ಚಳ್ಳಕೆರೆ: ಕಾಂಗ್ರೆಸ್ ಪಕ್ಷ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಪ್ರಬಲ ಟಿಕೆಟ್ ಆಕಾಂಕ್ಷಿ ಎಂ ರಾಮಪ್ಪ ಪ್ರತಿಕ್ರಿಯಿಸಿದ್ದಾರೆ
ಅವರು ತಾಲೂಕಿನ ತಳುಕು ಹೋಬಳಿಯ ಓಬಳಾಪುರ ,ಪಾತ್ತನಗುಡಿ ,
ರೇಣುಕಾಪುರ, ಮೈಲನಹಳ್ಳಿ ಯಾದಲಗಟ್ಟೆ, ದೊಡ್ಡ ಉಳ್ಳಾರ್ತಿ, ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ನನಗೆ ಮತ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಈ ವೇಳೆ ಮಾತನಾಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಕೃಷಿ ಕಾರ್ಮಿಕರು ಹಾಗೂ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ ನಿರುದ್ಯೋಗ ಮುಕ್ತ ಜಿಲ್ಲೆಯನಾಗಿಸುವುದು ನನ್ನ ಗುರಿಯಾಗಿದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭೋವಿ ಸಮುದಾಯಕ್ಕೆ ಪ್ರಾಧಾನ್ಯತೆ ನೀಡಲು ಕಾಂಗ್ರೆಸ್ ಮುಖಂಡರು ಒಲವು ಹೊಂದಿದ್ದು ಹೀಗಾಗಿ ನನಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ದೊರೆಯುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಕೋಡಿಹಳ್ಳಿ ಜಿ ತಿಪ್ಪೆಸ್ವಾಮಿ ಮಾತನಾಡಿ ರಾಮಪ್ಪನವರು ತಾಲೂಕಿನ ನೇರಲಗುಂಟೆ ಗ್ರಾಮದವರಾಗಿದ್ದು ಸ್ಥಳೀಯ ವ್ಯಕ್ತಿಯಾಗಿ ಜಿಲ್ಲೆಯ ಎಲ್ಲಾ ಸಮಸ್ಯೆಗಳನ್ನು ಅರಿತವರಾಗಿದ್ದಾರೆ ಈಗಾಗಲೇ ರಾಜ್ಯದ ಜನತೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಗೆದ್ದು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಮತದಾರರು ಆಶೀರ್ವದಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಪ್ರಬಲ ಟಿಕೆಟ್ ಆಕಾಂಕ್ಷಿ ಎಂ ರಾಮಪ್ಪ, ಬಾಪೂಜಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಜಿ ಬಿ ಬಾಲರೆಡ್ಡಿ, ಜಿ ತಿಪ್ಪೇಸ್ವಾಮಿ, ಎನ್ ದೇವರಹಳ್ಳಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಲಿ ಸದಸ್ಯ ವರವು ಟಿ ಕಾಟಯ್ಯ, ಮಾಜಿ ಬಗರ್ ಹುಕುಂ ಕಮಿಟಿ ಸದಸ್ಯ ವಿ ಟಿ ಶಂಕರ್ ಮೂರ್ತಿ , ಹಿರೇಹಳ್ಳಿ ಕೃಷ್ಣಪ್ಪ, ಮೈಲನಹಳ್ಳಿನಾಗಣ್ಣ, ಇದ್ದರು
0 Comments