ನಗರಕ್ಕೆ ಆಗಮಿಸಿರುವ ಭವ್ಯ ಶ್ರೀರಾಮ ವಿಗ್ರಹ ಮತ್ತು ಅಯೋಧ್ಯೆಯಲ್ಲಿ ಪೂಜೆ ಮಾಡಲ್ಪಟ್ಟ ಅಕ್ಷತೆ ಮೆರವಣಿಗೆ.

by | 28/12/23 | ಸುದ್ದಿ


ಹಿರಿಯೂರು :
ಈ ದೇಶದ ಜನರ ಬಹುಸಂಖ್ಯಾತ ಹಿಂದುಗಳ ಹಲವಾರು ವರ್ಷಗಳ ನಿರಂತರ ಹೋರಾಟದ ಫಲವಾಗಿ ಇದೀಗ ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಎಂದೇ ಪ್ರಸಿದ್ಧನಾದ ಶ್ರೀರಾಮಚಂದ್ರನ ವಿಗ್ರಹ ಪ್ರತಿಷ್ಠಾಪನೆಗೆ ಸಮಯ ಕೂಡಿಬಂದಿರುವುದು ನಾಡಿನ ಪ್ರತಿಯೊಬ್ಬರಿಗೂ ಅತ್ಯಂತ ಸಂತಸ ಪಡುವಂತಹ ವಿಷಯವಾಗಿದೆ ಎಂಬುದಾಗಿ ಶಾರದಾಶ್ರಮದ ಮಾತಾಶ್ರೀ ಚೈತನ್ಯಮಯಿಯವರು ಹೇಳಿದರು.
ನಗರದಲ್ಲಿ ಜನವರಿ 22 ರಂದು ಅಯೋಧ್ಯೆಯಲ್ಲಿ ಮರ್ಯಾದೆ ಪುರುಷ ನಮ್ಮ ನಿಮ್ಮೆಲ್ಲರ ಆರಾಧ್ಯ ದೈವ ಶ್ರೀರಾಮಚಂದ್ರನ ದ್ವಿಗ್ರಹ ಪ್ರತಿಷ್ಠಾಪನೆ ನಡೆಯುತ್ತಿರುವ ಪ್ರಯುಕ್ತ ತಾಲ್ಲೂಕಿಗೆ ಆಗಮಿಸಿದ ಮರ್ಯಾದೆ ಪುರುಷ ಅಯೋಧ್ಯ ಶ್ರೀರಾಮ ಮತ್ತು ಅಯೋಧ್ಯೆಯಲ್ಲಿ ಪೂಜೆ ಮಾಡಲ್ಪಟ್ಟ ಅಕ್ಷತೆಯ ಭವ್ಯ ಮೆರವಣಿಗೆಯನ್ನು ಸ್ವಾಗತಿಸಿ, ಅವರು ಮಾತನಾಡಿದರು.
ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಶ್ರೀರಾಮನ ಅಕ್ಷತೆ ಹಾಗೂ ಫೋಟೋ ಮತ್ತು ಕರಪತ್ರಗಳನ್ನು ನಮ್ಮ ಕಾರ್ಯಕರ್ತರ ಮೂಲಕ ರಾಜ್ಯಾದ್ಯಂತ ಪ್ರತಿ ಜಿಲ್ಲಾ ಮುಖ್ಯ ಕೇಂದ್ರಗಳ ಮೂಲಕ ಪ್ರತಿ ತಾಲ್ಲೂಕು ಮತ್ತು ಗ್ರಾಮಗಳಲ್ಲಿ ಪ್ರತಿ ರಾಮಭಕ್ತರ ಮನೆಮನೆಗಳಿಗೆ ತಲುಪಿಸಲಾಗುತ್ತಿದೆ ಎಂಬುದಾಗಿ ಅವರು ಹೇಳಿದರು.
ಶ್ರೀ ರಾಮನ ಭವ್ಯ ಚಿತ್ರವನ್ನು, ಹಾಗೂ ಅಯೋಧ್ಯೆಯಿಂದ ತಂದಂತಹ ಶ್ರೀರಾಮನ ಪೂಜಾಅಕ್ಷತೆಯನ್ನು ಅಲಂಕಾರಗೊಂಡ ರಥದ ಮೂಲಕ ನಗರದ ರಂಜಿತ ಹೋಟೆಲ್ ನಿಂದ ನಗರದ ಮುಖ್ಯರಸ್ತೆಯ ಮೂಲಕ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನಕ್ಕೆ ವಾದ್ಯಮೇಳಗಳ ಮೂಲಕ ತರಲಾಯಿತು. ಈ ಸಂದರ್ಭದಲ್ಲಿ ಭಕ್ತಜನಕೋಟಿ ಶ್ರೀರಾಮನಿಗೆ ಭಕ್ತಿಸಮರ್ಪಿಸಿದರು.
ಈ ಸಂದರ್ಭದಲ್ಲಿ ಹಿರಿಯೂರಿನ ಶ್ರೀರಾಮನ ಅಪಾರ ಭಕ್ತರು, ನಗರದ ಪ್ರಮುಖ ಭಜನಾ ಮಂಡಳಿಗಳ ಮಹಿಳಾ ಸದಸ್ಯರು ಹಾಗೂ ವಿವಿಧ ಸಂಘಸಂಸ್ಥೆಗಳ ಪುರುಷರು ಹಾಗೂ ಮಹಿಳೆಯರು ಸಮವಸ್ತ್ರ ಧರಿಸಿಕೊಂಡು, ಭಜನೆ ಮಾಡುವ ಮೂಲಕ ಪ್ರತಿಯೊಬ್ಬರು ಶ್ರೀರಾಮಚಂದ್ರ ಪ್ರಭುವಿಗೆ ಜೈ ಎಂಬ ಘೋಷಣೆ ಮಾಡುತ್ತ ಮೆರವಣಿಗೆಯನ್ನು ಕಣ್ತುಂಬಿಕೊಂಡರು.
ಈ ಕಾರ್ಯಕ್ರಮದಲ್ಲಿ ಅಯೋಧ್ಯ ಶ್ರೀರಾಮ ಕರವೇ ಸೇವಕರು, ವಿಶ್ವ ಹಿಂದೂ ಪರಿಷತ್, ನಗರದ ಎಲ್ಲಾ ಜನಾಂಗೀಯ ಸಂಘ ಸಂಸ್ಥೆಗಳ ಮುಖ್ಯಮಂತ್ರಿ, ಭಜನಾ ಮಂಡಳಿಗಳ ಮಹಿಳಾ ಸದಸ್ಯರುಗಳು ಸೇರಿದಂತೆ ಶ್ರೀನಿವಾಸ್, ವೆಂಕಟೇಶ್, ವಿಶ್ವನಾಥ್, ಚರಣ್, ಸತೀಶ್, ಪ್ರಶಾಂತ್ ಅಭಿಲಾಶ್, ಪ್ರಭಾಕರ್, ಬಿಜೆಪಿ ಮುಖಂಡರಾದ ಲಕ್ಷ್ಮೀಕಾಂತ್, ಗೋವರ್ಧನ್, ಗೋವಿಂದಣ್ಣ, ಎಚ್.ಎಸ್.ಅಮರನಾಥ್, ಅರುಣ್, ಪುರುಷೋತ್ತಮ್, ವಿಶ್ವೇಶ್ವರಯ್ಯ, ರವಿಶಂಕರ್ , ಎಂ.ಎಸ್.ರಾಘವೇಂದ್ರ, ಎಚ್.ವೆಂಕಟೇಶ್, ಎ.ರಾಘವೇಂದ್ರ, ನಗರದ ಪ್ರಮುಖರಾದ ಹೆಚ್.ಎಸ್. ನಾಗರಾಜ್ ಗುಪ್ತಾ, ಮಂಜುನಾಥ್ ಗೂಗಲ್ ವಾಲೆ, ಎಲ್.ಆನಂದಶೆಟ್ಟಿ, ಬಿ.ಕೆ.ನಾಗಣ್ಣ, ಎಸ್.ಜೋಗಪ್ಪ, ಟಿ.ಮಲ್ಲೇಶಪ್ಪ, ರಂಗನಾಥಪ್ಪ, ಮಹಾಬಲೇಶ್ವರ ಶೆಟ್ಟಿ, ಪಿ.ಆರ್.ಸತೀಶ್ ಬಾಬು ನಗರದ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page