ತಾಲೂಕಿನಬರಪರಿಸ್ಥಿತಿ ಎದುರಿಸಲು ಪಿಡಿಒಗಳು ಕಾರ್ಯೋನ್ಮುಖರಾಗಬೇಕು, ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗವಹಿಸಿ ನೋಡಲ್ ಅಧಿಕಾರಿ ರಾಮಾಂಜನೇಯ

by | 03/04/24 | ಸುದ್ದಿ

ಚಳ್ಳಕೆರೆ: ರಾಜ್ಯ ಸರ್ಕಾರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಈಗಾಗಲೇ ಘೋಷಣೆ ಮಾಡಿರುವುದರಿಂದ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಉಂಟಾಗದಂತೆ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ನೋಡಲ್ ಅಧಿಕಾರಿ ರಾಮಾಂಜನೇಯ ತಿಳಿಸಿದರು.

ತಾಲೂಕು ಪಂಚಾಯಿತಿ ಆವರಣದಲ್ಲಿ ಪಿಡಿಒ ಕಂದಾಯ ಹಾಗೂ ಪಶು ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಸರ್ಕಾರ ಪರಿಸ್ಥಿತಿಯನ್ನು ಎದುರಿಸಲು ಸನ್ನದವಾಗಿದ್ದು ನೋಡಲ್ ಅಧಿಕಾರಿಗಳನ್ನು ಸಹ ನೇಮಿಸಿದೆ ಜಿಲ್ಲಾಧಿಕಾರಿಗಳ ಆದೇಶದಂತೆ ಇಂದು ಸಭೆ ನಡೆಸುತ್ತಿದ್ದು ಗ್ರಾಮ ಪಂಚಾಯತಿಯ ಪಿಡಿಒಗಳು ಪ್ರತಿದಿನ ತಾಲೂಕು ಹಾಗೂ ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳಿಗೆ ಗ್ರಾಮದಲ್ಲಿ ಕುಡಿಯುವ ನೀರು ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ವರದಿ ನೀಡಬೇಕು, ಇದರಿಂದ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಯಾವ ಅಧಿಕಾರಿಗಳು ಚುನಾವಣೆ ಇದೆ ಎಂಬ ಭಾವನೆಯಿಂದ ಹೊರಬಂದು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.


ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್ ಮಾತನಾಡಿ ತಾಲೂಕಿನ ನಾಯಕನಹಟ್ಟಿ ಹಾಗೂ ತಳುಕು ಹೋಬಳಿಗಳ ಎನ್ ಮಹದೇವಪುರ ವರವು ಗ್ರಾಮ ಹಿರೇಹಳ್ಳಿ ಪಾಲನಾಯಕನ ಕೋಟೆ ಕಾಟವನಹಳ್ಳಿ ಗೌರಸಮುದ್ರ ಗ್ರಾಮದ ಬೆಲ್ದರಹಟ್ಟಿ ಓಬಣ್ಣನಹಳ್ಳಿ ದೊಡ್ಡಬಳ್ಳಾರ್ತಿ ಗ್ರಾಮದ ಚಿಕ್ಕ ಉಳ್ಳಾರ್ತಿ ಗಳಲ್ಲಿ ಖಾಸಗಿ ಬೋರ್ವೆಲ್ ಗಳ ಮೂಲಕ ಕುಡಿಯುವ ನೀರನ್ನು ಒದಗಿಸಲಾಗುತ್ತಿದ್ದು ಸದ್ಯಕ್ಕೆ ತಾಲೂಕಿನಲ್ಲಿ ತೀವ್ರತರನಾದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ ಮುಂದಿನ ಏಪ್ರಿಲ್ ಹಾಗೂ ಮೇ ತಿಂಗಳ ಬೇಸಿಗೆ ಅವಧಿಗೆ ಕ್ರಿಯಾ ಯೋಜನೆಯನ್ನು ರೂಪಿಸಿಕೊಂಡಿದ್ದು ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಚುನಾವಣೆ ಇರುವುದರಿಂದ ಅಧಿಕಾರಿಗಳು ವಿಳಂಬ ನೀತಿಯನ್ನು ಅನುಸರಿಸಬಾರದು ಅಗತ್ಯವಿರುವ ಕಡೆ, ಬೋರ್ವೆಲ್ ಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ಕೊರಸಲು ಈಗಾಗಲೇ ಪಿಡಿಒಗಳಿಗೆ ತಿಳಿಸಲಾಗಿದೆ ಟ್ಯಾಂಕರ್ ಗಳ ಮೂಲಕ ನೀರನ್ನು ಒದಗಿಸುವುದಾದರೆ ಜಿಪಿಎಸ್ ಗಳನ್ನು ಅಳವಡಿಸಿ ಫೋಟೋಗಳನ್ನು ತೆಗೆದು ಅಪ್ಲೋಡ್ ಮಾಡಿದಾಗ ಮಾತ್ರ ಸರ್ಕಾರದಿಂದ ಹಣ ಬಿಡುಗಡೆಯಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ತಾಲೂಕಿನಲ್ಲಿ ಕುಡಿಯುವ ನೀರಿಗೆ ಕೈಗೊಂಡಿರುವ ಕ್ರಮಗಳು: ಗ್ರಾಮ ಪಂಚಾಯಿತಿಗಳಲ್ಲಿ ಸರ್ಕಾರದ ವತಿಯಿಂದ ಕೊರೆಸಿರುವ ಬೋರ್ವೆಲ್ ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ.

ಬಹು ದಿನಗಳಿಂದ ಕಾರ್ಯನಿರ್ವಹಿಸದೆ ನಿರ್ಜೀವವಾಗಿದ್ದ ಬೋರ್ವೆಲ್ ಗಳಿಗೆ ಪಂಪು ಮತ್ತು ಮೋಟಾರ್ಗಳನ್ನು ಅಳವಡಿಸಿ ಚಾಲನೆ ನೀಡಲಾಗಿದೆ

ಕೆಳಗಡೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಒದಗಿಸಲಾಗುತ್ತಿದೆ.

ಖಾಸಗಿ ಬೋರ್ವೆಲ್ ಗಳಿಗೆ ಸರ್ಕಾರದ ಮಾರ್ಗಸೂಚಿ ಕಡ್ಡಾಯ: ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಖಾಸಗಿ ಬೋರ್ವೆಲ್ ಗಳನ್ನು ಗುರುತಿಸಿ ಮಾಲೀಕರಿಂದ ಒಪ್ಪಿಗೆ ಪತ್ರ ಪಡೆದು ಒಪ್ಪಂದ ಮಾಡಿಕೊಂಡು ಸರ್ಕಾರದ ಮಾನದಂಡದಂತೆ 18000 ನಿಗದಿಪಡಿಸಲಾಗಿದೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಲ್ಲಿ ಗ್ರಾಮ ಆಡಳಿತ ಅಧಿಕಾರಿ ಮತ್ತು ಸೆಕ್ಷನ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮಾಲೀಕರ ಪಹಣಿ ಆಧಾರ್ ಕಾರ್ಡ್ ಮತ್ತು ಒಪ್ಪಂದ ಪತ್ರ ಪಡೆದು ಜಿಪಿಎಸ್ ಮೂಲಕ ಫೋಟೋ ತೆಗೆದು ಅಪ್ಲೋಡ್ ಮಾಡಬೇಕು ಯಾವುದೇ ಅವ್ಯವಹಾರಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಅಲ್ಲದೆ ಖಾಸಗಿ ಬೋರ್ವೆಲ್ ಮಾಲೀಕರಿಗೆ ಒಂದು ತಿಂಗಳ ಒಳಗಾಗಿ ಬಾಡಿಗೆಯನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ತಹಶೀಲ್ದಾರ್ ರೆಹಾನ್ ಪಾಷ ಮಾತನಾಡಿ ಜಿಲ್ಲೆಯ ಪರಿಸ್ಥಿತಿ ನಿರ್ವಹಣೆಗಾಗಿ ಪ್ರತಿ ತಾಲೂಕಿಗೆ ನೋಡಲು ಅಧಿಕಾರಿಗಳನ್ನು ನೇಮಿಸಲಾಗಿದ್ದು ಚಿತ್ರದುರ್ಗ ಜಿಲ್ಲೆಯು ತೀವ್ರ ಪರಸ್ಥಿತಿ ಎದುರಿಸುತ್ತಿದೆ ಎಂಬ ಮಾಹಿತಿ ಉನ್ನತ ಮಟ್ಟದ ಅಧಿಕಾರಿಗಳಿಗೆ ತಿಳಿದಿದ್ದು ನೀವು ಮತ್ತು ಕುಡಿಯುವ ನೀರಿನ ತೊಂದರೆ ಆಗದಂತೆ ಅಧಿಕಾರಿಗಳು ನಿಗ ವಹಿಸಬೇಕು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳ ಸಂಪರ್ಕದಲ್ಲಿದ್ದು ಜಿಲ್ಲಾಧಿಕಾರಿಗಳು ನೀಡುವ ಸೂಚನೆಗಳನ್ನು ಪಾಲಿಸಬೇಕು ಪಿಡಿಒಗಳು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾದಾಗ ತಾತ್ಸರ ಮನೋಭಾವ ತಾಳದೆ ಕ್ರಮ ಕೈಗೊಳ್ಳಬೇಕು ಎಸ್ ಡಿ ಆರ್ ಎಫ್ ನಲ್ಲಿ ಹಣವಿದ್ದು ಚುನಾವಣೆ ಇದೆ ಎಂಬ ಹಾರಿಕೆ ಉತ್ತರ ನೀಡದೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಜನತೆಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಇಂತಹ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರೆಹನ್ ಪಾಷಾ ತಾಲೂಕು ನೋಡಲ್ ಅಧಿಕಾರಿ ರಾಮಾಂಜನೇಯ ಇ ಓ ಲಕ್ಷ್ಮಣ್ ಬಿ ಇ ಓ ಕೆ ಎಸ್ ಸುರೇಶ್ ಪಶು ಇಲಾಖೆ ಅಧಿಕಾರಿ ರೇವಣ್ಣ ಪವನ್ ಶಿವರಾಜ್ ಸೇರಿದಂತೆ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page