ಹಿರಿಯೂರು :
ತಾಲ್ಲೂಕಿನ ಮಸ್ಕಲ್ ಟಿಬಿ ಗೊಲ್ಲರಹಟ್ಟಿ ಗ್ರಾಮದ ತೋಪಿನಲ್ಲಿರುವ ಕಾಡುಗೊಲ್ಲರ ಆರಾಧ್ಯದೈವ ಅಮಾವಾಸ್ಯೆ ಚಿತ್ರಲಿಂಗೇಶ್ವರ ಸ್ವಾಮಿ, ಅಜ್ಜೇರು ಗೊಲ್ಲರ ಈರಲಿಂಗೇಶ್ವರ ಸ್ವಾಮಿ ಹಾಗೂ ಶ್ರೀ ಗೊಲ್ಲಾಳಮ್ಮ ದೇವಿಯ ಕಾಳು ಹಬ್ಬ ಬಹಳ ವಿಜೃಂಭಣೆಯಿಂದ ನೆರವೇರಿತು.
ಈ ಕಾಳುಹಬ್ಬದ ಹಿನ್ನೆಲೆಯಲ್ಲಿ ದೇವರಿಗೆ ಫೆಬ್ರವರಿ 19 ರಿಂದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಸೋಮವಾರ ರಾತ್ರಿ ವಾರದ ಪೂಜೆ ದೊಡ್ಡ ಪೂಜೆ ಸ್ವಾಮಿಗೆ ನೈವೇದ್ಯ, ಮಹಿಳೆಯರಿಂದ ತಂಬಿಟ್ಟಿನ ಆರತಿ ಹಾಗೂ ಮೇಲ್ದಿಪ ಪೂಜೆ ಸಲ್ಲಿಸಲಾಯಿತು.
ಮಂಗಳವಾರ ಬೆಳಗ್ಗೆ ದೇವರಿಗೆ ವಿವಿಧ ಹೂಗಳಿಂದ ಅಲಂಕಾರ ನೆರವೇರಿಸಿ, ದೇವರಿಗೆ ಬೇಯಿಸಿದ ಕಾಳು ಅರ್ಪಿಸಿ, ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿ ಅನ್ನಸಂತರ್ಪಣೆ ವ್ಯವಸ್ಥೆಯನ್ನು ಮಾಡಲಾಗಿತ್ತು.
ಈ ಕಾಳುಹಬ್ಬದಲ್ಲಿ ಹಿಂದುಳಿದ ವರ್ಗಗಳ ಮುಖಂಡ ಡಿಟಿ ಶ್ರೀನಿವಾಸ್, ದೇವರ ಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಪತ್ರಕರ್ತ ಚಿದಾನಂದಮಸ್ಕಲ್, ಗ್ರಾಮ ಪಂಚಾಯಿತಿ ಸದಸ್ಯ ಎಂ. ಹರೀಶ್, ದಿನೇಶ್, ನಿಜಲಿಂಗಪ್ಪ, ಡಿ. ರಾಮಣ್ಣ, ನಿಂಗಪ್ಪ, ಡಿ. ನಿಜಲಿಂಗಪ್ಪ, ಹರೀಶ್, ಪಾಂಡು, ರಾಜಪ್ಪ, ಎನ್. ಬಂಗಾರಪ್ಪ, ಸಣ್ಣೀರಪ್ಪ, ಸೇರಿದಂತೆ ಸುತ್ತಲಿನ ಸಾವಿರಾರು ಭಕ್ತರು ಆಗಮಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments