ತಾಲ್ಲೂಕಿನ ಶಾಲೆಗಳಲ್ಲಿ ಗುಣಾತ್ಮಕಶಿಕ್ಷಣಕ್ಕಾಗಿ ವಿಶೇಷವಾದ ಕಾರ್ಯಕ್ರಮಗಳನ್ನ ಕರ್ನಾಟಕ ಸರ್ಕಾರ ಹಮ್ಮಿಕೊಳ್ಳಲಾಗಿದೆ ತಾ||ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಹೇಳಿಕೆ

by | 08/11/23 | ಶಿಕ್ಷಣ


ಹಿರಿಯೂರು ನ.8
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣವನ್ನು ನೀಡಲು ವಿಶೇಷ ಕಾರ್ಯಗಳನ್ನು ಕರ್ನಾಟಕ ಸರ್ಕಾರವು ಹಮ್ಮಿಕೊಂಡಿದ್ದು, ಸರ್ಕಾರದ ಜೊತೆ ಸಮುದಾಯವು ಸಹ ಕೈಜೋಡಿಸಿದಾಗ ಮಾತ್ರ ಕಾರ್ಯಕ್ರಮಗಳು ಯಶಸ್ವಿಯಾಗುತ್ತದೆ ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಹೇಳಿದರು.
ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ಉದ್ದೇಶಿಸಿ ನಡೆಸಲಾದ ಆನ್ ಲೈನ್ ಸಭೆಯಲ್ಲಿ ಪಾಲ್ಗೊಂಡು ತಾಲೂಕಿನಲ್ಲಿ ಆಯೋಜಿಸಿರುವ ನಾಲ್ಕು ವಿಶೇಷ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲು ಸೂಚಿಸಿ, ಅವರು ಮಾತನಾಡಿದರು.
ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ರಚಿಸಿ, ಆ ವಿದ್ಯಾರ್ಥಿಗಳಿಂದ ತಾವು ಓದಿದ ಶಾಲೆಗೆ ಗುಣಾತ್ಮಕತೆಯನ್ನು ಹೆಚ್ಚಿಸಲು ಅಗತ್ಯವಿರುವ ಸಾಧನ ಸಲಕರಣೆ ಮತ್ತಿತರ ಸಾಮಗ್ರಿಗಳನ್ನು ಪಡೆಯಲು ಕ್ರಮ ವಹಿಸಲು ತಿಳಿಸಿದರು.
ಎಲ್ಲಾ ಶಾಲೆಗಳಲ್ಲೂ ಇದೇ ತಿಂಗಳ 17 ಮತ್ತು 18ನೇ ತಾರೀಖಿನಂದು ಪೋಷಕರ ಸಭೆಗಳನ್ನು ಆಯೋಜಿಸಿ ಅಲ್ಲಿ ಓದುತ್ತಿರುವ ಮಕ್ಕಳ ಎಲ್ಲಾ ಪೋಷಕರು ವಿಶೇಷವಾಗಿ ತಾಯಂದಿರು ತಪ್ಪದೇ ಸಭೆಗೆ ಹಾಜರಾಗಲು ತಿಳಿಸಿದಲ್ಲದೆ, ಈ ಸಭೆಯಲ್ಲಿ ಮಕ್ಕಳ ಪ್ರಗತಿ ಬಗ್ಗೆ ಚರ್ಚಿಸಿ ಮಕ್ಕಳ ಉತ್ತಮ ಕಲಿಕೆಗಾಗಿ ಶಿಕ್ಷಕರು ಮತ್ತು ಪೋಷಕರು ಮಾಡಬೇಕಾದ ಕಾರ್ಯಗಳನ್ನು ಪರಸ್ಪರ ಅರಿತುಕೊಳ್ಳಬೇಕು ಎಂಬುದಾಗಿ ಹೇಳಿದರು.
ಈ ಸಭೆಗೆ ಪ್ರತಿಯೊಬ್ಬ ಪೋಷಕರು ಹಾಜರಾಗುವಂತೆ ಮನವೊಲಿಸಲು ತಿಳಿಸಿ ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು. ಈ ಕಾರ್ಯಕ್ರಮಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದಲೇ ಗೊತ್ತುಪಡಿಸಿದ ಒಬ್ಬ ಸಂಪನ್ಮೂಲ ವ್ಯಕ್ತಿಯನ್ನು ಮುಖ್ಯ ಅತಿಥಿಯಾಗಿ ಕಳುಹಿಸಲಾಗುವುದು ಎಂದು ತಿಳಿಸಿದರು.
ಶಾಲೆಗಳಲ್ಲಿ ಪ್ರಸ್ತುತ ಆಯೋಜಿಸುತ್ತಿರುವ ಶೈಕ್ಷಣಿಕ ಪ್ರವಾಸಗಳು ಮತ್ತು ಶಾಲಾ ವಾರ್ಷಿಕೋತ್ಸವಗಳು ಮಕ್ಕಳ ಶೈಕ್ಷಣಿಕ ಕಲಿಕೆಗೆ ಅಷ್ಟಾಗಿ ಪೂರಕವಾಗಿ ಇಲ್ಲದಿರುವುದನ್ನು ಪ್ರಸ್ತಾಪಿಸಿ, ಎರಡು ಕಾರ್ಯಕ್ರಮಗಳಿಗೂ ವಿಶೇಷವಾದ ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದು, ಅದರಂತೆ ಕಾರ್ಯಕ್ರಮಗಳನ್ನು ನಡೆಸಲು ಸೂಚಿಸಿದರು.
ಶೈಕ್ಷಣಿಕ ಪ್ರವಾಸಗಳು ಕೇವಲ ತೋರಿಕೆಗಾಗದೆ ಮಕ್ಕಳಿಗೆ ತರಗತಿ ಕೋಣೆಯಲ್ಲಿ ಕಲಿತಿದ್ದನ್ನು ಕ್ಷೇತ್ರ ಪ್ರವಾಸಗಳ ಮೂಲಕ ಇನ್ನಷ್ಟು ಅರ್ಥ ಮಾಡಿಕೊಳ್ಳುವಂತೆ ಇರಬೇಕು, ವಾರ್ಷಿಕೋತ್ಸವಗಳಲ್ಲಿ ಕೇವಲ ಚಲನಚಿತ್ರ ಗೀತೆಗಳಿಗೆ ನೃತ್ಯವನ್ನು ಆಯೋಜಿಸಿ ಶಾಲೆ, ಶಿಕ್ಷಕರು ಮತ್ತು ಮಕ್ಕಳ ಸಾಧನೆಯನ್ನು ನಿರ್ಲಕ್ಷಿಸುವುದು ಸೂಕ್ತವಲ್ಲ ಎಂದು ಹೇಳಿದರು.
ವಾರ್ಷಿಕೋತ್ಸವ ಸಮಾರಂಭಗಳಲ್ಲಿ ಮಕ್ಕಳ ಸಾಧನೆಯನ್ನು ಬಿಂಬಿಸುವ, ಶಾಲೆಯ ಪ್ರಗತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಮಾಡಬೇಕು ಹಾಗೂ ಮಕ್ಕಳಿಗೆ ಪ್ರೇರಣೆ ನೀಡುವಂತಹ ವ್ಯಕ್ತಿಗಳನ್ನು, ಶಾಲೆಗೆ ಸಹಾಯ, ಸಹಕಾರಗಳನ್ನು ನೀಡಿದಂತಹ ವ್ಯಕ್ತಿಗಳನ್ನು ಕರೆದು ಸನ್ಮಾನಿಸುವುದು ಸೂಕ್ತವಾಗಿದೆ ಎಂದರಲ್ಲದೆ,
ಈ ನಿಟ್ಟಿನಲ್ಲಿ ಶಾಲಾ ಕಾರ್ಯಕ್ರಮಗಳು ಸ್ಥಳೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಹಾಗೂ ಜ್ಞಾನಾರ್ಜನೆಗೆ ಪೂರಕವಾಗಿರುವಂತೆ ಆಯೋಜಿಸಬೇಕು ಎಂಬುದಾಗಿ ಹೇಳಿದರು.
ಈ ಆನ್ ಲೈನ್ ಸಭೆಯಲ್ಲಿ ಹಿರಿಯೂರು ತಾಲ್ಲೂಕಿನ 410 ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ತಾಲೂಕಿನ ಮೇಲ್ವಿಚಾರಣಾ ಸಿಬ್ಬಂದಿಗಳು ವಿವಿಧ ಶಾಲೆಗಳಿಂದ ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page