ದಾಂಪತ್ಯಪುನರ್ ಪ್ರಾಪ್ತಿಗೆ ಅರ್ಜಿ ಸಲ್ಲಿಸಿ 5ವರ್ಷಗಳ ನಂತರ ದಂಪತಿ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥ. ನಗೆ ಬೀರಿದ ದಂಪತಿಗಳು..

by | 09/12/23 | ಕಾನೂನು


ಚಳ್ಳಕೆರೆ ಡಿ.9. ಚಳ್ಳಕೆರೆ ನ್ಯಾಯಾಲಯದಲ್ಲಿ ತಳಕು ಹೋಬಳಿ ವ್ಯಾಪ್ತಿಯ ಮೈಲನಹಳ್ಳಿ ಗ್ರಾಮದ ಗುರುರಾಜ್ ಹಾಗೂ ಅನಿತಾಕುಮಾರಿ ಸುಮಾರು 5 ವರ್ಷಗಳ ನಂತರ ದಂಪತಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು ನಗೆ ಬೀರಿದರು.
ಸುಮಾರು 5 ವರ್ಷಗಳಿಂದ ದಾಂಪತ್ಯ ಪುನರ್ ಪ್ರಾಪ್ತಿ ಕೋರಿ ಸಲ್ಲಿಸುತ್ತಿದ್ದ ಸತಿ–ಪತಿ ಶನಿವಾರ ಒಂದಾಗಿರುವ ಅಪರೂಪದ ಕ್ಷಣಕ್ಕೆ ಚಳ್ಳಕೆರೆ ನ್ಯಾಯಾಲಯ ಸಾಕ್ಷಿಯಾಗಿದೆ. ಇಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕ ಅದಾಲತ್‌ನಲ್ಲಿ ದಂಪತಿ ಮತ್ತೊಮ್ಮೆ ಹಾರ ಬದಲಿಸಿಕೊಂಡಿದ್ದಾರೆ.
ಕೆಲ ಕಾರಣಗಳಿಂದಾಗಿ ದಾಂಪತ್ಯದಲ್ಲಿ ಬಿರುಕು ಮೂಡಿ ದಾಂಪತ್ಯ ಪ್ರಕರಣ ನ್ಯಾಯಾಲದ ಮೆಟ್ಟಿಲೇರಿತ್ತು. ಪತಿ ಹಾಗೂ ಪತ್ನಿ ಇಬ್ಬರು ದಾಂಪಾತ್ಯ ಪುನರ್ ಪ್ರಾಪ್ತಿಗಾಗಿ ನ್ಯಾಯಾಲಕ್ಕೆ ನ್ಯಾಯಾಲಯಕ್ಕೆ 2019ರಲ್ಲಿ ಅರ್ಜಿ ಸಲ್ಲಿಸಿದ್ದರು.

ಶನಿವಾರ ಜೆಎಂಎಫ್‌ಸಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರೇಷ್ಮಕಲ್ಕಪ್ಪ ಗೋಣಿ ಇವರ ಸಮ್ಮುಖದಲ್ಲಿ ಅನಿತಾಕುಮಾರಿ ಪರ ವಕೀಲರಾದ ಕೆ.ಸಿ.ನಾಗರಾಜ್. ಗುರುರಾಜ್ ಪರ ವಕೀಲ ಚಂದ್ರಣ್ಣ ಅರ್ಜಿದಾರರಾದ ಗುರಾಜ್ ಹಾಗೂ ಪತ್ನಿ ಅನಿತಾಕುಮಾರಿ ಜತೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದ್ದರು. ಬಳಿಕ ಇಬ್ಬರೂ ಮನಸ್ಸು ಬದಲಿಸಿದ್ದು, ಮತ್ತೆ ಜೊತೆಯಾಗಿ ಬಾಳಲು ಸಮ್ಮತಿಸಿದ್ದರು. ದಾಂಪತ್ಯದಲ್ಲಿ ಒಡಕು ಮೂಡುವುದು ಸಹಜ. ಸಣ್ಣ ಪುಟ್ಟ ಸಮಸ್ಯೆಗಳಿಗೆಲ್ಲಾ ನ್ಯಾಯಾಲಯದ ಮೆಟ್ಟಿಲು ಏರುವುದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವುದು ಸರಿಯಲ್ಲ. ಇನ್ನು ಮುಂದೆ ಗಂಡ ಹೆಂಡತಿ ಅನ್ಯೋನ್ಯವಾಗಿ ಸುಖ ಸಂಸಾರ ನಡೆಸುವಂತೆ ಗಂಡ ಹೆಂಡತಿಗೆ ಕಿವಿ ಮಾತು ಹೇಳಿ ಸತಿ ಪತಿ ಹಾರ ಬದಲಾಯಿಸಿಕೊಂಡು ಇಬ್ಬರು ನಗೆ ಬೀರಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page