ಸಂಡೂರು… ತಹಶೀಲ್ದಾರ್ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯಿಂದ ಭೂ ದಾಖಲೆ ಪರಿಶೀಲನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಆರೋಪಿ ಸುರೇಶ್ ಎನ್ನುವ ವ್ಯಕ್ತಿಯ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ
ಸಂಡೂರು ಪೊಲೀಸ್ ಠಾಣೆಯಲ್ಲಿ ಸುರೇಶ್ ವಿರುದ್ಧ ದಾಖಲಾಗಿದ್ದು, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ಮೂಲದ ಸುರೇಶ್ ತಹಶೀಲ್ದಾರ್ ಕಚೇರಿಯಲ್ಲಿ ಭೂ ದಾಖಲೆ ಪರಿಶೀಲನೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿತ್ತು.ಕಚೇರಿಯ ರೆಕಾರ್ಡ್ ರೋಮಿಗೆ ಹೋಗಿ ಭೂದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದ ಎನ್ನಲಾಗುತ್ತಿದ್ದು, ತೋರಣಗಲ್ ನ ಸರ್ವೇ ನಂಬರ್ 14ರ ಭೂ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದ ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿ ದರ್ಬಾರ್ ನಡೆಸುತ್ತಿದ್ದ ಎನ್ನಲಾಗುತ್ತಿತ್ತು. ಪ್ರಕರಣ ಕುರಿತು ಮಾಹಿತಿ ಬಂದ ತಕ್ಷಣ ಎಚ್ಛೆತ್ತುಕೊಂಡ ಜಿಲ್ಲಾಡಳಿತ ಖಾಸಗಿ ಕಂಪನಿ ನೌಕರ ಸುರೇಶ್ ವಿರುದ್ಧ FIR ದಾಖಲಿಸಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments