ದಾರಿ ವಿವಾದ ಬಗೆಹರಿಸಲು ಅಪರ ಜಿಲ್ಲಾಧಿಕಾರಿಗಳಿಗೆ ಚಂದ್ರಾ ಲೇ ಔಟ್ ನಾಗರಿಕರ ಮನವಿ

by | 26/05/23 | ಪ್ರತಿಭಟನೆ


ಹಿರಿಯೂರು ಮೇ26 ಟೌನ್ ವೇದಾವತಿ ನಗರದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಚಂದ್ರಾ ಲೇ ಔಟ್ ಗೆ ಸಂಪರ್ಕ ಕಲ್ಪಿಸುವ ಪಾರಂಪರಿಕ ರೂಢಿಗತ ಬಂಡಿದಾರಿಯನ್ನು ಬಬ್ಬೂರ್ ಸರ್ವೇ ನಂಬರ್ 39 ಮತ್ತು 40 ನಡುವೆ ಕಳೆದ 3 ವರ್ಷಗಳಿಂದ ತಡೆ ಹಿಡಿಯಲಾಗಿದೆ.
ಅಡ್ಡಿ ಪಡಿಸಿರುವ ರಸ್ತೆಯನ್ನು Easement Act ಪ್ರಕಾರ ಬಿಡಿಸಿಕೊಡಲು ಕೋರಿ 55 ಜನ ನಾಗರಿಕರು ಮೊಬೈಲ್ ನಂಬರ್ ಸಹಿತ ಸಹಿ ಮಾಡಿದ ಅರ್ಜಿಯನ್ನು ಹಿರಿಯೂರು ತಹಶೀಲ್ದಾರ್,ಪೌರಾಯುಕ್ತರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯಲಾಗಿದೆ,ದಾರಿ ವಿವಾದ ಬಗೆಹರಿಸಲು ಯಾವುದೇ ಅಧಿಕಾರಿಗಳು ಬಾರದೆ ಇದ್ದಾಗ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಿಸಿ ವಿಚಾರಣೆಗೆ ಮಂಡಿಸಿದಾಗ ಜಿಲ್ಲಾಧಿಕಾರಿಗಳಿಗೆ ಸ್ಥಳ ತನಿಖೆ ನಡೆಸಿ ವರದಿ ನೀಡಲು SHRC ಆದೇಶ ಮಾಡಿದ್ದರೂ ಕೂಡ ದಾರಿ ಸಮಸ್ಯೆ ಜೀವಂತವಾಗಿ ಇರುತ್ತದೆ.
ಮುಖ್ಯ ಮಂತ್ರಿಗಳ ಏಕೀಕೃತ ಕುಂದುಕೊರತೆ ಜನಸ್ಪಂದನ ವಿಭಾಗಕ್ಕೆ ದೂರು ದಾಖಲಿಸಿ ವಿಚಾರಣೆಗೆ ಮಂಡಿಸಿದಾಗ ಪೌರಾಯುಕ್ತರು ಮುಂದಿನ ಕೌನ್ಸಿಲ್ ಸಭೆಯಲ್ಲಿ ಅನುದಾನ ಕಾಯ್ದಿರಿಸಿ ರಸ್ತೆ ಮಾಡುವುದಾಗಿ ಹೇಳಿಕೆ ನೀಡಿ ಆನ್ಲೈನ್ ಕಂಪ್ಲೆಂಟ್ ಮುಕ್ತಾಯ ಮಾಡಿರುತ್ತಾರೆ. ಪೌರಾಯುಕ್ತರು ನಗರಸಭೆ ಆರೋಗ್ಯ ನಿರೀಕ್ಷಕರಿಗೆ ರಸ್ತೆ ಸ್ವಚ್ಛವಾಗಿಡಲು ಸೂಚಿಸಿರುವುದಾಗಿ ತಿಳಿಸಿರುತ್ತಾರೆ,ಆದಾಗ್ಯೂ ರಸ್ತೆ ಸ್ವಚ್ಛಗೊಳಿಸಲು ಯಾರೂ ಬಂದಿಲ್ಲ ಎಂದು ದಿನಾಂಕ 26-05-2023 ರಂದು ಚಿತ್ರದುರ್ಗ ಜಿಲ್ಲೆ ಅಪರ ಜಿಲ್ಲಾಧಿಕಾರಿಗಳಿಗೆ ಪೂರಕ ದಾಖಲೆಗಳ ಸಹಿತ ಚಂದ್ರಾ ಲೇ ಔಟ್ ನಾಗರಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಸಂತೋಷ ರಾಥೋಡ್ ಉಪಾಧ್ಯಕ್ಷ ಸ್ವಾಮಿ,ಕಾರ್ಯದರ್ಶಿ ಸಿ ಜಿ ಗೌಡ ಹಾಗೂ ಉಪ್ಪಾರ ಸಮಾಜದ ಅಧ್ಯಕ್ಷರಾದ ಆಲೂರು ರಾಮಣ್ಣನವರು ದೂರು ಅರ್ಜಿ ಸಲ್ಲಿಸಿರುತ್ತಾರೆ,ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಮತ್ತು ನಾಗರೀಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷರಾದ ಎಸ್ ವಿ ರಂಗನಾಥ್ ಉಪಸ್ಥಿತರಿದ್ಧರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page