ತಾಲೂಕಿನ ಪಿಲಾಜನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆವರಣದತೆಂಗಿನಸಸಿಗಳಿಗೆ ಮುಖ್ಯಶಿಕ್ಷಕರ ಸ್ವಂತಖರ್ಚಿನಲ್ಲಿಟ್ಯಾಂಕರ್ ನೀರು

by | 06/05/24 | ಪರಿಸರ


ಹಿರಿಯೂರು :
ತಾಲೂಕಿನ ಫಿಲಾಜನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ದಾನಿಗಳ ನೆರವಿನಿಂದ ಬೆಳೆಸಿದ್ದ ತೆಂಗಿನ ಗಿಡಗಳು ಬಿಸಿಲಿಗೆ ಒಣಗುತ್ತಿದ್ದನ್ನು ಕಂಡ ಮುಖ್ಯ ಶಿಕ್ಷಕರಾದ ಆರ್.ಟಿ.ಎಸ್ ಶ್ರೀನಿವಾಸ್ ರವರು ಸ್ವಂತ ಖರ್ಚಿನಲ್ಲಿ ಟ್ಯಾಂಕರ್ ಮೂಲಕ ನೀರು ಹಾಯಿಸಿ ಈ ಬೇಸಿಗೆ ಸುಡುಬಿಸಿಲಿನಲ್ಲೂ ಗಿಡಗಳನ್ನು ಉಳಿಸುವ ಕೆಲಸ ಮಾಡಿದ್ದಾರೆ.
ಮುಖ್ಯ ಶಿಕ್ಷಕ ಆರ್.ಟಿ.ಎಸ್ ಶ್ರೀನಿವಾಸ್ ಅವರು ಕಳೆದ ವರ್ಷ ದಾನಿಗಳ ನೆರವಿನಿಂದ ಸುಮಾರು 100 ತೆಂಗಿನಗಿಡಗಳನ್ನು ತರಿಸಿ ಶಾಲಾ ಆವರಣದಲ್ಲಿ ನೆಟ್ಟಿದ್ದರು, ಆದರೆ ಶಾಲಾ ಆವರಣದಲ್ಲಿದ್ದ ಕೊಳವೆ ಬಾವಿಯಲ್ಲಿನ ನೀರು ಎರಡು ತಿಂಗಳ ಹಿಂದೆ ಬತ್ತಿ ಹೋಗಿತ್ತು, ನೀರಿಲ್ಲದೆ ಐದಾರು ತೆಂಗಿನ ಗಿಡಗಳು ಸಂಪೂರ್ಣ ಒಣಗಿ ಹೋಗಿದ್ದವು, ಉಳಿದ ಗಿಡಗಳನ್ನಾದರೂ ಉಳಿಸಿಕೊಳ್ಳಲು ಮುಖ್ಯ ಶಿಕ್ಷಕ ಶ್ರೀನಿವಾಸ್ ಟ್ಯಾಂಕರ್ ಮೂಲಕ ಗಿಡಗಳಿಗೆ ನೀರುಣಿಸುವ ಕೆಲಸ ಮಾಡಿದ್ದಾರೆ.
ಶಾಲಾ ಕೈತೋಟದಲ್ಲಿ ವಿವಿಧ ಬಗೆಯ ತರಕಾರಿ ಮತ್ತು ಹಣ್ಣಿನ ಗಿಡಗಳನ್ನು ಬೆಳೆಸಲಾಗಿತ್ತು, ಶಾಲಾ ಕೈತೋಟದಲ್ಲಿ ಬೆಳೆದ ಸೊಪ್ಪು ತರಕಾರಿಗಳನ್ನು ಬಿಸಿಯೂಟಕ್ಕೆ ಬಳಸಲಾಗುತ್ತಿತ್ತು. ಕಬ್ಬು ಬಾಳೆಹಣ್ಣನ್ನು ಎಲ್ಲಾ ಮಕ್ಕಳಿಗೂ ನೀಡಲಾಗುತ್ತಿತ್ತು, ಕೊಳವೆ ಬಾವಿ ಬತ್ತಿ ಹೋಗಿರುವುದರಿಂದ ತೆಂಗಿನ ಸಸಿಗಳು ಮಾತ್ರ ಉಳಿದುಕೊಂಡಿದ್ದು,


ಸುಮಾರು 5 ಎಕರೆಯಲ್ಲಿರುವ ಶಾಲಾ ಅವರಣದಲ್ಲಿ ಬೀಳುವ ಮಳೆಯ ನೀರು ಕೊಳವೆ ಬಾವಿಗೆ ಇಂಗುವಂತೆ ಮಾಡಲು ನೆರವು ನೀಡುವಂತೆ ಗ್ರಾಮ ಪಂಚಾಯಿತಿಗೆ ಮನವಿ ಮಾಡಲಾಗಿದ್ದು, ಮಳೆ ಬರುವವರೆಗೂ ಗಿಡಗಳಿಗೆ ಈ ರೀತಿ ನೀರು ಹರಿಸಲಾಗುವುದು ಎಂದು ಮುಖ್ಯಶಿಕ್ಷಕ ಆರ್.ಟಿ.ಎಸ್. ಶ್ರೀನಿವಾಸ್ ರವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page