ಚಳ್ಳಕೆರೆ ಮಾ.1.ಪ್ರತಿಯೊಬ್ಬ ವ್ಯಕ್ತಿಯೂ ಅವರ ಕುಟುಂಬದ ಆಧಾರ ಸ್ತಂಭವಾಗಿರುತ್ತಾರೆ ಪ್ರತಿ ಜೀವಕ್ಕೂ ಬೆಲೆಯಿದೆ ಆದ್ದರಿಂದ ವಾಹನ ಸವಾರರು ತಮ್ಮ ಮನೆಯಿಂದ ಹೊರಡುವಾಗಲೇ ಹೆಲ್ಮೆಟ್ ಧರಿಸಿಕೊಂಡು ಸಂಚಾರ ಮಾಡುವುದು ಕಡ್ಡಾಯವಾಗಿದೆ ಎಂದು ಠಾಣೆಯ ಪಿ ಐ. ಕೆ.ಕುಮಾರ್ ಕಿವಿಮಾತು ಹೇಳಿದರು.
ನಗರದ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ದ್ವಿಚಕ್ರ ವಾಹನ ಸವಾರರಿಗೆ ದಂಡ ವಿಧಿಸುವುದು ನಮ್ಮ ಕೆಲಸವಲ್ಲ ಇತ್ತೀಚಿನ ದಿನಗಳಲ್ಲಿ ಅಪಘಾತದ ಅಂಕಿ ಸಂಖ್ಯೆಗಳ ಪ್ರಕಾರ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಜೀವ ಕಳೆದುಕೊಂಡಿರುವವರ ಸಂಖ್ಯೆ ಹೆಚ್ಚಾಗಿದೆ.
ಅವರ ಕುಟುಂಬಗಳು ಇಂದು ಪಡಬಾರದ ಕಷ್ಟ ಪಡುತ್ತಿದ್ದಾರೆ. ಆದ್ದರಿಂದ ಜೀವದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ, ಆದ್ದರಿಂದ ದಯವಿಟ್ಟು ಎಲ್ಲಾ ಸಾರ್ವಜನಿಕರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು ಠಾಣೆ ವ್ಯಾಪ್ತಿಯ ಸುಮಾರು 60 ಹಳ್ಳಿಗಳ ವ್ಯಾಪ್ತಿಯಲ್ಲಿ ಹತ್ತು ಸಾವಿರ ಕರ ಪತ್ರಗಳನ್ನು ಹಂಚುವ ಮೂಲಕ ಗ್ರಾಮೀಣ ಭಾಗದಿಂದ ನಗರಕ್ಕೆ ಬರುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ವಾಹನ ಚಾಲನೆಗೆ ಪರವಾನಿಗೆ, ವಾಹನ ವಿಮೆ ಹಾಗೂ ದಾಖಲೆಗೊಂದಿಗೆ ಬಂದರೆ ಮಾತ್ರ ವಾಹನ ಬಿಡಲಾಗುವುದು ಇಲ್ಲವಾದಲ್ಲಿ ನೋಟಿಸ್ ಜಾರಿಮಾಡಿ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ತಿಳಿಸಿದರು.
18 ವರ್ಷದೊಳಗಿನ ಮಕ್ಕಳಿಗೆ ವಾಹನ ನೀಡಿದರೆ ಅಂತಹ ಪೋಷಕರಿಗೆ ದಂಢವಿಧಿಸುವ ಜತೆಗೆ ವಾಹನ ಜಪ್ತಿ ಮಾಡಲಾಗವುದು. ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ 18 ವರ್ಷದೊಳಿಗೆ ಮಕ್ಕಳು ವಾಹನ ತಂದರೆ ಅಂತಹ ವಾಹಣಗಳನ್ನು ಜಪ್ತಿ ಮಾಡಲಾಗುವುದು ಎಂದು ಕಡಖ್ ಎಚ್ಚರಿಕೆ ನೀಡಿದ್ದಾರೆ.
ಬಸ್ ನಿಲ್ದಾಣ, ಸಾರ್ವಜನಿಕ ಸ್ಥಳ, ಸೇರಿದಂತೆ ವಿವಿಧ ಸ್ಥಳಗಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಆಟೋ ಚಾಲಕರಿಗೆ ದಂಢವಿಧಿಸಲಾಗುವುದ ಸಂಚಾರಿ ನಿಯಮ ಪಾಲನೆ ಸಾರ್ವಜನಿಕರಿಗೆ ಅರಿವು ಮೂಡಿಸಲು ದಾನಿಗಳ ನೆರವಿನಿಂದ ನೆಹರು ವೃತ್ತದಲ್ಲಿ ಧ್ವನಿ ವರ್ಧಕವನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಸಲ್ಲಿ ಪಿಎಸ್ ಐಗಳಾದ ಸತೀಶ್ ನಾಯ್ಕ, ಧರೆಪ್ಪ, ಶಿವರಾಜ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
0 Comments