ಹಿರಿಯೂರು : ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ಸ್ಥಳೀಯ ಅಭ್ಯರ್ಥಿಗೆ ಒಂದು ಬಾರಿ ಅವಕಾಶ ಮಾಡಿಕೊಡಿ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಗನ್ನಾಯಕನಹಳ್ಳಿ ಹೆಚ್ ಮಹೇಶ್ ಮನವಿ ಮಾಡಿದರು.
ತಾಲೂಕಿನ ಗೊರಲಡಕು ಗ್ರಾಮಕ್ಕೆ ಭೇಟಿ ನೀಡಿದ ಮಹೇಶ್ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಮತಪ್ರಚಾರ ಕೈಗೊಂಡು ಮಾತಾನಾಡಿದರು.ನಮ್ಮ ಕ್ಷೇತ್ರದಲ್ಲಿ ಹೊರಗಿನವರು ಆಡಳಿತ ನಡೆಸುತ್ತಿರುವುದರಿಂದ ತಾಲ್ಲೂಕು ಅಭಿವೃದ್ಧಿ ಆಗುವುದಿಲ್ಲ. ಗ್ರಾಮದ ಮೂಲಭೂತ ಸಮಸ್ಯೆಗಳು ಹಾಗೆಯೇ ಉಳಿಯುತ್ತವೆ. ನೀವು ತಾಲೂಕಿನ ಸ್ವಾಭಿಮಾನದ ಬದುಕಿಗೆ ಬದಲಾವಣೆ ಬಯಸಿ ಸ್ಥಳೀಯ ಅಭ್ಯರ್ಥಿಗೆ ಮತ ನೀಡಿ ಎಂದರು.
ಚುನಾವಣೆ ಸಂದರ್ಭದಲ್ಲಿ ಯಾರು ದುಡ್ಡು ಕೊಟ್ಟರು ಬೇಡ ಎನ್ನಬೇಡಿ. ಎಲ್ಲರ ಹತ್ತಿರ ದುಡ್ಡು ಇಸ್ಕೋಂಡು ಸ್ಥಳೀಯ ನಿಮ್ಮ ಮನೆ ಮಗನ ಗೆಲುವಿಗೆ ಶ್ರಮಿಸಬೇಕು ಎಂದರು.
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉದ್ಯೋಗ ನೀಡುವುದು, ರೈತರಿಗೆ ಕೃಷಿಗೆ ಆದ್ಯತೆ, ಮಕ್ಕಳ ಶಿಕ್ಷಣಕ್ಕೆ ಒತ್ತು ಹಾಗೂ ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಮಹೇಶ್ ಭರವಸೆ ನೀಡಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments