ದೇವಾಲಯಗಳು-ಭವನಗಳು ದೇಶದ ಭವ್ಯ ಸಂಸ್ಕೃತಿ ಸಂಸ್ಕಾರ,ಪರಂಪರೆ ಪರಿಚಯಿಸುವ ಕೇಂದ್ರವಾಗಬೇಕು ಆದಿಚುಂಚನಗಿರಿಯಮಠದ ಶ್ರೀಸೌಮ್ಯನಾಥಸ್ವಾಮೀಜಿ

by | 15/02/24 | ಸುದ್ದಿ


ಹಿರಿಯೂರು:
ಯಾವುದೇ ಧಾರ್ಮಿಕತೆಯನ್ನು ಬಿಂಬಿಸುವ ದೇವಾಲಯಗಳು, ಮಂದಿರಗಳು ಮತ್ತು ಸಮುದಾಯ ಭವನಗಳು ಈ ದೇಶದ ಭವ್ಯ ಸಂಸ್ಕೃತಿ, ಸಂಸ್ಕಾರ, ಪರಂಪರೆಯನ್ನು ಪರಿಚಯಿಸುವ ಕೇಂದ್ರಗಳಾಗಬೇಕು ಎಂಬುದಾಗಿ ಆದಿಚುಂಚನಗಿರಿ ಮಠದ ಶ್ರೀಸೌಮ್ಯನಾಥಸ್ವಾಮೀಜಿ ಹೇಳಿದರು.
ನಗರದ ಹೊರವಲಯದಲ್ಲಿ ಯೋಗಿನಾರಾಯಣ ತಾಲೂಕು ಬಲಿಜ ಸಂಘ ನಿರ್ಮಿಸಿರುವ ದೇಗುಲ-ಬಲಿಜ ಶ್ರೇಯ ಭವನ ಲೋಕಾರ್ಪಣೆ ಸಮಾರಂಭದ ದಿವ್ಯಸಾನ್ನಿಧ್ಯವನ್ನು ವಹಿಸಿ, ಅವರು ಮಾತನಾಡಿದರು.
ಈ ದೇಶದ ಬಲಿಜ ಸಮುದಾಯ ಅತ್ಯಂತ ಶ್ರಮಿಕ ಸಮುದಾಯವಾಗಿದ್ದು, ಈ ಸಮುದಾಯದ ಜನರು ಉತ್ತಮ ಸಂಸ್ಕಾರ, ಭವ್ಯ ಪರಂಪರೆ, ಸೇವಾ ಮನೋಭಾವ, ಶ್ರಮ ಸಂಸ್ಕೃತಿಯ ಪ್ರತೀಕವಾಗಿದ್ದು, ಸಮುದಾಯದ ಪ್ರತಿಯೊಬ್ಬರೂ ಸಮಾಜದ ಪ್ರಗತಿ ಜೊತೆ ಮಾನವೀಯಮೌಲ್ಯ ಬೆಳವಣಿಗೆಗೆ ಒತ್ತು ನೀಡಬೇಕು ಎಂದರಲ್ಲದೆ,
ಈ ಬಲಿಜ ಸಮುದಾಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಮುಂದುವರೆಯಲು ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ, ಅಕ್ಷರ ಜ್ಞಾನದ ಜೊತೆಗೆ ಸಮಾಜಮುಖಿ ಚಿಂತನೆಗಳನ್ನು ಬೆಳೆಸಬೇಕು. ಇದರಿಂದ ಭವಿಷ್ಯದಲ್ಲಿ ಸರಿಯಾದ ಮಾರ್ಗ ಅನುಸರಿಸುತ್ತಾರೆ ಎಂಬುದಾಗಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಮಾತನಾಡಿ, ಪ್ರೀತಿ ವಿಶ್ವಾಸ, ನಂಬಿಕೆ, ಸಮಾಜಮುಖಿ ಚಿಂತನೆ ಸೇವಾಮನೋಭಾವಕ್ಕೆ ಮತ್ತೊಂದು ಹೆಸರೇ ಬಲಿಜ ಸಮಾಜ, ಈ ಸಮಾಜ ತಾಲೂಕಿನಲ್ಲಿ ದೊಡ್ಡಸಮುದಾಯಗಳ ಜೊತೆ ಅವಿನಾಭಾವ ಸಂಬಂಧ ಹೊಂದುವ ಮೂಲಕ ಸೌಹಾರ್ದತೆಯ ಬದುಕು ಕಟ್ಟಿಕೊಂಡಿದ್ದು, ಶ್ರಮಸಂಘಟನೆಯಿಂದ ಬಲಿಜ ಶ್ರೇಯಭವನ ನಿರ್ಮಿಸಿರುವುದು ಮಾದರಿ ಕಾರ್ಯ ಎಂಬುದಾಗಿ ಹೇಳಿದರು.
ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಮಾತನಾಡಿ, ಯೋಗಿನಾರಾಯಣ ಸ್ವಾಮಿಯವರನ್ನು ಯಾವುದೇ ಒಂದು ಜಾತಿಜನಾಂಗಕ್ಕೆ ಸೀಮಿತವಾದವರಲ್ಲ, ಸಮಾಜಮುಖಿ ಚಿಂತನೆಗಳ ಮೂಲಕ ಸಮಾಜದ ಎಲ್ಲಾ ವರ್ಗದ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಮಾಜ ಪರಿವರ್ತನೆಗಾಗಿ ಶ್ರಮಿಸಿದ ಮಹಾನ್ ಚೇತನ ಎಂಬುದಾಗಿ ಹೇಳಿದರು.
ಗೌರಿಗದ್ದೆ ಶ್ರೀವಿನಯಗುರೂಜಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಆ ಮಕ್ಕಳಲ್ಲಿ ದೇಶಭಕ್ತಿ, ದೇಶಪ್ರೇಮ ಬೆಳೆಸಲು ಅವಿರತವಾಗಿ ಶ್ರಮಿಸುತ್ತಿರುವ ಶಿಕ್ಷಣಪ್ರೇಮಿ ನಾ.ತಿಪ್ಪೇಸ್ವಾಮಿ ಅವರ ಸಮಾಜಮುಖಿ ಚಿಂತನೆ ಮಾದರಿಯಾಗಿದೆ. ಸಮಾಜದ ಕೆಲಸದ ಜೊತೆ ಸಮುದಾಯದ ಶ್ರೇಯೋಭಿವೃದ್ಧಿಗೆ ಸಂಕಲ್ಪ ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯನಿರ್ವಾಹಕ ನಾ.ತಿಪ್ಪೇಸ್ವಾಮಿ ಮಾತನಾಡಿ, ರಾಜ್ಯದ ಪ್ರಮುಖ ಧಾರ್ಮಿಕ-ಸಾಂಸ್ಕೃತಿಕ ಕೇಂದ್ರವಾಗಿ ಸಮಾಜದಲ್ಲಿ ಹೆಜ್ಜೆ ಗುರುತು ಮೂಡಿಸಿರುವ ಆದಿಚುಂಚನಗಿರಿಮಠ, ಆರೋಗ್ಯ,ಶಿಕ್ಷಣ, ಪರಿಸರ ಕಾಳಜಿ, ಪರಂಪರೆ ಮಕ್ಕಳಲ್ಲಿ ಸಂಸ್ಕಾರ ಜ್ಞಾನ ಬೆಳೆಸಿ ಸಮಾಜಕ್ಕೆ ನೀಡಿದ ಕೊಡುಗೆ ಅನನ್ಯ ಎಂದರು.
ಇದೇ ಸಂದರ್ಭದಲ್ಲಿ ಲಕ್ಷ್ಮಿವೆಂಕಟೇಶ್ವರ, ಮಹಾಗಣಪತಿ ಹಾಗೂ ಯೋಗಿನಾರಾಯಣಸ್ವಾಮಿ ದೇವರಬಿಂಬ ಪ್ರತಿಷ್ಟಾಪನಾ ಮಹೋತ್ಸವ ಹಾಗೂ ಹೋಮ-ಹವನ, ಬಿಂಬ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮಗಳು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಮಾಜಿ ಸಂಸದ ಜನಾರ್ದನಸ್ವಾಮಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜ್, ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್, ಡಾ.ವೇಣುಗೋಪಾಲ್, ಬಲಿಜ ಸಂಘದ ಜಿಲ್ಲಾಧ್ಯಕ್ಷ ಎಂ.ಎ ಸೇತೂರಾಂ, ತಾಲೂಕಾಧ್ಯಕ್ಷ ಎನ್.ತಿಮ್ಮಾಶ್ರೇಷ್ಠಿ, ಚಿದಾನಂದ್, ವಿ.ಸೂರ್ಯನಾರಾಯಣ, ಎಚ್.ವಿ.ವೆಂಕಟೇಶ್, ಎಂ.ಬಿ.ನರೇಂದ್ರಬಾಬು, ಅಶೋಕ್, ಬಿ.ಎನ್.ಪ್ರಕಾಶ್, ಎಂ.ಜಯಣ್ಣ, ಆನಂದ ಶ್ರೇಷ್ಠಿ, ನಗರಸಭೆ ಮಾಜಿ ಅಧ್ಯಕ್ಷ ಟಿ.ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page