ತಾಪಂ ನೂತನ ಇಒ ಶಶಿಧರ್ ಅಧಿಕಾರ ಸ್ವೀಕಾರ-. ಅಧಿಕಾರ ಹಸ್ಥಾಂತರಿಸಿದ ವರ್ಗಾವಣೆ ಗೊಂಡ ಇಒ ಜಿ.ಕೆ.ಹೊನ್ನಯ್ಯ ಇಬ್ಬರಿಗೂ ಸನ್ಮಾನಿಸಿ ಗೌರವಿಸಿದ ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘ.

by | 27/10/23 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಅ.27. ಸರ್ಕಾರಿ ಸೇವೆ ಮಾಡುವ ಅಧಿಕಾರಿಗಳು ನಿಂತ ನೀರಾಗಬಾರದು. ತಾನು ಎಷ್ಟು ವರ್ಷ ಅಧಿಕಾರದಲ್ಲಿದ್ದೇನೆ ಎಂಬುದು ಮುಖ್ಯವಲ್ಲ ಅಧಿಕಾರದಲ್ಲಿದ್ದಾಗ ಜನರಿಗೆ ಸೇವೆ ಮಾಡಿದ್ದೇವೆ ಎಂಬುದು ಮುಖ್ಯ ಎಂಬು ಮುಖ್ಯ ಎಂದು ವರ್ಗಾವಣೆಗೊಂಡ ತಾಪಂ ಇಒ ಜಿ.ಕೆ.ಹೊನ್ನಯ್ಯ ಮಾತನಾಡಿದರು.

ನಗರದ ತಾಲೂಕು ಪಂಚಾಯತ್ ತಾಪಂ ಇಒ ಕಚೇರಿಯಲ್ಲಿ ನೂತನವಾಗಿ ವರ್ಗಾವಣೆಯಾಗಿ ಬಂದ ತಾಒಂ ಇಒ ಶಶಿಧರ್ ಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು.ನೈರ್ಮಲ್ಯ. ಬೀದಿ ದೀಪ. ಇ ಸ್ವತ್ ಸೇರಿದಂತೆ ಸರಕಾರದಿಂದ ಬಂದ ಸೌಲಭ್ಯಗಳನ್ನು‌ ಅರ್ಹ ಫಲಾನುಭವಿಗಳಿಗೆ ತಲುಪಿಸಿದರೆ ಹಾಗೂ ಕಚೇರಿಯಲ್ಲಿ ಸಾರ್ವಜನಿಕರಿಗೆ ಸಮಯಕ್ಕೆ ಸ್ಪಂಧಿಸಿ ಕೆಲಸ ಮಾಡಿದರೆ ನಿಮ್ಮ ಬಗ್ಗೆ ಯಾವುದೇ ದೂರುಗಳು ಬರುವುದಿಲ್ಲ. ಸಾರ್ವಜನಿಕರ ಜತೆ ಪ್ರೀತಿಯಿಂದ ಇದ್ದರೆ, ಅವರ ಬೇಕು-ಬೇಡಿಕೆಗಳಿಗೆ ಸಕಾಲಕ್ಕೆ ಸ್ಪಂದಿಸಿ ಅಗತ್ಯ ಸಹಾಯ ಹಸ್ತ ಚಾಚಿದರೆ ಪ್ರೀತಿ, ಗೌರವ ಸಿಗುತ್ತದೆ ಆದ್ದರಿಂದ ಗ್ರಾಮೀಣ ಜನರ ನಾಡಿ ಮಿಡಿತ ಅರಿತು ಕರ್ತವ್ಯ ನಿರ್ವಹಿಸುವಂತೆ ಪಿಡಿಒ ಗಳಿಗೆ ಕಿವಿ ಮಾತು ಹೇಳಿದರು.

ನೂತನ ತಾಪಂ ಇಒ ಶಶಿಧರ್ ಸನ್ಮಾನ ಸ್ವೀಕರಿಸಿ ಅಧಿಕಾರವಹಿಸಿಕೊಂಡುಮಾತನಾಡಿ ಚಳ್ಳಕೆರೆ ತಾಲೂಕು ದೊಡ್ಡ ಕೇಂದ್ರ 40 ಗ್ರಾಮಪಂಚಾಯತ್ ಕೇಂದ್ರಗಳನ್ನು ಹೊಂದಿದ್ದು ಬರಪೀಡಿತ ಪ್ರದೇಶವಾಗಿದ್ದು ಸರಕಾರದಿಂದ ಬಂದ ಯೋಜನೆಗಳನ್ನು ಸಕಾಲಕ್ಕೆ ಜನರಿಗೆ ತಲುಪಿಸುವ ಜನತೆ ಸರಕಾರಗಳಿಂದ ಬಂದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕು ಎಲ್ಲರೂ ಒಂದಾಗಿ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿಕೊಂಡರು ಸಭೆಯಲ್ಲಿ ಸಮಾಜಾ ಕಲ್ಯಾಣಾಧಿಕಾರಿ ಮಂಇಪ್ಪ ಸಹಾಯಕ ನಿರ್ಧೇಶಕ ಸಂತೋಷ್. ಪಿಆರ್ ಡಿ ಸಹಾಯಕ ನಿರ್ಧೇಶಕ ಸಂಪಂತ್. ಯೋಜನಾಧಿಕಾರಿ ಕೆಂಚಪ್ಪ.ಅಕ್ಷದಾಸೋಹ ಸಹಾಯಕ ನಿರ್ಧೇಶಕ ತಿಪ್ಪೇಸ್ವಾಮಿ. ಪಿಡಿಒ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ದೇವೇಂದ್ರಪ್ಪ. ಪಿಡಿಒ ಗುಂಡಪ್ಪ.ಇನಾಯತ್ ಪಾಷ. ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page