ದೊರೆಗಳಹಟ್ಟಿಯಲ್ಲಿ ಅದ್ದೂರಿ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆ

by | 06/02/24 | ಸುದ್ದಿ


ನಾಯಕನಹಟ್ಟಿ:: ಸಮೀಪದ ನಲಗೇತನಹಟ್ಟಿ ಗ್ರಾ.ಪಂ. ವ್ಯಾಪ್ತಿಯ ದೊರೆಗಳಹಟ್ಟಿಯಲ್ಲಿ ಮಂಗಳವಾರ ಶ್ರೀ ಚೌಡೇಶ್ವರಿ ದೇವಿ ಜಾತ್ರೋತ್ಸವ ಸಂಭ್ರಮ ಸಡಗರದಿಂದ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರಗಿತು.

ಇದೆ ವೇಳೆ ಗ್ರಾ. ಪಂ. ಸದಸ್ಯ ಬಂಗಾರಪ್ಪ ಮಾತನಾಡಿ ನಮ್ಮ ದೊರೆಗಳಹಟ್ಟಿ ಹಿಂದೆ ಪಾಳೇಗಾರರು ಆಳ್ವಿಕೆ ಮಾಡಿದಂತಹ ಗ್ರಾಮ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ದೇವಿ ಹಲವು ಪವಾಡಗಳ ಹಾಗೂ ಮಹಿಮೆಗಳ ಮೂಲಕ ಪ್ರಸಿದ್ಧಿ ಪಡೆದಿರುವ ಶ್ರೀ ಚೌಡೇಶ್ವರಿ ದೇವಿ ಜಾತ್ರೆ ಸುತ್ತಮುತ್ತಲ ಗ್ರಾಮಗಳ ಆರಾಧ್ಯ ದೇವತೆಯಾಗಿದ್ದಾಳೆ ಇನ್ನೂ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆಯನ್ನು ಗ್ರಾಮಸ್ಥರು ಪ್ರತಿ ವರ್ಷವೂ ಆಚರಣೆ ಮಾಡುತ್ತಾ ಬಂದಿದ್ದಾರೆ.
ಬುಡಕಟ್ಟು ಸಂಸ್ಕೃತಿ ಗ್ರಾಮದಲ್ಲಿ ಇಂದಿಗೂ ಅನಾವರಣಗೊಳ್ಳಲಿದೆ ಎಂದರು.

ನಂತರ ಇದೇ ವೇಳೆ ಪಿ ಟಿ ಕಾರ್ತಿಕ್ ಪಾಳೆಗಾರ್ ಮಾತನಾಡಿ ಪೂರ್ವಜರ ಕಾಲದಿಂದಲೂ ಇಲ್ಲಿ ಬುಡಕಟ್ಟು ಸಂಸ್ಕೃತಿಯ ಆಚಾರ-ವಿಚಾರಗಳು ಇನ್ನೂ ಜೀವಂತವಾಗಿರಲು ಶ್ರೀ ಚೌಡೇಶ್ವರಿ ದೇವಿ ಕಾರಣ ಪ್ರತಿ ವರ್ಷವೂ ನಮ್ಮ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ದೇವಿಯ ಅಗ್ನಿ ಕೆಂಡೋತ್ಸವ ನಡೆಯುತ್ತದೆ, ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಈ ಒಂದು ಜಾತ್ರೆಯಲ್ಲಿ ಆಗಮಿಸಿರುವುದು ತುಂಬಾ ಸಂತೋಷದ ವಿಷಯ ಶ್ರೀ ಚೌಡೇಶ್ವರಿ ದೇವಿ ಆಶೀರ್ವಾದ ಸದಾ ಈ ಗ್ರಾಮದ ಜನರ ಮೇಲೆ ಮತ್ತು ಸುತ್ತಮುತ್ತಲ ಹಳ್ಳಿಯ ಜನರ ಮೇಲೆ ಇರಲಿ ಎಂದು ಶುಭ ಹಾರೈಸಿದರು.


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಬಂಗಾರಯ್ಯ, ಕೆ ಬಿ ಬೋಸಯ್ಯ, ಡಿ. ಬಿ. ಬೋರಯ್ಯ, ಚಂದ್ರಶೇಖರ್, ಪಿ ಟಿ ರುದ್ರಮುನಿ, ನಿರಂಜನ್ ಮೂರ್ತಿ ,ಪಿ ಎಚ್ ತಿಪ್ಪೇಸ್ವಾಮಿ, ಆರ್ ಎಸ್ ರವೀಂದ್ರ, ವೈ ಒ. ಮಂಜುನಾಥ್ (ಗೂಳಿ), ವೈ ಬಿ ತಿಪ್ಪೇಸ್ವಾಮಿ, ಮಣಿಕಂಠ, ರಂಗಸ್ವಾಮಿನಾಯಕ, ಚಿನ್ನಬೋಸಯ್ಯ, ವೈ ಸಿ ಮಂಜುನಾಥ್, ದೊರೆ ಬಸವರಾಜ್ ನಾಯಕ, ಬಿ ಶ್ರೀಧರ್ ,ಪೂಜಾರಿ ಮಲ್ಲಿಕಾರ್ಜುನ್, ಗೋಪಾಲಸ್ವಾಮಿ, ಮನೋಜ್ ಸೇರಿದಂತೆ ಗ್ರಾಮಸ್ಥರು ಸುತ್ತಮುತ್ತಲಿನ ಹಳ್ಳಿಗಳ ಗ್ರಾಮಸ್ಥರು ಭಕ್ತಾದಿಗಳು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page