ತೀವ್ರತರ ಖಾಯಿಲೆಯಿಂದ ಬಳಲುವ ಶಿಕ್ಷಕರು, ದೈಹಿಕ ಅಂಗವಿಕಲತೆಯುಳ್ಳ ಶಿಕ್ಷಕರು, ಗರ್ಭಿಣ ಯರು ನವಜಾತ ಶಿಶುವುಳ್ಳ ಶಿಕ್ಷಕಿಯರನ್ನು ಚುನಾವಣೆ ಕರ್ತವ್ಯಕ್ಕೆ ನೆಮಕ ಮಾಡಿಕೊಳ್ಳದಂತೆ ಮನವಿ.

by | 27/03/24 | ಸುದ್ದಿ


ಚಿತ್ರದುರ್ಗ ಮಾ.27 ಮುಂಬರುವ ಲೋಕಸಭಾ ಚುನಾವಣೆಗೆ ದೈಹಿಕ ಅಂಗವಿಕಲ ಶಿಕ್ಷಕರು, ಗರ್ಭಿಣ ಯರು, ನವಜಾತ ಶಿಶು ಹೊಂದಿರುವ ಶಿಕ್ಷಕಿಯರು ಹಾಗೂ ಮಾರಣಾಂತಿಕ ಖಾಯಿಲೆಯುಳ್ಳ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಬಾರದಾಗಿ ಮನವಿ ಮಾಡಿದ್ದೇವೆ ಎಂದು ಚಿತ್ರದುರ್ಗ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ ಬಿ ಮಹಂತೇಶ ಹೇಳಿದರು
ಚಿತ್ರದುರ್ಗ ನಗರದ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಂಗಳವಾರ ಚಿತ್ರದುರ್ಗ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ( ರಿ) ಹಾಗೂ ವಿವಿಧ ತಾಲೂಕುಗಳ ಶಿಕ್ಷಕರ ಸಂಘದ ವತಿಯಿಂದ ಸಂಘದ ಪದಾಧಿಕಾರಿಗಳು ಚುನಾವಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು
ಭಾರತ ಚುನಾವಣಾ ಆಯೋಗ ಮತ್ತು ಸರ್ಕಾರದ ಸೂಚನೆಯಂತೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿರುವ ತೀವ್ರತರ ಖಾಯಿಲೆಯಿಂದ ಬಳಲುವ ಶಿಕ್ಷಕರು, ದೈಹಿಕ ಅಂಗವಿಕಲತೆಯುಳ್ಳ ಶಿಕ್ಷಕರು, ಗರ್ಭಿಣ ಯರು ನವಜಾತ ಶಿಶುವುಳ್ಳ ಶಿಕ್ಷಕಿಯರನ್ನು ಜಿಲ್ಲಾ ಚುನಾವಣಾಧಿಕಾರಿಗಳು ಮುಂಬರುವ ಸಾರ್ವತ್ರಿಕ ಚುನಾವಣಾ ಕಾರ್ಯಕ್ಕೆ ನಿಯೋಜಿಸದೆ ಇವರಿಗೆ ಚುನಾವಣಾ ಕರ್ತವ್ಯದಿಂದ ವಿನಾಯ್ತಿ ನೀಡಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದೇವೆ ಎಂದರು
ಪ್ರಧಾನ ಕಾರ್ಯದರ್ಶಿ ಜಿ ಟಿ ಹನುಮಂತಪ್ಪ ಮಾತನಾಡಿ ಶಿಕ್ಷಕರ ಮನವಿಯಂತೆ ಸಂಘವು ಜಿಲ್ಲಾ ಮತ್ತು ತಾಲೂಕು ಚುನಾವಣಾಧಿಕಾರಿಗಳಿಗೆ ಲಿಖಿತವಾಗಿ ಮನವಿ ಪತ್ರ ನೀಡಿ ಶಿಕ್ಷಕರ ಹಿತ ದೃಷ್ಟಿಯಿಂದ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು
ಮನವಿ ಪತ್ರ ಸಲ್ಲಿಸುವ ವೇಳೆ ಚುನಾವಣಾ ಶಾಖೆಯ ಅಧಿಕಾರಿ ಸಂತೋಷ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಜಿ ಬಿ ಮಹಂತೇಶ, ಗೌರವಾಧ್ಯಕ್ಷ ಕೆ ವೀರಣ್ಣ, ಪ್ರಧಾನ ಕಾರ್ಯದರ್ಶಿ ಜಿ ಟಿ ಹನುಮಂತಪ್ಪ, ಸಂಘದ ಗೌರವಾಧ್ಯಕ್ಷ ಕೆ ವೀರಣ್ಣ, ಕಾರ್ಯಾಧ್ಯಕ್ಷ ಆರ್ ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಎಸ್ ಕೆಂಚಪ್ಪ, ಚಿತ್ರಹಳ್ಳಿ ರುದ್ರಪ್ಪ, ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page