ಡ್ರಾಗನ್ ಹಣ್ಣು ಬೆಳೆದು ಯಶಸ್ಸು ಕಂಡ ರೈತ ಡ್ರಾಗನ್ ಹಣ್ಣು: ಚಿತ್ರನಾಯಕನಹಳ್ಳಿ ನಾರಾಯಣರೆಡ್ಡಿಗೆ ಉತ್ತಮ ಆದಾಯ ರೈತನಿಗೆ ಕೈಹಿದ ನರೇಗಾ .

by | 29/09/23 | ಕೃಷಿ


ಚಳ್ಳಕೆರೆ ಸೆ.29:
ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ರಾಜ್ಯದಲ್ಲಿಯೇ ಅತ್ಯಂತ ಕಡಿಮೆ ಮಳೆ ಬೀಳುವ ತಾಲ್ಲೂಕು ಆಗಿದ್ದರೂ ಇಲ್ಲಿನ ರೈತರ ಪ್ರಯೋಗಶೀಲತೆಯಲ್ಲಿ ಕೊರತೆ ಕಾಣದು. ಚಳ್ಳಕೆರೆ ತಾಲ್ಲೂಕಿನ ಚಿತ್ರನಾಯಕನಹಳ್ಳಿ ಗ್ರಾಮದ ಶ್ರೀ ನಾರಾಯಣರೆಡ್ಡಿ ಬಿನ್ ಲೇಟ್ ನಣಜೀವರೆಡ್ಡಿ ರವರು ಕಡಿಮೆ ನೀರಿನಲ್ಲಿ ಉತ್ತಮ ಬೆಳೆ ಕೊಡುವ ಅಪ್ರಧಾನ ಹಣ್ಣಿನ ಜಾತಿಯ ಡ್ರಾಗನ್ ಹಣ್ಣಿನ ಬೆಳೆ ಬೆಳೆದು ಉತ್ತಮ ಆದಾಯ ಗಳಿಸುತ್ತಿದ್ದಾರೆ.
ಈ ಹಿಂದೆ ಇವರು ಇರುವ 2 ಎಕರೆ ಜಮೀನಿನಲ್ಲಿ ಮೆಕ್ಕೆಜೋಳ. ಟೊಮೋಟೋ, ಈರುಳ್ಳಿ ಬೆಳೆಯುತ್ತಿದ್ದರೂ, ಕಡಿಮೆ ನೀರಿರುವ ಕಾರಣ ಲಾಭ ನಿರೀಕ್ಷಿತ ಮಟ್ಟದಲ್ಲಿ ಬಂದಿರುವುದಿಲ್ಲ. ಆದ ಕಾರಣ ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಯ ಕುರಿತಾಗಿ ತೋಟಗಾರಿಕೆ ಇಲಾಖೆ ರೈತ ಸಂಪರ್ಕ ಕೇಂದ್ರದ ತೋಟಗಾರಿಕೆ ಅಧಿಕಾರಿ ಅವರಿಂದ ಡ್ರಾಗನ್ ಹಣ್ಣಿನ ಬೆಳೆ ಕುರಿತಾಗಿ ಮಾಹಿತಿ ಪಡೆದು ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯ ಸದುಪಯೋಗ ಪಡೆಯಲು ಆಸಕ್ತಿ ತೋರಿ ಡ್ರಾಗನ್ ಹಣ್ಣಿನ ಬೆಳೆಯನ್ನು ಬೆಳೆದಿದ್ದಾರೆ.
2 ಎಕರೆಯಲ್ಲಿ 10*9 ಅಡಿ ಅಂತರದಲ್ಲಿ ಸುಮಾರು 960 Poleಗಳನ್ನು ನೆಟ್ಟು 3840 ಸಸಿಗಳನ್ನು ನಾಟಿ ಮಾಡಿರುತ್ತಾರೆ. ರೂ. 55 ಕ್ಕೆ 01 ರಂತೆ ರೋಜ್ ರೆಡ್ ತಳಿಯ ಸಸಿಯನ್ನು ದೊಡ್ಡಬಳ್ಳಾಪುರದಿಂದ ಖರೀದಿ ಮಾಡಿ ಕೊಟ್ಟಿಗೆ ಗೊಬ್ಬರ ಹಾಕಿ ನಾಟಿ ಮಾಡಿರುತ್ತಾರೆ. ಸಸಿ ನಾಟಿ ಮಾಡಿದ ನಂತರ 1.5 ವರ್ಷಕ್ಕೆ ಇಳುವರಿ ಪ್ರಾರಂಭವಾಗಿರುತ್ತದೆ. ಹೂ ಕಚ್ಚಿದ ಸಮಯದಲ್ಲಿ 3-4 ದಿನಗಳಿಗೊಮ್ಮೆ ನೀರು ಹರಿಸಬೇಕು. ಉಳಿದಂತೆ ವಾರಕೊಮ್ಮೆ ನೀರು ಹರಿಸಿದರೆ ಸಾಕು. ಹೂ ಕಚ್ಚಿದ 1.5 ತಿಂಗಳಿಗೆ ಹಣ್ಣು ಕಟಾವಿಗೆ ಬರುತ್ತದೆ.
ನಾರಾಯಣ ರೆಡ್ಡಿಯವರು ಮೊದಲನೆ ಬೆಳೆ ಹಣ್ಣು ಕಟಾವು ಮಾಡಿ ಬೆಂಗಳೂರು ಮಾರುಕಟ್ಟೆಯಲ್ಲಿ ಬಾಂಬೆ ಕಂಪನಿಯ ಖರೀದಿದಾರರಿಗೆ ಕೆ.ಜಿ.ಗೆ ರೂ.110-120 ರಂತೆ ಮೂರು ಬಾರಿ ಕಟಾವಿನ ಒಟ್ಟು 6 ಟನ್ ಹಣ್ಣನ್ನು ಮಾರಾಟ ಮಾಡಿರುತ್ತಾರೆ. ಒಂದು ಹಣ್ಣಿನ ತೂಕ 400-500 ಗ್ರಾಂ ವರೆಗೂ ಬಂದಿರುತ್ತದೆ. ಮೊದಲನೇ ಬೆಳೆಯಿಂದ ನಾಟಿ ಮಾಡಿದ ಬಂಡವಾಳದ ಹಣವನ್ನು ಪಡೆದಿರುತ್ತಾರೆ.
ಮುಂಬರುವ ದಿನಗಳಲ್ಲಿ ಬರುವ ಬೆಳೆಯಿಂದ ಲಾಭದ ಮೊತ್ತದ ನಿರೀಕ್ಷೆಯಲ್ಲಿದ್ದಾರೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪಡೆದ 1.5 ಲಕ್ಷ ಸಹಾಯಧನದಿಂದ ಪ್ರಾರಂಭಿಕ ಬಂಡವಾಳಕ್ಕೆ ಅನುಕೂಲವಾಗಿರುತ್ತದೆ ಹಾಗೂ ಹನಿ ನೀರಾವರಿ ಒಗ್ಗೂಡಿಸುವಿಕೆ ಅಡಿಯಲ್ಲಿ ಹನಿ ನೀರಾವರಿಗೆ ಸಹಾಯಧನ ಪಡೆದಿರುತ್ತಾರೆ.
ಸರ್ಕಾರದ ಯೋಜನೆಗಳ ಸಹಾಯಧನದಿಂದಾಗಿ ಸಾಲದ ಹೊರೆ ಕಡಿಮೆಯಾಗಿ ಪ್ರಾರಂಭಿಕ ಬಂಡವಾಳಕ್ಕೆ ಹೆಚ್ಚಿನ ಅನುಕೂಲವಾಗಿರುವ ಕುರಿತಾಗಿ ಹರ್ಷ ವ್ಯಕ್ತಪಡಿಸಿರುತ್ತಾರೆ. ಜಿಲ್ಲೆಯ ರೈತರಿಗೆ ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9740153343, 8951820256 ಕ್ಕೆ ರೈತರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page