ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

by | 08/09/23 | ಆರೋಗ್ಯ


ದಾವಣಗೆರೆ; ಸೆ. 8 : ಮಿಷನ್ ಇಂದ್ರಧನುಷ್ 0.5 ಅಭಿಯಾನದ ಎರಡನೇ ಹಂತ ಪ್ರಾರಂಭವಾಗುತ್ತಿದ್ದು, ಲಸಿಕೆಗಳನ್ನು ಹಾಕಿಸದೇ ಇರುವ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆಗಳನ್ನು ಹಾಕಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರ್.ಸಿ.ಹೆಚ್ ಅಧಿಕಾರಿ ಡಾ. ರೇಣುಕಾ ಆರಾಧ್ಯ ತಿಳಿಸಿದರು.
ಗುರುವಾರ ಭರತ್ ಕಾಲೋನಿ, 9 ನೇ ಕ್ರಾಸ್ ಸೇವಾಲಾಲ್ ದೇವಸ್ಥಾನದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಉದ್ದೇಶ ಪೌಷ್ಠಿಕ ಆಹಾರದ ಬಗ್ಗೆ ಜನರಿಗೆ ಅರಿವು ಮೂಡಿಸಿವುದಾಗಿದೆ. ಇಲ್ಲಿ ಪಡೆದ ಮಾಹಿತಿ ತಿಳಿದುಕೊಂಡು ಆರೋಗ್ಯ ರಕ್ಷಣೆಗೆ ಅಗತ್ಯವಾದ ಆಹಾರ ಸೇವಿಸಬೇಕು. ಹಾಗೂ ಹೆಣ್ಣು ಮಕ್ಕಳಿಗೆ 21 ವರ್ಷ ತುಂಬಿದ ನಂತರವೇ ಮದುವೆ ಮಾಡಬೇಕು, ಆಗ ಗರ್ಭಪಾತ ಸಂಖ್ಯೆ ಕಡಿಮೆಯಾಗುತ್ತದೆ ಎಂದು ತಿಳಿಸಿದರು.
ತಾಲ್ಲೂಕು ವೈದ್ಯಾಧಿಕಾರಿ ಡಾ. ದೇವರಾಜ್ ಮಾತನಾಡಿ ಗರ್ಭಿಣಿಯರಿಗೆ ಹಿಮೊಗ್ಲೋಬಿನ್ 10 ಗ್ರಾಂ ಇರಬೇಕು, ಐರನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳನ್ನು ಸಮಯಕ್ಕೆ ಸರಿಯಾಗಿ ತೆಗಡೆದುಕೊಳ್ಳಬೇಕು ಮತ್ತು ಪ್ರತಿಯೊಬ್ಬ ಗರ್ಭಿಣಿ ತನ್ನ ಗರ್ಭಾವಸ್ಥೆಯಲ್ಲಿ 10 ಕೆ.ಜಿ. ತೂಕ ಹೆಚ್ಚಳವಾಗಬೇಕು ಆಗ ಆರೋಗ್ಯವಂತ ಮಗು ಜನಿಸುತ್ತದೆ ಎಂದು ತಿಳಿಸಿದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪ್ರಿಯದರ್ಶಿನಿ ಮಾತನಾಡಿ ಪೋಷಣ್ ಅಭಿಯಾನ ಯೋಜನೆಯು 2018 ರಲ್ಲಿ ಪ್ರಾರಂಭವಾಗಿದೆ. ಪ್ರತಿ ತಿಂಗಳು ಸೆಪ್ಟಂಬರ್ ಮಾಹೆಯ 1 ನೇ ತಾರೀಖಿನಿಂದ 30 ನೇ ತಾರೀಖಿನವರೆಗೆ ಪೋಷಣ್ ಮಾಸಾಚರಣೆ ಹೆಸರಿನಲ್ಲಿ ಪ್ರತಿ ವರ್ಷವು ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೇವೆ. ಈ ಯೋಜನೆಯಡಿ ಬರುವ ಪೋಷಣೆ ಟ್ರಾಕರ್‍ನಲ್ಲಿ ಮಕ್ಕಳನ್ನು ತೂಕ ಮಾಡಿ ಬರುವ ಸ್ಯಾಮ್ ಮಕ್ಕಳನ್ನು ಎನ್.ಆರ್.ಸಿ ಕೇಂದ್ರಕ್ಕೆ 14 ದಿನ ದಾಖಲಿಸಿ ಮಗುವನ್ನು ಅಪೌಷ್ಠಿಕತೆಯಿಂದ ಪೌಷ್ಠಿಕತೆಗೆ ತರುತ್ತೇವೆ. ಸ್ತನ್ಯಪಾನ ಸಪ್ತಾಹ, ಸಮುದಾಯ ಆಧಾರಿತ ಚಟುವಟಿಕೆಗಳನ್ನು ಮಾಡುವ ಮೂಲಕ ಜನರಿಗೆ ಅರಿವು ಮೂಡಿಸುತ್ತೇವೆ ಎಂದು ತಿಳಿಸಿದರು.
ಮಕ್ಕಳ ತಜ್ಞೆ ಡಾ. ಚೈತಾಲಿ ಎನ್.ಎಸ್ ಮಾತನಾಡಿ ಗರ್ಭಿಣಿ ತಾಯಿಯ ಪೌಷ್ಠಿಕ ಮಟ್ಟದ ಆಧಾರದ ಮೇಲೆ ಹುಟ್ಟುವ ಮಗುವಿನ ಆರೋಗ್ಯ ಹಾಗೂ ಪೌಷ್ಠಿಕ ಮಟ್ಟ ನಿರ್ಧಾರವಾಗುತ್ತದೆ. ರಕ್ತ ಹೀನತೆಯು ಗರ್ಭಿಣಿ, ಬಾಣಂತಿ ಹಾಗೂ ಕಿಶೋರಿಯರಲ್ಲಿ ಒಂದು ಜ್ವಲಂತ ಸಮಸ್ಯೆಯಾಗಿದೆ. ಪ್ರತಿ ದಿನ ಸಮತೋಲನ ಆಹಾರವನ್ನು ಸೇವಿಸುವುದರಿಂದ ಮಾತ್ರ ಪರಿಣಾಮಕಾರಿಯಾಗಿ ರಕ್ತ ಹೀನತೆಯನ್ನು ತಡೆಗಟ್ಟಬಹುದು. ಗರ್ಭಾವಸ್ಥೆಯಲ್ಲಿ ತಾಯಂದಿರನ್ನು ಸೀಮಂತ ಕಾರ್ಯದಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ಅವರು ಸಂತೋಷವಾಗಿರುತ್ತಾರೆ, ತಾಯಿ ಹಾಲಿಗಿಂತ ಶ್ರೇಷ್ಠ ಆಹಾರವಿಲ್ಲ, ಮಗು ಹುಟ್ಟಿದ 6 ತಿಂಗಳವರೆಗೆ ನಂತರ ಮಗುವಿಗೆ ತಾಯಿಯ ಹಾಲು ಸಾಕಾಗುವುದಿಲ್ಲವಾದ್ದರಿಂದ ಮೇಲಿನ ಆಹಾರವನ್ನು ಹಂತಹಂತವಾಗಿ ಕೊಡಲು ಪ್ರಾರಂಭಿಸಬೇಕು. ಪೌಷ್ಠಿಕತೆ ವಿಚಾರವಾಗಿ ತಾವು ತಿಳಿದುಕೊಂಡಿರುವ ಮಾಹಿತಿಯನ್ನು ಬೇರೆಯವರಿಗೆ ತಿಳಿಸಿ ಹೆಚ್ಚಿನ ಪ್ರಚಾರ ನೀಡಬೇಕೆಂದು ತಿಳಿಸಿದರು.
ಬಿ.ಹೆಚ್.ಇ ಉಮಾಪತಿ ಹೆಚ್. ಆರೋಗ್ಯವಂತ ಮಗು ಹೇಗಿರಬೇಕು & ಗರ್ಭಿಣಿಯರು ಸೇವಿಸಬೇಕಾದ ಆಹಾರಗಳ ಕುರಿತು, ಹಿರಿಯ ಆರೋಗ್ಯ ನಿರೀಕ್ಷಾಣಾಧಿಕಾರಿ ವೆಂಕಟಚಲಕುಮಾರ್ ಪಿ.ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಫಲಾನುಭವಿಗಳಿಗೆ ಪೋಷಣ್ ಅಭಿಯಾನ ಮಹತ್ತವದ ಬಗ್ಗೆ ವಿಸ್ತಾರವಾಗಿ ತಿಳಿಸಿದರು.
ವಿಶೇಷ ಕಾರ್ಯಕ್ರಮಗಳು : ಕಾರ್ಯಕ್ರಮದಲ್ಲಿ ವಿಶೇಷವಾಗಿ ಆಯೋಜಿಸಲಾಗಿದ್ದ ವಿವಿಧ ಆಹಾರ ಪದಾರ್ಥಗಳಿಂದ ತಯಾರಿಸಿದಂತಹ ಪೌಷ್ಠಿಕ ಆಹಾರ ಪದಾರ್ಥಗಳ ಪದರ್ಶನ, ಗರ್ಭಿಣಿಯರಿಗೆ ಸೀಮಂತ ಕಾರ್ಯ ಹಾಗೂ ಆರೋಗ್ಯವಂತ ಮಕ್ಕಳಿಗೆ ಬೇಬಿ ಶೋ ಕಾರ್ಯಕ್ರಮವನ್ನು ಏರ್ಪಡಿಸಿ ಪ್ರಶಸ್ತಿಗಳನ್ನು ವಿತರಿಸಲಾಯಿತು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶ್ರೀಮತಿ.ಸುಧಾ ಮಕರಿ ಮತ್ತು ಕವಿತಾ ಅನ್ವೇರಿ ಗರ್ಭಿಣಿಯರು, ಬಾಣಂತಿಯರು, ಫಲಾನುಭವಿಗಳು, ಮೇಲ್ವಿಚಾರಕಿಯರು, ಪೋಷಣ್ ಕೋ ಆರ್‍ಡಿನೇಟರ್, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಮುಂತಾದವರು ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page