ಹಿರಿಯೂರು:
ತಾಲ್ಲೂಕಿನಲ್ಲಿ ಶನಿವಾರ ಸುರಿದ ಭಾರಿ ಬಿರುಗಾಳಿ ಮಳೆಗೆ ತಾಲ್ಲೂಕಿನ ವಿವಿಧ ಭಾಗದಲ್ಲಿ ಅಪಾರ ಹಾನಿ ಸಂಭವಿಸಿದ್ದು, ಈ ಬಿರುಗಾಳಿ ಮಳೆಗೆ ರೈತರ ತೆಂಗು ಅಡಿಕೆ ಮರಗಳು ಫಸಲಿಗೆ ಬಂದ ಬಾಳೆ ತೋಟಗಳು ನೆಲಕ್ಕೆ ಉರುಳಿವೆ ಎನ್ನಲಾಗಿದೆ. ಕಳೆದ ಕೆಲವು ವರ್ಷಗಳಿಂದ ಮಳೆ-ಬೆಳೆ ಇಲ್ಲದೆ ತೀವ್ರಬರಗಾಲಕ್ಕೆ ತುತ್ತಾಗಿದ್ದ ರೈತರು ಕಳೆದ ಶನಿವಾರ ಸುರಿದ ಬಿರುಗಾಳಿ ಮಳೆಗೆ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಈ ಸುದ್ದಿ ತಿಳಿದ ತಕ್ಷಣ ಕ್ಷೇತ್ರದ ಶಾಸಕರಾದ ಡಿ.ಸುಧಾಕರ್ ರವರು ತಾಲ್ಲೂಕಿನ ವಿವಿಧ ಭಾಗಗಳಿಗೆ ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಭೇಟಿನೀಡಿ ಹಾನಿಗೊಳಗಾದ ರೈತರಿಗೆ ವೈಯಕ್ತಿಕ ಧನಸಹಾಯ ನೀಡಿ, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ತಾಲ್ಲೂಕು ತಹಶೀಲ್ದಾರರಿಗೆ ಸೂಚಿಸದರಲ್ಲದೆ, ನೊಂದ ಕುಟುಂಬಸ್ಥರಿಗೆ ಸ್ವಾಂತನ ಹೇಳಿದರು.
ಇದೇ ಸಂದರ್ಭದಲ್ಲಿ ತಾಲ್ಲೂಕಿನ ಕೃಷ್ಣರಾಜಪುರ ಗ್ರಾಮದಲ್ಲಿ ಗಾಳಿ-ಮಳೆಯಿಂದಾಗಿ ರೈತರ ಬೆಳೆ ಹಾಗೂ ಬಾಳೆತೋಟ ನಾಶವಾಗಿರುವ ಕಾರಣದಿಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ನಷ್ಟಕ್ಕೊಳಗಾದ ಬಾಳೆತೋಟದ ಮಾಲೀಕರಿಗೆ ತಕ್ಷಣದ ಪರಿಹಾರವಾಗಿ ತಮ್ಮ ಸ್ವಂತಹಣ ನೀಡಿ, ಆರ್ಥಿಕ ಧನಸಹಾಯ ಮಾಡಿದರಲ್ಲದೆ, ಕುಟುಂಬಸ್ಥರಿಗೆ ಸ್ವಾಂತನ ಹೇಳಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments