ತ್ವರಿತವಾಗಿ ರಸ್ತೆ ಬಿಡಿಸಿಕೊಡಲು ಜಿಲ್ಲಾಧಿಕಾರಿಗಳಿಗೆ “ಡಾಗ್ ಸರ್ಕಲ್” ನ ಮುಖಂಡರುಗಳಿಂದ ಒತ್ತಾಯ

by | 20/09/23 | ಪ್ರತಿಭಟನೆ


ಹಿರಿಯೂರು :
ಚಂದ್ರಾ ಲೇ ಔಟ್ ರಸ್ತೆ ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಯಾವುದೇ ಮೇಲಾಧಿಕಾರಿ ಅಥವಾ ನ್ಯಾಯಾಲಯದ ತಡೆಯಾಜ್ಞೆ ಇಲ್ಲದಿದ್ದರೂ ಕೂಡ 13 ವರ್ಷಗಳ ಕಾಲ ರಸ್ತೆ ಬಿಡಿಸಿಕೊಡಲು ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂಬುದಾಗಿ ಉಪ್ಪಾರ ಸಂಘದ ಅಧ್ಯಕ್ಷ ಆಲೂರು ರಾಮಣ್ಣ ಗಂಭೀರ ಆರೋಪ ಮಾಡಿದ್ದಾರೆ.
ವೇದಾವತಿ ನಗರದ 3 ನೇ ವಾರ್ಡ್ ಚಂದ್ರಾ ಲೇ ಔಟ್ ಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಜಿಲ್ಲಾಧಿಕಾರಿಗಳ ಆದೇಶ ಸಂಖ್ಯೆ :ಸಿ ಆರ್ :286/2009-10 2010 ಡಿಸೆಂಬರ್ 16 ರಂದು ಹಿರಿಯೂರು ತಹಶೀಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳಿಗೆ ಬಬ್ಬೂರು ಸರ್ವೇ ನಂಬರ್ 40/3 ರಲ್ಲಿ ಒತ್ತುವರಿ ಮಾಡಿರುವ ರಸ್ತೆ ತೆರವುಗೊಳಿಸಲು ಜಿಲ್ಲಾಧಿಕಾರಿ ಆದೇಶ ಮಾಡಿರುತ್ತಾರೆ.
ದಾರಿ ಅಡ್ಡಿಪಡಿಸಿರುವ ಎದುರುದಾರರು ಜಿಲ್ಲಾಧಿಕಾರಿ ಆದೇಶದಂತೆ ದಾರಿ ಬಿಡದೆ ಹಿರಿಯೂರು ಜೆ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ಓ ಎಸ್ :ನಂ :17/2010 ರಂತೆ ದೂರು ದಾಖಲಿಸಿ ನಿರಂತರವಾಗಿ 7 ವರ್ಷಗಳ ಕಾಲ ಕೇಸು ನಡೆಸಿಕೊಂಡು ಬಂದಿದ್ದು, ಆದರೆ ಘನ ನ್ಯಾಯಾಲಯ 2017 ರ ಜೂನ್ 6 ವಿನಾಕಾರಣ ವ್ಯಾಜ್ಯ ಉಂಟುಮಾಡಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದರಿಂದ ದೂರುದಾರರೆ ಎದುರುದಾರರಿಗೆ ನ್ಯಾಯಾಲಯದ ಖರ್ಚು ನೀಡಲು ಆದೇಶಿಸಿ ಕೇಸು ವಜಾ ಆಗಿರುತ್ತದೆ.
ಆದಾಗ್ಯೂ ಮತ್ತೊಮ್ಮೆ ಹಿರಿಯೂರು ಜೆ.ಎಮ್.ಎಫ್.ಸಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಆರ್.ಎ.ನಂ.15/2017 ರಂತೆ ಮೇಲ್ಮನವಿ ಸಲ್ಲಿಸಿ 6 ವರ್ಷಗಳ ಬಳಿಕ 2023 ಜೂನ್ 13 ರಂದು ಮೇಲ್ಮನವಿ ಕೂಡ ವಜಾ ಆಗಿದ್ದು, ಓ.ಎಸ್. ನಂ:17/2010 ರ ಆದೇಶವನ್ನು ಎತ್ತಿ ಹಿಡಿಯಲಾಗಿದೆ.
ಈ ಪ್ರಯುಕ್ತ ಜಿಲ್ಲಾಧಿಕಾರಿಗಳ ಆದೇಶದಂತೆ ಹಿರಿಯೂರು ತಹಶೀಲ್ದಾರ್ ಮತ್ತು ನಗರಸಭೆ ಪೌರಾಯುಕ್ತರು ರಸ್ತೆ ಬಿಡಿಸಿಕೊಡಲು ಜವಾಬ್ದಾರರಾಗಿರುತ್ತಾರೆ ಎಂಬುದಾಗಿ ನಾಗರೀಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಸಂತೋಷ ರಾಥೋಡ್ ತಿಳಿಸಿದ್ದಾರೆ.
ಚಂದ್ರಾ ಲೇ ಔಟ್ ನಾಗರೀಕ ಹಿತರಕ್ಷಣಾ ಸಮಿತಿ ಮತ್ತು ಉಪ್ಪಾರ ಸಂಘದ ಪದಾಧಿಕಾರಿಗಳು ನಿರಂತರವಾಗಿ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ,ದಾರಿ ಬಿಡಿಸಿಕೊಡಲು ಸತ್ಯಾಗ್ರಹ ಮಾಡುತ್ತಿದ್ದರೂ ಕೂಡ ಅಧಿಕಾರಿಗಳು ಏಕೆ ದಾರಿ ಬಿಡಿಸಿಕೊಡಲು ಮುಂದೆ ಬರುತ್ತಿಲ್ಲ? ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈಗಾಗಲೇ 13 ವರ್ಷಗಳ ಕಾಲ ದಾರಿಬಿಡಿಸಿಕೊಡದೆ ಈಭಾಗದ ನಾಗರೀಕರಿಗೆ ತೊಂದರೆಯಾಗಿರುತ್ತದೆ.
ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯನವರೆ ಚಿತ್ರದುರ್ಗ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರೂ ಕೂಡ ಈ ಭಾಗದ ನಾಗರೀಕರ ರಸ್ತೆ ಸಮಸ್ಯೆ ಜೀವಂತವಾಗಿಟ್ಟಿರುವ ಅಧಿಕಾರಿಗಳ ವಿಳಂಬ ನೀತಿ ಸಲ್ಲದು ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿರಮೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಯುಕ್ತ ಮೇಲಾಧಿಕಾರಿ ಆದೇಶ ಪಾಲಿಸದೆ ಕರ್ತವ್ಯ ನಿರ್ಲಕ್ಷ್ಯ ಮಾಡಿರುವ ಈ ಹಿಂದೆ ಇದ್ದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ,ಜಿಲ್ಲಾಧಿಕಾರಿಗಳು ಮದ್ಯ ಪ್ರವೇಶ ಮಾಡಿ ಹಾಲಿ ಇರುವ ಅಧಿಕಾರಿಗಳ ಮೂಲಕ ರಸ್ತೆ ಬಿಡಿಸಿಕೊಡಬೇಕೆಂದು ನಾಗರೀಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್.ವಿ.ರಂಗನಾಥ್ ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಟಿ.ಸ್ವಾಮಿ ,ಕಾರ್ಯದರ್ಶಿ ಸಿ.ಜಿ.ಗೌಡ, ಗ್ರಾ ಪಂ ಸದಸ್ಯರಾದ ಶಶಿಕಲಾ ,ಇತರರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page