ಚಳ್ಳಕೆರೆ ಜನಧ್ವನಿ ವಾರ್ತೆ ಫೆ.17ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ತಹಸಿಲ್ ಕಚೇರಿ ಸಭಾಂಗಣದಲ್ಲಿ 5 ದಲಿತ ವಚನಕಾರರ ಜಯಂತಿಯನ್ನು ಸರಕಾರದ ನಿರ್ದೇಶನದಂತೆ ಶನಿವಾರ ಆಚರಿಸಿದರು.
ಶಿವರಾತ್ರಿ ಸಾರ್ವತ್ರಿಕ ರಜೆ ಹಿನ್ನೆಲೆಯಲ್ಲಿ ದಲಿತ ವಚನಕಾರರ ಜಯಂತಿ ಆಚರಣೆಗೆ ತಹಶೀಲ್ದಾರ್ ಕಚೇರಿಯ ಕೆಲ ಸಿಬ್ಬಂದಿ ಹಾಗೂ ಕೆಲ ದಲಿತ ಮುಖಂಡರು ಹೊರತುಪಡಿಸಿದರೆ, ಅನ್ಯ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಗೈರಾಜರಾತಿ ಎದ್ದು ಕಾಣುತ್ತಿತ್ತು. ನಗರಸಭೆ ಅಧ್ಯಕ್ಷೆ ಸುಮಕ್ಕ.ಉಪಾಧ್ಯಕ್ಷೆ ಮಂಜುಳಾ. ತಹಸೀಲ್ದಾರ್ ರೇಹಾನ್ ಪಾಷಾ ವಚನಕಾರರಾದ ಡೋಹರ ಕಕ್ಕಯ್ಯ, ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಮಾದಾರ ಕೇತಯ್ಯ, ಉರಿಲಿಂಗಪೆದ್ದಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಿ ಗೌರವ ಸಮರ್ಪಿಸಿದರು. ದಲಿತ ವಚನಕಾರರ ಕುರಿತು ಮೈತ್ರಿಧ್ಯಾಮಯ್ಯ ಉಪನ್ಯಾಸ ಮಾಡಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments