ಚಳ್ಳಕೆರೆ: ರಾಜ್ಯದ ಅತಿ ದೊಡ್ಡ ಎಪಿಎಂಸಿ ಮಾರುಕಟ್ಟೆಗಳಲ್ಲಿ ಚಳ್ಳಕೆರೆ ಮಾರುಕಟ್ಟೆಯು ಸಹ ಒಂದಾಗಿದ್ದು ಅಧಿಕಾರಿಗಳು ಹಾಗೂ ವರ್ತಕರು ರೈತರು ಬೆಳೆದ ಬೆಳೆಗಳಿಗೆ ಸೂಕ್ತ ನ್ಯಾಯಯುತ ಬೆಂಬಲ ಬೆಲೆ ನೀಡಿ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.
ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಎ.ಪಿ.ಎಂ.ಸಿ.ಯಾರ್ಡ್ ನಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿಯಲ್ಲಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 250.00 ಲಕ್ಷ ರೂಗಳ ಅನುದಾನದಲ್ಲಿ ವಾಣಿಜ್ಯ ಮಳಿಗೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ತಾಲೂಕಿನಲ್ಲಿ ಬರದ ಛಾಯೆ ಆವರಿಸಿದ್ದು ರೈತರು ತಾವು ಬೆಳೆದ ಬೆಳೆಗಳನ್ನು ಸೂಕ್ತ ಬೆಂಬಲ ಬೆಲೆ ದೊರೆಯುತ್ತದೆ ಎಂಬ ನಂಬಿಕೆಯಿಂದ ಎಪಿಎಂಸಿ ಮಾರುಕಟ್ಟೆಗೆ ದೂರದ ಗ್ರಾಮೀಣ ಪ್ರದೇಶಗಳಿಂದ ಬಾಡಿಗೆ ವಾಹನಗಳ ಮೂಲಕ ತಂದಿರುತ್ತಾರೆ ಬೆಲೆ ಕುಸಿತವಾದರೆ ರೈತರು ಕಂಗಾಲಾಗುತ್ತಾರೆ ಆದ್ದರಿಂದ ಅಧಿಕಾರಿಗಳು ರೈತ ಬೆಳೆದ ಬೆಳೆಯನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ ದಲ್ಲಾಳಿಗಳಿಗೂ ಹಾಗೂ ರೈತರಿಗೂ ಅನ್ಯಾಯವಾಗದಂತೆ ಸೂಕ್ತ ಬೆಂಬಲ ಬೆಲೆ ನೀಡಿದಾಗ ಮಾತ್ರ ಎಪಿಎಂಸಿ ಮಾರುಕಟ್ಟೆಗಳು ಉಳಿಯಲು ಸಾಧ್ಯವಾಗುತ್ತದೆ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನದಿಂದ ಮಾರುಕಟ್ಟೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಮಾರುಕಟ್ಟೆ ಆಡಳಿತ ಅಧಿಕಾರಿ ಶ್ಯಾಮ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳಾದ ಸುರೇಶ್, ದಲ್ಲಾಲ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ವರ್ತಕರು, ನಗರಸಭೆ ಸದಸ್ಯರಾದ ಸಾವಿತ್ರಮ್ಮ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖಂಡರುಗಳಾದ ಪಾತಲಿಂಗಪ್ಪ, ಟಿ.ಎ.ಟಿ. ಪ್ರಭುದೇವ್, ಸಿ.ಟಿ.ಶ್ರೀನಿವಾಸ್, ಕೋದಂಡರಾಮ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಅಧಿಕಾರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
0 Comments