ಚಳ್ಳಕೆರೆ ನ. 17.ಕನ್ನಡದ ಮನಸ್ಸುಗಳೆಲ್ಲ ಸೇರಿ ಕನ್ನಡದ ಹಬ್ಬವನ್ನು ನ.25ರಂದು ವಿಜೃಂಭಣೆಯಿಂದ ಆಚರಿಸೋಣ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿಟಿ ವೀರಭದ್ರ ಸ್ವಾಮಿ ಕರೆ ನೀಡಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ಇದೇ ತಿಂಗಳ25ರಂದು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಿದ್ದು
ಮಕ್ಕಳಲ್ಲಿ ಕನ್ನಡ ನಾಡು ನುಡಿ ವಿಷಯದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಬಾರಿ ವಿದ್ಯಾರ್ಥಿ ಸ್ನೇಹಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಕ್ರಮ ಕೈಗೊಂಡಿದ್ದು ಈಗಾಗಲೇ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ಹಾಗೂ ಕನ್ನಡ ಸಾಂಸ್ಕೃತಿಕ ನೃತ್ಯ ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಿದ್ದು ನವೆಂಬರ್ 17 ರ ಒಳಗೆ ಶಾಲೆಗಳ ವಿದ್ಯಾರ್ಥಿಗಳು ನೊಂದಾಯಿಸಿಕೊಳ್ಳಲು ಕೋರಲಾಗಿದೆ ಈ ಬಗ್ಗೆ ಶಾಲಾ ಕಾಲೇಜುಗಳಿಗೆ ಸೂಚನೆಗಳನ್ನು ರವಾನಿಸಲಾಗಿದೆ ಎಂದು ತಿಳಿಸಿದರು.
ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪಾರಿತೋಷಕ ಅಭಿನಂದನಾ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುವುದ ಹಾಗೆಯೇ ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ 125ಕ್ಕೆ 125 ಹಾಗೂ ಪಿಯುಸಿ ಬಿಎಡ್ ಹಾಗೂ ಪದವಿ ಕನ್ನಡ ವಿಷಯದಲ್ಲಿ 100ಕ್ಕೆ100 ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಈ ಸಂಬಂಧ ಈಗಾಗಲೇ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಪ್ರಾಂಶುಪಾಲರು ಹೆಚ್ಚಿನ ಆದ್ಯತೆ ನೀಡಿ ವಿದ್ಯಾರ್ಥಿಗಳ ಮಾಹಿತಿ ನೀಡಲು ಸೂಚಿಸಲಾಗಿದೆ ತಾಲೂಕು ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ನ.20ರಂದು ತಾಲೂಕಿನ ವಿಶ್ವ ಭಾರತಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು ಈ ಬಾರಿಯ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವ ಪಡೆದವರಿಗೆ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದ್ದು ಹೆಚ್ಚಿನ ಕನ್ನಡದ ಮನಸುಗಳು ಆಜೀವ ಸದಸ್ಯತ್ವವನ್ನು ಪಡೆಯಲು ಪ್ರೇರೇಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ವಿಶೇಷವಾಗಿ ಈ ಬಾರಿ ಮಾಧ್ಯಮ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಮಾಡಿದ ಒಬ್ಬ ಸಾಧಕರಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ತಾಲೂಕು ಮಟ್ಟದ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿಯಾಗಿ ಒಂದೊಂದು ಕ್ಷೇತ್ರದ ಒಬ್ಬ ಸಾಧಕರಿಗೆ ಸನ್ಮಾನಿಸಲಾಗುವುದು ಆದ್ದರಿಂದ ಈ ಬಾರಿ ಪ್ರಥಮವಾಗಿ ಮಾಧ್ಯಮ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಕೆ ಚಿತ್ತಯ್ಯ ಮಾತನಾಡಿ ಕಳೆದ ವರ್ಷ ಐದು ದಿನಗಳ ಕಾಲ ಕನ್ನಡದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗಿತ್ತು ಆದರೆ ಈ ಬಾರಿ ತಾಲೂಕಿನಲ್ಲಿ ವರುಣನ ಆವಕೃಪೆಯಿಂದ ಬರ ಆವರಿಸಿರುವುದರಿಂದ ಅದ್ದೂರಿಯಾಗಿ ಆಚರಿಸದೆ ಯಾವುದೇ ಕುಂದು ಕೊರತೆಗಳು ಉಂಟಾಗದಂತೆ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು ನ.25ರ ಬೆಳಿಗ್ಗೆ 10 ಗಂಟೆಗೆ ಪ್ರವಾಸಿ ಮಂದಿರದಿಂದ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಮೂಲಕ ನಗರದ ರಾಜಬೀದಿಗಳಲ್ಲಿ ಸಂಚರಿಸಿ ನೆಹರು ವೃತ್ತದ ಮೂಲಕ ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಆವರಣದ ಕಾರ್ಯಕ್ರಮದ ವೇದಿಕೆಗೆ ಆಗಮಿಸಲಾಗುವುದು ತಾಲೂಕಿನ ಎಲ್ಲ ಕನ್ನಡ ಅಭಿಮಾನಿಗಳು ಲೇಖಕರು ಸಾಹಿತಿಗಳು ಸರ್ವಧರ್ಮದ ಹಾಗೂ ಸಂಘಟನೆಗಳ ಅಧ್ಯಕ್ಷರುಗಳು ಪದಾಧಿಕಾರಿಗಳು ಕಾರ್ಮಿಕರು ಆಟೋ ಚಾಲಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು
ಸಭೆಯಲ್ಲಿ ತಾಲೂಕು ಕಸಾಪ ಕಾರ್ಯದರ್ಶಿ ಕೆ ಚಿತ್ತಯ್ಯ ಕಸಬ ಹೋಬಳಿಯ ಕಸಾಪ ನಿರ್ದೇಶಕ ಸಂಜೀವಿನಿ ಲ್ಯಾಬ್ ಎಂಎನ್ ಮೃತ್ಯುಂಜಯ, ಜಗನ್ನಾಥ ಉಪಸ್ಥಿತರಿದ್ದರು.
0 Comments