ಹಿರಿಯೂರು:
ತಾಲ್ಲೂಕಿನಲ್ಲಿ ಈಗಾಗಲೇ ಸಾರ್ವತ್ರಿಕ ಲಸಿಕೆಯ ಕ್ರಿಯಾ ಯೋಜನೆ ತಯಾರಿಗೆ ಸಂಬಂಧಿಸಿದಂತೆ ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ಮಾಡಿ ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂಬುದಾಗಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾII ವೆಂಕಟೇಶ್ ಹೇಳಿದರು.
ನಗರದ ಮಿರ್ಜಾ ಬಡಾವಣೆಯಲ್ಲಿ “ವಿಶೇಷ ಲಸಿಕಾ ದಿನ”ದ ಅಂಗವಾಗಿ 15 ವರ್ಷದ ಒಳಗಿನ ಸುಮಾರು 224 ಮಕ್ಕಳು ಮತ್ತು 76 ಮಂದಿ ಗರ್ಭಿಣಿಯರಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ವಿಶೇಷ ಲಸಿಕಾ ಆಂದೋಲನ ಕಾರ್ಯಕ್ರಮದಲ್ಲಿ ಎಲ್ಲರೂ ತಪ್ಪದೇ ಲಸಿಕೆ ಪಡೆಯಬೇಕು, ಯಾವುದೇ ಮಕ್ಕಳು ಹಾಗೂ ಗರ್ಬಿಣಿಯರು ಸಹ ಲಸಿಕೆಯಿಂದ ವಂಚಿತರಾಗಬಾರದು ಎಂಬುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂಬುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪಿ. ಎಸ್. ಸಾದತ್ ಉಲ್ಲಾ, ಜಿ.ದಾದಾಪೀರ್, ತಾಲ್ಲೂಕು ಮೇಲ್ವಿಚಾರಕ ವಿನಯ್ ಕುಮಾರ್, ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮತ್ತು ಫಲಾನುಭವಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments