ಚಿತ್ರದುರ್ಗ ಮಾರ್ಚ್27:
ಮಾರ್ಚ್ 27 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಐಚ್ಚಿಕ ಕನ್ನಡ ವಿಷಯದ ಪರೀಕ್ಷೆಗೆ 7 ವಿದ್ಯಾರ್ಥಿಗಳು ಮತ್ತು ಲೆಕ್ಕಶಾಸ್ತ್ರ ವಿಷಯದ ಪರೀಕ್ಷೆಗೆ 220 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 227 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಐಚ್ಚಿಕ ಕನ್ನಡ ವಿಷಯದಲ್ಲಿ 163 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, 156 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 7 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಲೆಕ್ಕಶಾಸ್ತ್ರ ವಿಷಯದಲ್ಲಿ 4000 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, 3780 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 220 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ಇರುವುದಿಲ್ಲ. ಮಾರ್ಚ್ 28ರಂದು ಯಾವುದೇ ಪರೀಕ್ಷೆ ಇರುವುದಿಲ್ಲ. ಮಾರ್ಚ್ 29ರಂದು ಸಮಾಜಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಷಯದ ಪರೀಕ್ಷೆ ಇರುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು ತಿಳಿಸಿದ್ದಾರೆ.
=======
ದ್ವಿತೀಯ ಪಿಯು ಪರೀಕ್ಷೆ: 227 ವಿದ್ಯಾರ್ಥಿಗಳು ಗೈರು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments