ಹಿರಿಯೂರು:
ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ (ಗೋರ್ಲಡಕು) ಅವರು ಪ್ರತಿ ವರ್ಷದಂತೆ ಈ ಬಾರಿಯೂ ಸಹ ತಮ್ಮ ಹುಟ್ಟುಹಬ್ಬವನ್ನು ಶುಭೋದಯ ಸೇವಾ ವೃದ್ದಾಶ್ರಮದಲ್ಲಿ ಆಚರಿಸಿಕೊಂಡರು.
ಅಲ್ಲದೆ, ಅವರ ಹುಟ್ಟುಹಬ್ಬದ ಪ್ರಯುಕ್ತ ಶುಭೋದಯ ಸೇವಾ ವೃದ್ದಾಶ್ರಮದ ಹಿರಿಯರಿಗೆ ಬೆಳಗಿನ ಉಪಹಾರ ಹಾಗೂ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು ಎಂಬುದಾಗಿ ವೃದ್ದಾಶ್ರಮದ ಮುಖ್ಯಸ್ಥರಾದ ತೇಜೋಮೂರ್ತಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಜಿ.ಎಲ್.ಮೂರ್ತಿ ಮಾತನಾಡಿ, ವೃದ್ಧಾಶ್ರಮದ ಹಿರಿಯರ ಮಧ್ಯೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ. ಎಂದರಲ್ಲದೆ, ಮುಂದಿನ ದಿನಗಳಲ್ಲಿ ಆಶ್ರಮಕ್ಕೆ ಹಾಗೂ ಆಶ್ರಮದಲ್ಲಿನ ವೃದ್ಧರಿಗೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಸಹಾಯ ಸಹಕಾರ ಮಾಡವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕಲ್ಲಟ್ಟಿಹರೀಶ್, ಪಟ್ಟರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಿರಣ್ ಚಂದ್ರು, ಮಾಲತೇಶ್ ಸೇರಿದಂತೆ ಅನೇಕ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸೇವಾ ಕಾರ್ಯಕ್ಕೆ ಆಗಮಿಸಿದ್ದ ಎಲ್ಲರಿಗೂ ಶ್ರೀ ಶುಭೋದಯ ಸೇವಾ ವೃದ್ದಾಶ್ರಮದ ಸಮಿತಿವತಿಯಿಂದ ಹೃದಯಪೂರ್ವಕ ಧನ್ಯವಾದಗಳನ್ನು ಸಮರ್ಪಿಸುತ್ತೇವೆ ಸೇವಾ ವೃದ್ಧಾಶ್ರಮದ ಮುಖ್ಯಸ್ಥರಾದ ತೇಜೋಮೂರ್ತಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments