ತುಮಕೂರು ನ.30 ಸಿದ್ಧರಬೆಟ್ಟದ ಅರಣ್ಯ ನರ್ಸರಿ ಹತ್ತಿರದ ರಸ್ತೆ ತಿರುವಿನಲ್ಲಿ ದ್ವಿಚಕ್ರ ವಾಹನ ಅಪಘಾತವಾಗಿ ಪೊಲೀಸ್ ಕಾನ್ಸ್ಟೆಬಲ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.
ಸಿದ್ಧರಬೆಟ್ಟದಲ್ಲಿ ಮದುವೆಯ ಆರತಕ್ಷತೆಗೆ ಬುಧವಾರ ರಾತ್ರಿ ಬಂದಿದ್ದ ಮೂವರು, ಮದುವೆ ಮುಗಿಸಿಕೊಂಡು ಗುರುವಾರ ಹಿಂದಿರುಗುವಾಗ ರಸ್ತೆ ತಿರುವಿನಲ್ಲಿ ದ್ವಿಚಕ್ರ ವಾಹನ ಅಪಘಾತವಾಗಿದೆ.ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಪೊಲೀಸ್ ಠಾಣೆ ಕಾನ್ಸ್ಟೆಬಲ್ ಮಹೇಶ್ ಹಾಗೂ ಚೆನ್ನಿಗಯ್ಯ ಮೃತಪಟ್ಟಿದ್ದಾರೆ. ಭರತ್ ಎಂಬುವರು ಗಾಯಗೊಂಡಿದ್ದು ಕೊರಟಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಒಂದೇ ಬೈಕ್ನಲ್ಲಿ ಬರುತ್ತಿದ್ದರು. ಎಲ್ಲರೂ ಮಧುಗಿರಿ ತಾಲ್ಲೂಕಿನ ಗರಣಿ ಗ್ರಾಮದವರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments