ಹಿರಿಯೂರು :
ನಗರದ ಪ್ರಧಾನರಸ್ತೆಯ ಅಂಗಡಿ ಮುಂಗಟ್ಟುಗಳ ಹಾಗೂ ಕಚೇರಿಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನೇ ಬಳಸಬೇಕು ಎಂಬುದಾಗಿ ಅಂಗಡಿ ಮುಂಗಟ್ಟುಗಳ ಮಾಲೀಕರುಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾದ ರಾಮಕೃಷ್ಣಪ್ಪನವರ ಅಧ್ಯಕ್ಷತೆಯಲ್ಲಿ ಕನ್ನಡ ಜಾಗೃತಿ ಅಭಿಯಾನ ನಡೆಸಲಾಯಿತು.
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಕನ್ನಡನಾಡಿನಲ್ಲಿರುವ ಎಲ್ಲರೂ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕಿದ್ದು, ಅಂಗಡಿ ಮುಂಗಟ್ಟುಗಳ ಮೇಲೆ ಹಾಗೂ ಕಚೇರಿಗಳ ಮೇಲೆ ಹಾಗೂ ನಾಮಫಲಕಗಳಲ್ಲಿ ಹಾಗೂ ಜಾಹೀರಾತುಗಳಲ್ಲಿ ಶೇಕಡ 60ರಷ್ಟು ಕನ್ನಡವನ್ನು ಬಳಸಬೇಕು
ಬರುವ ಫೆಬ್ರವರಿ 10ರ ಒಳಗಾಗಿ ಕನ್ನಡ ನಾಮಫಲಕಗಳನ್ನು ಬಳಸಬೇಕು, ಇಲ್ಲವಾದಲ್ಲಿ ಅಂತಹ ನಾಮಫಲಕಗಳಿಗೆ ಮಸಿ ಬಳಿಯುವ ಕಾರ್ಯಕ್ರಮವನ್ನು ಮತ್ತು ತೆರವುಗೊಳಿಸುವ ಕಾರ್ಯಕ್ರಮವನ್ನು ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಯಪಡಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ಗೌರವಾಧ್ಯಕ್ಷ ಗೋ.ಬಸವರಾಜ್, ತಾಲೂಕು ಅಧ್ಯಕ್ಷರಾದ ರಾಮಕೃಷ್ಣಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ಡಿ.ಕೆ.ಎಸ್. ದಾದಾಪೀರ್, ನಗರ ಅಧ್ಯಕ್ಷರಾದ ಮೊಹಮ್ಮದ್ ಜಾಕೀರ್, ಉದಯ್ ಶಂಕರ್, ಹುಚ್ಚವನಹಳ್ಳಿರಮೇಶ್, ರಾಜಣ್ಣ ಗೌಡ್ರು, ಗಿರೀಶ್, ಸುಹೇಲ್, ರಾಮತಿ, ಮುಬಾರಕ್, ಪಂಚರ್ ರಂಗಸ್ವಾಮಿ, ಅನ್ಸರ್ ಜಾಮಿಯಾ ಅಧ್ಯಕ್ಷರು ರಫೀಕ್ ಕಾರ್ಮಿಕ ಘಟಕದ ಉಪಾಧ್ಯಕ್ಷ ಆಫ್ರಿದ್, ಸೇರಿದಂತೆ ಅನೇಕ ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments