ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಭೂ ದಾಖಲೆಗಳ ಕಚೇರಿಯ ಮೇಲೆ ಇಂದು ಸಂಜೆ ಲೋಕಾಯುಕ್ತ ದಾಳಿ ನಡೆದಿದ್ದು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರು ಚಾಲಕ ಕಿರಣ್ ಎಂಬಾತ ಬಲಗೆ ಬಿದ್ದಿದ್ದು ನಗರದಲ್ಲಿ ಸಂಚಲನ ಸೃಷ್ಟಿಸಿದೆ.
ತಾಲೂಕಿನ ಓಬಳಾಪುರ ಗ್ರಾಮದ ರೈತ ಕೆಜಿ ಜಯಣ್ಣ ಮತ್ತು ಸಹೋದರರ ಪಹಣಿಯನ್ನು ಪ್ರತ್ಯೇಕಗೊಳಿಸಲು ಭೂ ದಾಖಲೆಗಳ ಕಚೇರಿಯ ಸಹಾಯಕ ನಿರ್ದೇಶಕ ಗಂಗಯ್ಯ15 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು 10 ಸಾವಿ ರೂಗಳನ್ನು ಚಾಲಕನ ಕಡೆ ನೀಡುವಂತೆ ತಿಳಿಸಿದ್ದಾರೆ ಲೋಕಾಯುಕ್ತ ದಾಳಿಯ ಮಾಹಿತಿ ತಿಳಿದ ತಕ್ಷಣ ಗಂಗಯ್ಯ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಲೋಕಾಯುಕ್ತ ಎಸ್ ಪಿ ವಾಸುದೇವ್ ರಾವ್ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿ ವೈ ಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿ ಚಾಲಕನನ್ನು ಬಂಧಿಸಿದ್ದು ಗಂಗಯ್ಯ ರವರ ಮೇಲೆ ದೂರು ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.
ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...
0 Comments