ಚಳ್ಳಕೆರೆ ಫೆ.17
ದಲಿತ ವಚನಕಾರರು ಸಮಾಜದ ಓರೆ ಕೋರೆಗಳನ್ನು ತಿದ್ದುಕೆಲಸ ಮಾಡಿದ್ದಾರೆ. ೧೨ ನೇ ಶತಮಾನದಲ್ಲಿಯೇ ಮಾನವರೆಲ್ಲರೂ ಒಂದೇ ಎಂದು ತೋರಿಸಿಕೊಟ್ಟ ಅವರ ವಚನಗಳು ಇಂದಿನ ಸಮಾಜಕ್ಕೆ ಹೆಚ್ಚು ಪ್ರಸ್ತುತವಾಗಿದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಗಂಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣೆ ಸಮಿತಿ ಹಾಗೂ ದಲಿತ ಸಮುದಾಯಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ದಲಿತ ವಚನಕಾರರ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರೆವೇರಿಸಿ ಮಾತನಾಡಿದರು.
೧೨ ನೇ ಶತಮಾಗಳ ಕಾಲದಲ್ಲಿ ಅಂತರ್ಜಾತಿ ವಿವಾಹ, ಅಸ್ಪರ್ಶತೆ ನಿವಾರಣೆ. ಸರಕಾರಗಳು ನಡೆಸುವ ಆಡಳತಿದ ಬಗ್ಗೆ ಅಂದೇ ದಲಿತವಚನಕಾರರು ಸರಿಸಮಾನವಾಗಿ ನಿಂತು ಸಮಾಜವನ್ನು ತಿದ್ದುವ ಕಲೆಸ ಮಾಡಿದ್ದರು ಇಂತಹ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಇಂತಹ ವಚನಕಾರರ ಜಯಂತಿಗಳನ್ನು ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರುಸ.
ಸಾಹಿತಿ ಕಿವಿ ಮೃತ್ರಿ ದ್ಯಾಮಣ್ಣ ದಲಿತ ವಚನಕಾರರ ಬಗ್ಗೆ ಉಪನ್ಯಾಸ ನೀಡಿದರು. ನಗರಸಭೆ ಉಪಾಧ್ಯಕ್ಷೆ ಮಂಜುಳಾ, ಮಾಜಿ ನಗಸಭೆ ಉಪಾಧ್ಯಕ್ಷ ವಿಜಯಕುಮಾರ್ ಮಾತನಾಡಿದರು.
ಸಭೆಯಲ್ಲಿ ದಲಿತ ಮುಖಂಡರಾದ ಭೀಮಣ್ಣ, ಮಂಜುನಾಥ, ವೀರಭದ್ರಿ, ಭೀಮನಕೆರೆ ಶಿವಮೂರ್ತಿ , ಪ್ರಕಾಶ್, ಸಮಾಜಕಲ್ಯಾಣ ಇಲಾಖೆಯ ವ್ಯವಸ್ಥಾಪನ ದಯಾನಂದ್, ಕಂದಾಯ ರಾಜಸ್ವನಿರೀಕ್ಷಕ ಲಿಂಗೇಗೌಡ, ಪ್ರಕಾಶ್, ಗ್ರಾಮಲೆಕ್ಕಾಧಿಕಾರಿ ಪ್ರಕಾಶ್. ಶ್ರೀನಿವಾಸ್, ಹಾಗೂ ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತಿದ್ದರು.
ರಾಷ್ಟಿçÃಯ ಹಬ್ಬಗಳ ಆಚರಣೆ ಸಮೀತಿಯಿಂದ ಜಯಂತಿ ಕಾರ್ಯಕ್ರಮಗಳು ನಿಗಧಿತ ಸಮಯಕ್ಕೆ ಜರುಗ ಬೇಕು ಜಯಂತಿ ಕಾರ್ಯಕ್ರಮಗಳಿಗೆ ಗೈರು ಹಾಜರಿಯಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ತಹಶೀಲ್ದಾರ್ ರೇಹಾನ್ ಪಾಷ ತಾಕೀತು ಮಾಡಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments