ಹಿರಿಯೂರು :
ತಾಲ್ಲೂಕಿನ ಗಡಿಗ್ರಾಮಗಳ ಮೂಲಸೌಕರ್ಯಗಳ ಅಭಿವೃದ್ಧಿಯ ಜೊತೆಗೆ ಕುಡಿಯುವ ನೀರು, ಶಿಕ್ಷಣ, ಗುಣಮಟ್ಟದ ಆರೋಗ್ಯ ಸೇವೆಗೆ ವಿಶೇಷ ಆದ್ಯತೆಯನ್ನು ನೀಡಲಾಗುವುದು ಎಂಬುದಾಗಿ ಜಿಲ್ಲಾಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲ್ಲೂಕಿನ ಧರ್ಮಪುರ-ಬೇತೂರು ಪಾಳ್ಯ ಗ್ರಾಮದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನೂತನ ವಸತಿ ಗೃಹ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೈಟೆಕ್ ಸೌಲಭ್ಯ ಒದಗಿಸಲು ವಿಶೇಷ ಅನುದಾನ ಮೀಸಲಿಡುವ ಜೊತೆಗೆ ಜನಸ್ನೇಹಿ ವೈದ್ಯಕೀಯಸೇವೆ ನೀಡಲು ತಜ್ಞ ವೈದ್ಯರು, ತಾಂತ್ರಿಕ ಪರಿಣಿತರು, ಅಗತ್ಯ ಸಿಬ್ಬಂದಿ ನೇಮಿಸಲಾಗುವುದು ಎಂಬುದಾಗಿ ತಿಳಿಸಿದರು.
ಕೊರೋನ ಸಂದರ್ಭದಲ್ಲಿ ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರ ಸೋಂಕಿತರ ಪಾಲಿಗೆ ಸಂಜೀವಿನಿಯಾಗಿ ಕೆಲಸ ಮಾಡಿದೆ. ಆರೋಗ್ಯ ಸಿಬ್ಬಂದಿ ಜೀವ ಪಣಕ್ಕಿಟ್ಟು ಹಗಲಿರುಳು ಜನರ ಸುರಕ್ಷತೆಗೆ ಶ್ರಮಿಸಿದ್ದಕ್ಕೆ ಬೆಲೆ ಕಟ್ಟಲಾಗದು ಎಂದರು.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವೆಂಕಟೇಶ್ ಮಾತನಾಡಿ, ಗಡಿ ಭಾಗದ ಸರ್ಕಾರಿ ಆಸ್ಪತ್ರೆಗಳಿಗೆ ತಜ್ಞ ವೈದ್ಯರನ್ನು ನೇಮಿಸುವ ಮೂಲಕ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲಾಗುವುದು, ಗ್ರಾಮದ ಜನತೆ ವೈದ್ಯಕೀಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಡಿ.ಎಚ್.ಒ ಡಾ.ರೇಣುಪ್ರಸಾದ್, ಗ್ರಾ.ಪಂ.ಅಧ್ಯಕ್ಷೆ ಜ್ಯೋತಿ ಹನುಮಂತರಾಯ, ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ, ಸದಸ್ಯರಾದ ನೌಷಾದ್ ಖಾನ್, ಅಸ್ಲಾಂ, ರಾಧಾ, ನಾಗರತ್ನಮ್ಮ, ಪವಿತ್ರಾ, ಶಾರದಮ್ಮ, ಡಾ. ಹನುಂತರಾಯ, ಡಾ. ಕವಿತಾ, ಆರ್. ವಿಮಲಾಕ್ಷಿ, ಆಶಾ, ರಾಮಾಂಜನೇಯ, ವೆಂಕಟೇಶ್, ನಗರಸಭೆ ಸದಸ್ಯ ಈರಲಿಂಗೇಗೌಡ, ಶ್ರವಣಗೆರೆ ಚಂದ್ರು, ಮಧು, ಕೃಷ್ಣಮೂರ್ತಿ, ಗೌಡಪ್ಪ ಇತರರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments