ಹಿರಿಯೂರು :
ನಗರಸಭೆ ವ್ಯಾಪ್ತಿಯಲ್ಲಿ ಬೀದಿದೀಪ ಅಳವಡಿಕೆ ಮತ್ತು ನಿರ್ವಹಣೆ ದೊಡ್ಡ ಸವಾಲಾಗಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಸರ್ಕಾರದ ಮಟ್ಟದಲ್ಲಿ ನಿಯಮಾವಳಿಗಳಿಗೆ ಬದಲಾವಣೆ ತರಬೇಕು ಎಂಬುದಾಗಿ ನಗರಸಭೆ ಸದಸ್ಯರಾದ ಬಿ.ಎನ್. ಪ್ರಕಾಶ್ ಮನವಿ ಮಾಡಿದರು.
ನಗರದ ನಗರಸಭೆ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ನೇತೃತ್ವದಲ್ಲಿ ನಡೆಸಲಾದ ನಗರಸಭೆ ಸದಸ್ಯರು, ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಗರದಲ್ಲಿ ಹತ್ತಾರು ನೂತನ ಬಡಾವಣೆಗಳು ತಲೆ ಎತ್ತಿವೆ, ಜನಸಂಖ್ಯೆ 70ಸಾವಿರಕ್ಕೆ ದಾಟಿದೆ, ಆದರೆ ಪೌರಕಾರ್ಮಿಕರ ಸಂಖ್ಯೆ ಮೊದಲಿನಷ್ಟೇ ಇರುವುದರಿಂದ, ನಗರದ ಸ್ವಚ್ಛತೆ ದೊಡ್ಡ ಸವಾಲಾಗಿದೆ, ಜನಸಂಖ್ಯೆಗೆ ಅನುಗುಣವಾಗಿ ಪೌರಕಾರ್ಮಿಕರನ್ನು ನೇಮಿಸಬೇಕು, ರಾಜಕಾಲುವೆ ದುರಸ್ತಿಪಡಿಸಬೇಕು, ರಸ್ತೆಗಳಲ್ಲಿ ಗುಂಡಿಬಿದ್ದಿದ್ದು, ಮುಚ್ಚಿಸಬೇಕು ಎಂಬುದಾಗಿ ಸದಸ್ಯರು ಮನವಿ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಮಾತನಾಡಿ, ನಗರದಲ್ಲಿರುವ ವಾರ್ಡ್ ಗಳಿಗೆ ತಲಾ 30ರಂತೆ ಒಂದು ಸಾವಿರ ಎಲ್.ಇಡಿ ಬಲ್ಬ್ ಗಳನ್ನು ಸ್ವಂತ ಖರ್ಚಿನಿಂದ ಕೊಡಿಸುತ್ತೇವೆ, ಈ ಬಗ್ಗೆ ದೂರುಗಳು ಬರದಂತೆ ಸದಸ್ಯರು ಕೆಲಸ ಮಾಡಿ ಉದ್ಯಾನಗಳ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ, ಕಸವಿಲೇವಾರಿಗೆ ಹೆಚ್ಚಿನ ಒತ್ತು ಕೊಡಬೇಕು
ಅಲ್ಲದೆ ಕಸ ವಿಲೇವಾರಿ ಸಂಬಂಧ ನಗರದ ಜನರಲ್ಲಿ ಜಾಗೃತಿ ಮೂಡಿಸಿ, ನಗರದಲ್ಲಿ ನಡೆಯುವ ಕಳವು ತಡೆಯಲು ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿಯ ಕ್ಯಾಮೆರಾಗಳನ್ನು ಅಳವಡಿಸಲು ಸೂಕ್ತಕ್ರಮ ಕೈಗೊಳ್ಳಬೇಕು ಎಂಬುದಾಗಿ ಸಚಿವರು ನಗರಸಭೆ ಸದಸ್ಯರಿಗೆ ಸೂಚನೆ ನೀಡಿದರಲ್ಲದೆ,
ನಗರದಲ್ಲಿ ರಸ್ತೆ ಅಭಿವೃದ್ಧಿ, ರಾಜಕಾಲುವೆ ಸರಿಪಡಿಸಲು ತಗುಲುವ ವೆಚ್ಚದ ಪಟ್ಟಿಯನ್ನು ನೀಡಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂಬುದಾಗಿ ಸಚಿವರಾದ ಡಿ.ಸುಧಾಕರ್ ಭರವಸೆ ನೀಡಿದರು.
ಈ ಸಭೆಯಲ್ಲಿ ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್, ನಗರಸಭೆ ಸದಸ್ಯರುಗಳಾದ ಈ.ಮಂಜುನಾಥ್, ಈರಲಿಂಗೇಗೌಡ, ಜಿ.ಎಸ್.ತಿಪ್ಪೇಸ್ವಾಮಿ, ವಿಠಲ್ ಪಾಂಡುರಂಗ, ಗುಂಡೇಶ್ ಕುಮಾರ್, ಶಂಷುನ್ನೀಸಾ, ರತ್ನಮ್ಮ, ಅಂಬಿಕಾ, ಶಿವಣ್ಣ, ರಮೇಶ್, ಸಾಧತ್ ಉಲ್ಲಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...
0 Comments