ದೇಶಕ್ಕೆ ಬೃಹತ್ ಸಂವಿಧಾನವನ್ನು ನೀಡಿದಂತ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ರಿಗೆ ಸಲ್ಲುತ್ತದೆ :ಎಸ್.ಚೈತ್ರ .

by | 21/12/23 | ಸುದ್ದಿ


ಹಿರಿಯೂರು :
ಈ ದೇಶದ ನೊಂದಜನರಿಗೆ, ಶೋಷಿತರಿಗೆ, ಮಹಿಳೆಯರಿಗೆ, ಸಮಾನತೆ ಸ್ವಾತಂತ್ರ್ಯ ಸಾಮಾಜಿಕನ್ಯಾಯ ಒದಗಿಸುವ ನಿಟ್ಟಿನಲ್ಲಿ ದೇಶದಲ್ಲಿ ಬೃಹತ್ ಸಂವಿಧಾನವನ್ನು ನೀಡಿದಂತ ಕೀರ್ತಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಸಲ್ಲುತ್ತದೆ ಎಂಬುದಾಗಿ ಪೊಲೀಸ್ ಉಪ ಅಧೀಕ್ಷಕರಾದ ಶ್ರೀಮತಿ ಎಸ್.ಚೈತ್ರ ಹೇಳಿದರು.
ತಾಲ್ಲೂಕಿನ ಐಮಂಗಲ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿತ್ರದುರ್ಗ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವದ ಸುಮಾರು 70 ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ, ಜೀವಪರ, ಮಾನವಪರ ಮತ್ತು ಮನುಷ್ಯತ್ವಪರ ಇರುವ ಸಂವಿಧಾನವನ್ನು ನೀಡಿ ವ್ಯಕ್ತಿ ಗೌರವ ದೇಶದ ಏಕತೆ ಸಹೋದರತೆಯ ಭಾವವನ್ನು ಬೆಳೆಸಿ ಸಮಗ್ರತೆಯ ಭಾರತವನ್ನು ಕಟ್ಟಿದರರಲ್ಲದೆ, ದೇಶದಲ್ಲಿ ವಾಸಿಸುವ ಎಲ್ಲಾ ಮಹಿಳೆಯರಿಗೆ ಮತದಾನದ ಹಕ್ಕನ್ನು ನೀಡಿ ರಾಜಕೀಯವಾಗಿ ಸಬಲೀಕರಣಗೊಳ್ಳಲು ಕಾರಣರಾದವರು
ಅಂಬೇಡ್ಕರ್ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ನೀಡಿದ್ದು, ಸಂವಿಧಾನದ ಆಶಯವಾಗಿದೆ ಸಂವಿಧಾನದ ರಚನಾ ಸಮಿತಿಯಲ್ಲಿ 284 ಜನ ಒಟ್ಟು ಸದಸ್ಯರಿದ್ದು ಇದರಲ್ಲಿ 15 ಜನ ಸ್ತ್ರೀಯರು ಪಾಲ್ಗೊಂಡಿರುವುದು ಅವಿಸ್ಮರಣೀಯವಾಗಿದೆ ಎಂಬುದಾಗಿ ಹೇಳಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ಹಾಗೂ ಚಿಂತಕ ಕೆ.ರಾಮಚಂದ್ರಪ್ಪ ಮಾತನಾಡಿ, ಅವಮಾನ, ಅಪಮಾನ ಸ್ವತಃ ಅನುಭವಿಸಿ ತಮಗೆ ಬಂದ ಕಷ್ಟ ದೇಶದ ಯಾವ ಪ್ರಜೆಗೂ ಬರಬಾರದೆಂದು ಚಿಂತಿಸಿ, ಹಣದ ಅಭಾವದ ಮಧ್ಯೆಯೂ ಛಲ ಬಿಡದೇ ನಿರಂತರವಾಗಿ ಓದುವ ಮೂಲಕ ವಿಶ್ವಜ್ಞಾನಿಯಾಗಿ ಸಾರ್ವಭೌಮ ಮತ್ತು ಜಾತ್ಯಾತೀತ ಭಾರತವನ್ನು ಕಟ್ಟಿದರು ಎಂದರಲ್ಲದೆ,
ಮಹಿಳಾ ಮೀಸಲಾತಿಗಾಗಿ ಹಿಂದು ಕೋಡ್ ಬಿಲ್ಲನ್ನು ರಚಿಸಿ, ಲೋಕಸಭೆಯಲ್ಲಿ ಮಂಡಿಸಿ, ಅದು ವಿಫಲವಾದಾಗ ತಮ್ಮ ಬೆಂಬಲಕ್ಕೆ ಯಾರೂ ನಿಲ್ಲದೇ ಹೋದಾಗ ಅತ್ಯಂತ ಮನನೊಂದು ಕೇಂದ್ರ ಕಾನೂನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದೇಶದ ಏಕೈಕ ನಿಷ್ಠಾವಂತ ರಾಜಕಾರಣಿ ಎಂದರೆ ಡಾ. ಬಿ.ಆರ್ ಅಂಬೇಡ್ಕರ್ ಅವರು ಮಾತ್ರ ಎಂಬುದಾಗಿ ಅವರು ಹೇಳಿದರು.
ಡಾ. ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದ ತಾಲ್ಲೂಕು ಸಂಚಾಲಕರಾದ ರಂಗಸ್ವಾಮಿಸಕ್ಕರ ಮಾತನಾಡಿ, ಭೂಮಿ, ಶಿಕ್ಷಣ, ನೀರು, ಜೀವವಿಮೆ ರಾಷ್ಟ್ರೀಕರಣವಾಗಬೇಕು ಅದು ದೇಶದ ಪ್ರತಿಯೊಬ್ಬರಿಗೂ ಸಮಾನವಾಗಿ ಹಂಚಿಕೆ ಆಗಬೇಕು ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು ಆದರೆ ಸಂವಿಧಾನ ಅಳವಡಿಸಿ 75 ವರ್ಷ ಕಳೆದರೂ ಅದು ಇನ್ನೂ ಮರೀಚಿಕೆಯಾಗಿ ಉಳಿದಿರುವುದು ವಿಷಾದನೀಯ ಸಂಗತಿ ಎಂದರಲ್ಲದೆ,
ದೇಶದಲ್ಲಿ ನಿರುದ್ಯೋಗ ಬಡತನ ಹಸಿವು ನಿರಂತರವಾಗಿ ಕಾಡುತ್ತಿದ್ದು, ಭೂಮಿ ಮತ್ತು ಶಿಕ್ಷಣ ದುಬಾರಿಯಾಗುತ್ತಾ ಬಂದಿದೆ, ಸಾಮಾನ್ಯ ಜನರಿಗೆ ಅದು ದಕ್ಕದೆ ಹಾಗೆ ಉಳಿದಿದೆ ಆದುದರಿಂದ ಅಂಬೇಡ್ಕರ್ ಅವರ ಚಿಂತನೆಗಳನ್ನು ಸೀಮಿತ ದೃಷ್ಟಿಕೋನದಲ್ಲಿ ನೋಡದೆ ಸಮಷ್ಠಿಭಾವದಿಂದ ನೋಡಿದಾಗ ಮಾತ್ರ ಸಮಾನತೆಯ ಭಾರತವನ್ನು ಕಟ್ಟಲು ಸಾಧ್ಯವಿದೆ ಎಂಬುದಾಗಿ ಹೇಳಿದರು
ಇದೇ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಆಶಾ, ಕಾವ್ಯ, ಯಮುನಾ, ಆಶುಭಾಷಣ ಸ್ಪರ್ಧೆಯಲ್ಲಿ ಸ್ವಾತಿ, ದರ್ಶನ್, ಆಶಾ, ಕವನ ವಾಚನ ಸ್ಪರ್ಧೆಯಲ್ಲಿ ಸೋನು, ಶೋಭಾ, ವೇದಾ, ರಸಪ್ರಶ್ನೆ ಸ್ಪರ್ಧೆಯಲ್ಲಿ ಸ್ಪಂದನಾ, ಧನುಷ್, ಪವಿತ್ರ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ಪಡೆದುಕೊಂಡರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ರಾಜ್ಯಶಾಸ್ತ್ರ ಉಪನ್ಯಾಸಕರಾದ ಎಂ.ರಮೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಹರ್ತಿಕೋಟೆ ಮಹಾಸ್ವಾಮಿ, ಮಹಮ್ಮದ್ ಷಕೀಲ್, ಎಚ್.ಎಸ್.ಲೀಲಾವತಿ, ಎಸ್.ಕೆ.ಮಂಜುನಾಥ್, ರೇಖಾ, ಕೆ.ಯಮುನಾ, ಲಲಿತ ಸೇರಿದಂತೆ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page