ತಾಲ್ಲೂಕಿನ ಉಪ್ಪಾರಹಟ್ಟಿಯಲ್ಲಿ ರುದ್ರಭೂಮಿ ಸಮಸ್ಯೆ ಪೊಲೀಸ್ ಭದ್ರತೆಯಲ್ಲಿ ನಡೆದ ಕಲ್ಲಪ್ಪ ಅಂತ್ಯಸಂಸ್ಕಾರ.

by | 04/01/24 | ಸುದ್ದಿ


ಹಿರಿಯೂರು:
ತಾಲ್ಲೂಕಿನ ವಾಣಿವಿಲಾಸಪುರ ರಸ್ತೆಯಲ್ಲಿರುವ ಉಪ್ಪಾರಹಟ್ಟಿ ಗ್ರಾಮದಲ್ಲಿ ರುದ್ರಭೂಮಿ ಇಲ್ಲದ ಕಾರಣ ಮೃತ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರವನ್ನು ಮಾರಿಕಣಿವೆ ರಸ್ತೆ ಬಳಿ ಮಾಡಲು ಸ್ಥಳೀಯರು ಅಡ್ಡಿಪಡಿಸಿದರು. ಇದರಿಂದ ಪೊಲೀಸ್ ಭದ್ರತೆಯಲ್ಲಿ ಬುಧವಾರ ಸಂಜೆ ವ್ಯಕ್ತಿಯ ಅಂತ್ಯಸಂಸ್ಕಾರ ನಡೆಸಲಾಯಿತು.
ಉಪ್ಪಾರಹಟ್ಟಿಯಲ್ಲಿ ಮಂಗಳವಾರ ರಾತ್ರಿ ಕಲ್ಲಪ್ಪ ಅವರು ಮೃತಪಟ್ಟಿದ್ದರು. ಗ್ರಾಮದಲ್ಲಿ ರುದ್ರಭೂಮಿ ಇಲ್ಲದ ಕಾರಣಕ್ಕೆ ಅವರ ಅಂತ್ಯಕ್ರಿಯೆ ರಸ್ತೆ ಬದಿಯಲ್ಲಿ ನಡೆಸಲು ಸ್ಥಳೀಯರು ಅವಕಾಶಕೊಟ್ಟಿರಲಿಲ್ಲ, ಸ್ಥಳೀಯರು ಹಾಗೂ ಸಂಬಂಧಿಕರು ಆಕ್ರೋಶಗೊಂಡು ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ರುದ್ರಭೂಮಿ ಸಮಸ್ಯೆ ಪರಿಹರಿಸಬೇಕು ಎಂದು ಪಟ್ಟು ಹಿಡಿದರು.
ಗ್ರಾಮಕ್ಕೆ ಭೇಟಿ ನೀಡಿದ್ದ ತಹಶೀಲ್ದಾರ್ ರಾಜೇಶ್ ಕುಮಾರ್ ಮೃತರ ಸಂಬಂಧಿಕರ ಮನ ಒಲಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ಪೊಲೀಸ್ ಭದ್ರತೆಯಲ್ಲಿ ಮೊದಲು ಅಂತ್ಯಸಂಸ್ಕಾರ ಮಾಡುತ್ತಿದ್ದ ಜಾಗದಲ್ಲಿಯೇ ಅಂತ್ಯಕ್ರಿಯೆ ಮಾಡಿಸಿ, ವಾರದೊಳಗೆ ರುದ್ರಭೂಮಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಉಪ್ಪಾರಹಟ್ಟಿ ಗ್ರಾಮದಲ್ಲಿ ಉಪ್ಪಾರ ಸಮುದಾಯಕ್ಕೆ ಸೇರಿದ ನೂರು ಮನೆಗಳಿದ್ದು, ಸುಮಾರು 600ಕ್ಕೂ ಹೆಚ್ಚು ಜನರಿದ್ದಾರೆ. ಹಟ್ಟಿಯಲ್ಲಿರುವ ಯಾರಿಗೂ ಒಂದಿಂಚು ಭೂಮಿ ಇಲ್ಲ. ಕೂಲಿಯೇ ಎಲ್ಲರಿಗೂ ಬದುಕಿನ ಆಧಾರ. ಹಟ್ಟಿಯಲ್ಲಿ ಯಾರಾದರೂ ಮರಣ ಹೊಂದಿದರೆ ಶವಸಂಸ್ಕಾರ ಮಾಡಲು ಜಾಗ ಕೇಳುವುದೇ ತಪ್ಪಾ ಎಂಬ ಪ್ರಶ್ನೆ ಗ್ರಾಮಸ್ಥರದ್ದಾಗಿದೆ.
ಈಗಾಗಲೇ ಯರದಕಟ್ಟೆ ಗೋಮಾಳದ ಸರ್ವೆ ನಂ 19ರಲ್ಲಿ 1. 17 ಎಕರೆ ಜಮೀನನ್ನು ರುದ್ರಭೂಮಿಗೆ ಮಂಜೂರು ಮಾಡಿ ಪಹಣಿ ಬಂದಿದ್ದು. ಒಂದು ವರ್ಷ ಕಳೆದಿದೆ. ಅಲ್ಲಿಂದ ಇಲ್ಲಿಯವರೆಗೆ ಸುಮಾರು ಏಳೆಂಟು ಮಂದಿ ಮರಣ ಹೊಂದಿದ್ದಾರೆ. ಆದಾಗ್ಯೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲು ಅಲ್ಲಿನ ಸ್ಥಳೀಯರು ಬಿಡುತ್ತಿಲ್ಲ. ಆದ್ದರಿಂದ ವಿ.ವಿ.ಪುರ ರಸ್ತೆಯ ಪಕ್ಕದಲ್ಲಿಯೇ ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ.
ಉಪ್ಪಾರ ಜನಾಂಗದ ಮುಖಂಡ ನಾಗರಾಜ್ ಉಪ್ಪಾರ ಮಾತನಾಡಿ, ಉಪ್ಪಾರಹಟ್ಟಿ ಗ್ರಾಮಕ್ಕೆ ರುದ್ರಭೂಮಿ ನೀಡುವಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ. ಜಿಲ್ಲಾಧಿಕಾರಿ ಮದ್ಯಪ್ರವೇಶ ಮಾಡಿ ಸಮಸ್ಯೆ ಇತ್ಯರ್ಥಪಡಿಸಬೇಕು. ಸಚಿವ ಡಿ.ಸುಧಾಕರ್ ರುದ್ರಭೂಮಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪ್ಪಾರ ಸಮಾಜದ ನಿಕಟಪೂರ್ವ ಆಧ್ಯಕ್ಷ ಅಲೂರು ರಾಮಣ್ಣ, ನಿಂಗರಾಜ, ಶೇಖರಪ್ಪ, ಕಾಂತರಾಜ್, ಮಹಾಲಿಂಗಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page