ತಾಲ್ಲೂಕಿನಲ್ಲಿ ತೀವ್ರ ಬರಗಾಲದಿಂದ ಜೆಜೆಹಳ್ಳಿ ಹೋಬಳಿಯ ಕೆರೆಗಳು ಬತ್ತಿ ಹೋಗಿ ಸಂಪೂರ್ಣ ಅಂತರ್ಜಲ ಕುಸಿತವಾಗಿದೆ: ಅಧ್ಯಕ್ಷ ತಿಪ್ಪೇಸ್ವಾಮಿ

by | 28/05/24 | ಪ್ರತಿಭಟನೆ


ಹಿರಿಯೂರು:
ತಾಲ್ಲೂಕಿನಲ್ಲಿ ಉಂಟಾದ ತೀವ್ರ ಬರಗಾಲದಿಂದ ಜೆಜೆ ಹಳ್ಳಿ ಹೋಬಳಿಯ ಎಲ್ಲಾ ಕೆರೆಗಳು ಬತ್ತಿ ಹೋಗಿ ಅಂತರ್ಜಲ ಸಂಪೂರ್ಣ ಕುಸಿತವಾಗಿ ಸಾವಿರ ಅಡಿ ಬೋರ್ವೆಲ್ ಕೊರೆದರೂ ನೀರು ಸಿಗದೆ ರೈತರು ಟ್ಯಾಂಕರ್ ಮೂಲಕ ನೀರು ಅರಿಸಿ ಅಡಿಕೆ ತೋಟಗಳನ್ನು ಉಳಿಸಿಕೊಳ್ಳಲು ಅರೆ ಸಾಹಸ ಪಡುವಂತಾಗಿದೆ ಎಂಬುದಾಗಿ ರೈತ ಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ತಾಲ್ಲೂಕಿನ ಜೆಜೆ ಹಳ್ಳಿ ಹೋಬಳಿಯ ರೈತ ಮುಖಂಡರ ಸಭೆ ನಡೆಸಿ ಗಾಯತ್ರಿ ಜಲಾಶಯ ಸೇರಿದಂತೆ ಕಲ್ವಳ್ಳಿ ಭಾಗದ ಎಲ್ಲಾ ಗ್ರಾಮಗಳ ಕೆರೆಗಳಿಗೆ ವಾಣಿವಿಲಾಸ ಜಲಾಶಯದಿಂದ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆಸಲಾದ ಸಭೆಯಲ್ಲಿ ಅವರು ಮಾತನಾಡಿದರು.
ಈ ಭಾಗಕ್ಕೆ ಭದ್ರಾ ಮೇಲ್ದಂಡೆ ಯೋಜನೆ ನೀರು ಬರಲು ಇನ್ನು 10 ರಿಂದ12 ವರ್ಷಗಳೇ ಬರಬೇಕಾಗುತ್ತದೆ. ವೈಜಂಕ್ಷನ್ ನಿಂದ ತುಮಕೂರು ಕಾಲುವೆ ಬಹಳಷ್ಟು ಕಡೆ ಕಾಮಗಾರಿ ಆಗದೆ ರೈತರು ಅಡ್ಡಿಪಡಿಸಿರುತ್ತಾರೆ. ಇನ್ನು ತುಂಗಾದಿಂದ ಭದ್ರಾ ಕಾಮಗಾರಿ ಬಹಳಷ್ಟು ಬಾಕಿ ಇದೆ.
ಈ ಸಂದರ್ಭದಲ್ಲಿ ಈ ಭಾಗದ ರೈತರಿಗೆ ತೋಟ ಉಳಿಸಿಕೊಳ್ಳಲು ಒಂದೇ ಮಾರ್ಗ ಅದು ವಾಣಿವಿಲಾಸ ಜಲಾಶಯದಿಂದ ಈ ಭಾಗದ ಎಲ್ಲಾ ಕೆರೆಗಳು ತುಂಬಿಸಲು ರೈತರು ಪ್ರತಿ ಗ್ರಾಮದಲ್ಲೂ ಸಂಘಟಿತರಾಗಿ ದೊಡ್ಡ ಮಟ್ಟದ ಹೋರಾಟ ಚಳುವಳಿಯನ್ನು ಹಮ್ಮಿಕೊಳ್ಳಬೇಕಾಗಿದೆ ಎಂಬುದಾಗಿ ತಿಳಿಸಿದರು.
ಸಂಘದ ಕಾರ್ಯದರ್ಶಿ ಆಲೂರು ಸಿದ್ದರಾಮಣ್ಣ ಮಾತನಾಡಿ, ಈ ಹಿಂದೆ ರೈತ ಸಂಘದ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ 543 ದಿನಗಳ ಕಾಲ ಚಳುವಳಿ ನಡೆಸಿದ ಪರಿಣಾಮವಾಗಿ ಇಂದು ವಾಣಿವಿಲಾಸ ಜಲಾಶಯಕ್ಕೆ ಭದ್ರಾ ನೀರು ಹರಿದು ಬಂದಿದೆ ಎಂದರಲ್ಲದೆ,
ಈಗ ವಾಣಿವಿಲಾಸ ಜಲಾಶಯದಿಂದ ನದಿ ಮೂಲಕ ಚಳ್ಳಕೆರೆ, ಮೊಳಕಾಲ್ಮೂರು ಹಾಗೂ ಆಂಧ್ರದ ಬಿಟಿ ಡ್ಯಾಮ್ ಅವರಿಗೂ ನೀರು ಹರಿಸಲಾಗಿದೆ. ಸರ್ಕಾರದ ಆದೇಶ ಕೇವಲ 0.25 ಟಿಎಂಸಿ ಇದ್ದರೆ ಇವರು ಯಾವುದೇ ಗೇಜ್ ಅಳವಡಿಸದೆ, ಅಧಿಕಾರಿಗಳು ಸುಮಾರು ಒಂದು ಟಿಎಂಸಿ ನೀರನ್ನು ಹರಿಸುತ್ತಾರೆ.
ಆದರೆ ವಾಣಿವಿಲಾಸ ಜಲಾಶಯ ನಿರ್ಮಿಸಿದ ಸಂದರ್ಭದಲ್ಲಿ ಹಿರಿಯೂರು ತಾಲೂಕಿನ ರೈತರಿಗೆ ಎಂದು ಮೀಸಲಿದ್ದು ಈ ಭಾಗದ ನೀರನ್ನು ಗಾಯತ್ರಿ ಜಲಾಶಯಕ್ಕೆ ಯಾಕೆ ಹರಿಸಬಾರದು ಎಂಬುದಾಗಿ ಅವರು ಅರಿವು ಮೂಡಿಸಿದರು.
ಸಭೆಯಲ್ಲಿ ಅನೇಕ ವಿಚಾರಗಳು ಚರ್ಚಿಸಿದ ನಂತರ ಜೂನ್ 10 ರಂದು ಜೆಜೆ ಹಳ್ಳಿ ಬಂದ್ ಗೆ ಕರೆ ನೀಡಲಾಯಿತು ಕರಪತ್ರಗಳನ್ನು ಮಾಡಿಸಿ ಪ್ರತಿ ಗ್ರಾಮದಲ್ಲೂ ಜಾಗೃತಿ ಮೂಡಿಸಿ ಹಳ್ಳಿ-ಹಳ್ಳಿಗಳಿಂದ ಸಾವಿರಾರು ಜನ ಈ ಹೋರಾಟಕ್ಕೆ ಬರಬೇಕೆಂದು ತೀರ್ಮಾನಿಸಲಾಯಿತು.
ಈ ಸಭೆಯಲ್ಲಿ ಮಹಾಂತೇಶ್, ಈರಪ್ಪ, ಕೆ.ಆರ್. ಹಳ್ಳಿ ರಾಜಪ್ಪ, ಎಂ.ಆರ್. ವೀರಪ್ಪ ,ತಿಮ್ಮಣ್ಣ, ರಾಮಕೃಷ್ಣ, ಮಂಜುನಾಥ್, ಬಾಲಕೃಷ್ಣ, ಶಶಿಧರ್, ದೇವೇಂದ್ರಪ್ಪ, ಮೋಹನ್, ರಂಗಸ್ವಾಮಿ, ಕನ್ಯಪ್ಪ , ಪೂಜಾರಪ್ಪ, ಗೋವಿಂದ್ ರಾಜ್, ಮೈಲಾರಪ್ಪ, ಲವಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page