋಂದಣಿಗೆ ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಕಸಬಾ
ಹೋಬಳಿಯ ರೈತರು ಮಳೆಯಾಶ್ರಿತ ಕಡಲೆ ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ
ಪಡೆಯದ ರೈತರು ಕಡಲೆ ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳಬೇಕು. ಬೆಳೆ ವಿಮೆಗೆ
ನೋಂದಾಯಿಸುವಂತಹ ರೈತರು ಕಡ್ಡಾಯವಾಗಿ ಪ್ರೂಟ್ಸ್ ಎಫ್.ಐ.ಡಿ ಹೊಂದಿರಬೇಕು.
ಬೆಳೆ ವಿಮೆ ಕಟ್ಟಿದ ನಂತರ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ,
ಭೂಕುಸಿತ ಮತ್ತು ಬೆಳೆ ಮುಳುಗಡೆ, ಮೇಘಸ್ಫೋಟ ಮತ್ತು ಗುಡುಗು ಮಿಂಚುಗಳಿಂದ
ಸಂಭವಿಸಿದ 72 ಗಂಟೆಯೊಳಗೆ ವಿಮೆ ಕಂಪನಿಗೆ (ಅಗ್ರಿಕಲ್ಟರ್ ಇನ್ಸೂರೆನ್ಸ್ ಕಂಪನಿ ಆಫ್
ಇಂಡಿಯಾ ಲಿಮಿಟೆಡ್, ಟೋಲ್ ಫ್ರೀ ನಂ-18004250505) ತಿಳಿಸಬೇಕು. ಆಸಕ್ತ ರೈತರು
ನಿಗಧಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳುವಂತೆ ಸಹಾಯಕ ಕೃಷಿ ನಿರ್ಧೇಶಕ ಡಾ.ಅಶೋಕ್ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments