ಚಳ್ಳಕೆರೆ: ದೇಶದಲ್ಲಿ ಸಂವಿಧಾನ ಯಥಾವತ್ತಾಗಿ ಜಾರಿಗೆ ಬರಬೇಕಾದರೆ ಬಹುಜನ ಸಮಾಜವಾದಿ ಪಕ್ಷದಿಂದ ಮಾತ್ರ ಸಾಧ್ಯ ಪಕ್ಷವು ಯಾವುದೇ ಪ್ರಣಾಳಿಕೆಯನ್ನು ಘೋಷಣೆ ಮಾಡದೆ ಸಂವಿಧಾನವನ್ನು ಜಾರಿಗೊಳಿಸುವುದನ್ನು ಇಟ್ಟುಕೊಂಡಿರುವುದರಿಂದ ಜನತೆ ಈ ಬಾರಿ ದೇಶದ ಲೋಕಸಭಾ ಚುನಾವಣೆಯಲ್ಲಿ ಭೋಜನ ಸಮಾಜವಾದಿ ಪಕ್ಷಕ್ಕೆ ಹೆಚ್ಚಿನ ಸ್ಥಾನವನ್ನು ನೀಡಲಿದ್ದಾರೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್ ಚಕ್ರವರ್ತಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ ಇದುವರೆಗೂ ಆಡಳಿತ ನಡೆಸಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಸಂವಿಧಾನವನ್ನು ಬದಲಾವಣೆ ಮಾಡುವ ವಿಚಾರವಾಗಿ ಮಾತುಗಳನ್ನು ಆಡುತ್ತಾರೆ ಅಲ್ಲದೆ ಕೇಂದ್ರದ ಬಿಜೆಪಿ ಸರ್ಕಾರ ಕೋಮುವಾದಿತನವನ್ನು ದೇಶದಲ್ಲಿ ಬಿತ್ತುತ್ತಿದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ಕೊಂಡೊಯುತ್ತಿದೆ. ಇದರಿಂದಾಗಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನತೆ ಹಾಗೂ ಹಿಂದುಳಿದ ವರ್ಗಗಳು ಇಂದಿಗೂ ಸಹ ಅಭಿವೃದ್ಧಿ ಕಾಣದೆ ಹಿಂದೆ ಉಳಿದಿವೆ ನಾನು ಈಗಾಗಲೇ ಚುನಾವಣೆ ಪ್ರಯುಕ್ತ ಜಿಲ್ಲೆಯ ಎಂಟು ಕ್ಷೇತ್ರಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಮಾಡಿದ್ದು ಜನತೆ ಈ ಬಾರಿ ಬಹುಜನ ಸಮಾಜವಾದಿ ಪಕ್ಷಕ್ಕೆ ಹೆಚ್ಚಿನ ಮತ ನೀಡುವ ವಿಶ್ವಾಸವಿದ್ದು ಚುನಾವಣೆಯಲ್ಲಿ ಜಯಗಳಿಸಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಕನಸು ಹೊಂದಿದ್ದೇನೆ ಎಂದು ತಿಳಿಸಿದರು.
ಪಕ್ಷದ ಮುಖಂಡ ಪ್ರಕಾಶ್ ಮಾತನಾಡಿ ಬಹುಜನ ಸಮಾಜವಾದಿ ಪಕ್ಷವು 543 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದ್ದು ರಾಜ್ಯದ ಜನತೆಪಕ್ಷದ ಪರ ಒಲವು ಹೊಂದಿದ್ದಾರೆ ಆಡಳಿತ ನಡೆಸುತ್ತಿರುವ ಪಕ್ಷಗಳು ಓದಿದ ಯುವಕರಿಗೆ ಕೆಲಸ ನೀಡದೆ ನಿರುದ್ಯೋಗ ಸಮಸ್ಯೆಯನ್ನು ಹೆಚ್ಚಿಸುತ್ತಿವೆ ಜೆಎನ್ ಯು ನಂತಹ ವಿಶ್ವವಿದ್ಯಾನಿಲಯಗಳಲ್ಲಿ ಪಿ ಎಚ್ ಡಿ ಪದವಿ ಓದಿದ್ದರು ಸಹ ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ವಹಿಸಿ, ದೇಶವನ್ನು ಲೂಟಿ ಮಾಡುತ್ತಿದ್ದಾರೆ ಇದರಿಂದಾಗಿ ದೇಶದ ಜನತೆ ಹಾಗೂ ಯುವ ಮತದಾರರು ಸಮಾಜವಾದಿ ಪಕ್ಷದ ಪರ ಒಲವು ಹೊಂದಿದ್ದು ಪಕ್ಷ ಈ ಬಾರಿ ಹೆಚ್ಚಿನ ಸ್ಥಾನ ಗಳಿಸುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಗುರುಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments