ದುಡಿತಕ್ಕೆ ಸಿಗದ ಕೂಲಿ ? ಉದ್ಯೋಗ ಖಾತ್ರಿ ಯೋಜನೆಯ ಕೂಲಿ , ಸಾಮಾಗ್ರಿ ಒಟ್ಟು 3386. 39 ಲಕ್ಷ ರೂ ಬಾಕಿ ಯುಗಾದಿಗೆ ಬೇವಿನ ಕಹಿ ನೀಡಿದ ಸರಕಾರ

by | 21/03/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಮಾ.21
ನರೇಗಾ ಯೋಜನೆಯಲ್ಲಿ ದುಡಿದ ಕೂಲಿಕಾರ್ಮಿಕರಿಗೆ ಕೂಲಿ ಹಣ ಕೈ ಸೇರದೆ ಕೇಂದ್ರ ಹಾಗೂ ರಾಜ್ಯ ಸರಕಾರ ಬೇವಿನ ರುಚಿ ತೋರಿಸಿದಂತಾಗಿದೆ.
ಹೌದು ಇದು ಜಿಲ್ಲೆಯಾದ್ಯಾಂತ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿಯೋಜನೆಯಡಿಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ದುಡಿದ ಕೂಲಿ ಕಾರ್ಮಿಕರಿಗೆ ಸುಮಾರು ೪೫ ದಿನಗಳಿಂದ ಕೂಲಿ ಹಣಬಿಡುಗಡೆ ಮಾಡದೆ ಇರುವುದರಿಂದ ಯುಗಾದಿ ಹಬ್ಬಕ್ಕೆ ಬೇವು ಬೆಲ್ಲ ಬದಲು ಬರಿ ಬೇವಿನ ಕಹಿ ರುಚಿ ತೋರಿಸಿದಂತಾಗಿದೆ. ಉದ್ಯೋಗ ಖಾತ್ರಿಯೋಜನೆಯಡಿ ದುಡಿಮೆ ಮಾಡಿದ ಕೂಲಿಕಾರರಿಗೆ ಸುಮಾರು ೪೫ ದಿನಗಳಿಂದ ಕೂಲಿ ಹಣ ಬಿಡುಗಡೆ ಮಾಡದೆ ಇರುವುದರಿಂದ ಕೂಲಿ ಕಾರ್ಮಿಕರು ಕೂಲಿಗಾಗಿ ಎದುರು ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ.


ಗ್ರಾಮೀಣ ಕೂಲಿ ಕಾರ್ಮಿಕರನ್ನು ಗುಳೆ ಹೋಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರಕಾರ ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ರಸ್ತೆ, ಚರಂಡಿ, ಅಂಗನವಾಡಿ, ಶಾಲೆ, ಸರಕಾರಿ ಶಾಲೆಗಳಲ್ಲಿ ಹೈಟೆಕ್ ಶೌಚಾಲಯ, ರೈತರ ಜಮೀನಿನಲ್ಲಿ ಬುದು ನಿರ್ಮಾಣ,ಕೃಷಿಹೊಂಡ. ಜಾನುವಾರು ಶೆಡ್, ರೇಷ್ಮೆ, ಬಾಳೆ, ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ದುಡಿದ ಕೂಲಿ ಕಾರ್ಮಿಕರಿಗೆ ಕೂಲಿ ಹಣ ಹಾಗೂ ಸಾಮಾಗ್ರಿ ವಿತರಣೆ ಮಾಡಿದ ಹಣವೂ ಬಿಡುಗಡೆ ಮಾಡದೆ ಇರುವುದು ಕೂಲಿ ಕಾರ್ಮಿಕರಿಗೆ ಅಕ್ರೋಶಕ್ಕೆ ಕಾರಣವಾಗಿದ್ದು ಸರಕಾರಗಳ ವಿದ್ದು ಇಡಿ ಶಾಪ ಹಾಕುವಂತಾಗಿದೆ.


ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ದೋಗ ಖಾತರಿ ಯೋಜನೆಯಡಿಯಲ್ಲಿ ಕೂಲಿಕಾರರಿಗೆ ನೇರವಾಗಿ ಕೂಲಿ ಕಾರ್ಮಿಕರ ಖಾತೆಗೆ ವಿತರಣೆ ವಿಳಂಬವಾದರೆ ಸಂಬAಧಿಸಿದ ಅಧಿಕಾರಿಗಳು, ನೌಕರರು, ಕೂಲಿ ಮೊತ್ತಕ್ಕೆ ಶೇ೦.೦೫ ರಷ್ಟು ದಂಡ ಹಾಕಿ ಕೊಡ ಬೇಕೆಂಬನಿಯವಿದೆ. ಆದರೆ ಸರಕಾರವೇ ಕೂಲಿ ಹಣ ವಿಳಂಬ ಮಾಡಿದರೆ ದಂಡ ಕಟ್ಟುವವರುಯಾರು ?ಎಂಬ ಪ್ರಶ್ನೆ ತಲೆದೋರಿದ್ದು ಕೂಲಿ ಕೆಲಸ ಮಾಡಿ ಸುಮಾರು ಎರಡು ತಿಂಗಳು ಗಡಿ ತಲುಪಲು ಬಂದರೂ ಕೂಲಿ ಹಣ ಬಿಡುಗಡೆ ಮಾಡದೆ ಇರುವುದರಿಂದ ಕೂಲಿ ಕಾರ್ಮಿಕರು ಯುಗಾದಿ ಹಬ್ಬಕ್ಕೆ ಬಟ್ಟೆ ಹಾಗೂ ದಿನಸಿ ಸಾಮಾಗ್ರಿಗಳ ಖರೀದಿಗೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
2022-23 ನೇ ಸಾಲಿನ ನರೇಗಾ ಕೂಲಿ ಹಾಗೂ ಸಾಮಾಗ್ರಿ ಹಣ ಬಾಕಿ.
ಚಳ್ಳಕೆರೆ ಕೂಲಿ 55.69ಲಕ್ಷ ರೂ, ಸಾಮಾಗ್ರಿ 497.39 ಲಕ್ಷ ರೂ, ಚಿತ್ರದುರ್ಗ ಕೂಲಿ 46. 35 ಲಕ್ಷ , ಸಾಮಾಗ್ರಿ 275.30 ಲಕ್ಷ ರೂ, ಹಿರಿಯೂರು ಕೂಲಿ 110.7 ಲಕ್ಷ ಸಾಮಾಗ್ರಿ 703.76ಲಕ್ಷ, ಹೊಳಲ್ಕೆರೆ ಕೂಲಿ 120. 96 ಲಕ್ಷ, ಸಾಮಾಗ್ರಿ734. 55 ಲಕ್ಷ, ಹೊಸದುರ್ಗ ಕೂಲಿ 47.53 ಲಕ್ಷ, ಸಾಮಾಗ್ರಿ 526. 61 ಲಕ್ಷ, ಮೊಳಕಾಲ್ಮೂರು ಕೂಲಿ124,74 ಲಕ್ಷ, ಸಾಮಾಗ್ರಿ2.66 ಲಕ್ಷ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿಯಲ್ಲಿ ಮಾಡಿದ ವಿವಿದ ಕಾಮಗಾರಿಗೆ ಕೂಲಿ 505.98 ಲಕ್ಷ ರೂ ಸಾಮಾಗ್ರಿ 2869. 39 ಲಕ್ಷ ಒಟ್ಟು 3386. 39 ಲಕ್ಷ ರೂಗಳನ್ನು ಸರಕಾರ ಅನುದಾನ ಬಿಡುಗಡೆ ಮಾಡಬೇಕಿದೆ.
ಈಗಲಾದರೂ ಸರಕಾರ ನರೇಗಾ ಯೋಜನೆಯಡಿಯಲ್ಲಿ ಬಾಕಿ ಇರುವ ಕೂಲಿ ಹಾಗೂ ಸಾಮಾಗ್ರಿ ಬಿಲ್ ಬಿಡುಗಡೆ ಮಾಡುವುದೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page